ನೀರಿನ ಘಟಕಕ್ಕೆ ವಿದ್ಯುತ್‌ ಕಡಿತ -ಎಚ್ಚರಿಕೆ

ತಾಪಂ ಅಧ್ಯಕ್ಷೆ ಫರ್ಜಾನ್‌ ಗೌಸ್‌ ಅಜಂ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

Team Udayavani, Jan 22, 2021, 6:00 PM IST

SANDOOR WATER ISSSUE

ಸಂಡೂರು: ಮೂರು ತಿಂಗಳ ಹಿಂದೆಯೇ ಸೂಚಿಸಿದ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ತಕ್ಷಣವೇ ಕಾಮಗಾರಿ ಮುಗಿ. ಇಲ್ಲವಾದಲ್ಲಿ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌. ಪ್ರಕಾಶ್‌ ಜೆಸ್ಕಾಂ ಅಧಿಕಾರಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಸದಸ್ಯ ಹೊಸಗೇರಪ್ಪ ಅವರು ಶುದ್ಧ ಘಟಕ ಮತ್ತು ಕುಡಿಯುವ ನೀರಿನ ಪಂಪ್‌ಸೆಟ್‌ ಗಳ ವಿದ್ಯುತ್‌ ಕಡಿತ ಮತ್ತು ಸಂಪರ್ಕ ನೀಡದೇ ಇರುವ ಬಗ್ಗೆ ಪ್ರಶ್ನಿಸಿದಾಗ, ಇಒ ಅವರು ಸರ್ಕಾರದ ಶುದ್ಧ ನೀರಿನ ಘಟಕಗಳಿಗೆ ನೀರು ಪೂರೈಸಲು ವಿದ್ಯುತ್‌ ಕಡಿತ ಮಾಡಿದರೆ ಜನರ ಗತಿ ಏನು. ತಕ್ಷಣವೇ ಕ್ರಮ ವಹಿಸಲು ಸೂಚಿಸಿದರು. ಸಭೆಯಲ್ಲಿ ತಹಶೀಲ್ದಾರ್‌ ಎಚ್‌.ಜಿ. ರಶ್ಮಿ ಅವರು ತಮ್ಮ ಇಲಾಖೆಯ ಸಮಸ್ಯೆಗಳ ಬಗ್ಗೆ ಉತ್ತರಿಸಿ ಗ್ರಾಮ ಪಂಚಾಯಿತಿಯಲ್ಲಿ ವಿಎಗಳು ಇಲ್ಲದಿರುವುದು, 101 ಸಕಾಲ ಯೋಜನೆ ಜಾರಿಯಾಗದೇ ಇರುವುದು, ಪಾಣಿ ಮತ್ತು ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಅಧಾರ್‌ ಕಾರ್ಡ್‌ ತಿದ್ದುಪಡಿ ಬಗ್ಗೆ ತಕ್ಷಣ ಕ್ರಮ ವಹಿಸಲಾಗುವುದು. ಅಲ್ಲದೆ ಪಡಿತರ ಚೀಟಿ, ವಿಧವೆಯರಿಗೆ ವೇತನ ನೀಡುವ ಬಗ್ಗೆಯೂ, ಮನೆಗಳ ಮಂಜೂರು ಅದ ಬಗ್ಗೆಯೂ ಮಾಹಿತಿ ನೀಡಿದರು.

ಇದನ್ನೂ ಓದಿ : ಬಿಎಸ್‌ವೈ ಕೊಟ್ಟ ಮಾತು ಹುಸಿಯಾಗದಿರಲಿ

ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಐ.ಆರ್‌. ಅಕ್ಕಿ ಮಾಹಿತಿ ನೀಡಿ, ಹಂತ ಹಂತವಾಗಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಹಳ್ಳಿಯ ವಿದ್ಯಾರ್ಥಿಗಳು ಶಾಲೆಗೆ ಬರಲು ಕಷ್ಟವಾಗಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಅವರಿಗೆ ವಿನಂತಿ ಮಾಡಲಾಗಿದೆ. ಅಲ್ಲದೆ ವಸತಿ ನಿಲಯಗಳನ್ನು ತೆರೆಯಲು ಸಹ ಅವಕಾಶ ಸಿಕ್ಕಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಾಳಜಿ ವಹಿಸಿ ಪರೀಕ್ಷೆಗೆ ತಯಾರಿ ನಡೆಸಲಾಗುತ್ತಿದೆ ಎಂದರು.

ಅಧ್ಯಕ್ಷೆ ಫರ್ಜಾನ್‌ ಗೌಸ್‌ ಅಜಂಡಿ ಪ್ರಶ್ನಿಸಿ, ತಾಲೂಕಿನ ಕೃಷ್ಣಾನಗರ ಗ್ರಾಮದ ಹತ್ತಿರದ ಚೆಕ್‌ ಡ್ಯಾಂ ಕಾಮಾಗಾರಿ ಸರಿಯಾಗಿ ನಡೆಯುತ್ತಿಲ್ಲ. ತಕ್ಷಣ ಬಿಲ್‌ ತಡೆ ಹಿಡಿಯಬೇಕು ಎಂದು ಸೂಚಿಸಿದರು. ಕೃಷ್ಣಾನಗರದ ಗ್ರಾಮನತ್ತು ಜಾಗದಲ್ಲಿ ಖಾಸಗಿಯವರು ಅನುಮತಿ ಇಲ್ಲದೆ ಮನೆ ಕಟ್ಟುತ್ತಿದ್ದು ತಡೆಯುವವರೆ ಇಲ್ಲವೇ ಎಂದು ಸದಸ್ಯ ಸುಭಾನ್‌ ಸಾಬ್‌ ಇತರರು ಪ್ರಶ್ನಿಸಿದದಾಗ ತಹಶೀಲ್ದಾರ್‌ ರಶ್ಮಿ ಅವರು ಈ ಬಗ್ಗೆ ತಾಪಂನವರು ಮತ್ತು ಶಿಕ್ಷಣ ಇಲಾಖೆ ಜಂಟಿಯಾಗಿ ಕೇಸು ದಾಖಲಿಸಬೇಕು. ಆದರೆ ಅದು ಆಗಿಲ್ಲ, ನಾನೇ ಖುದ್ದು ಈ ಬಗ್ಗೆ ಕ್ರಮ ವಹಿಸುತ್ತೇನೆ ಎಂದರು.

ಸದಸ್ಯ ಕುಮಾರಸ್ವಾಮಿ, ಹನುಮಂತಪ್ಪ, ಹೊಸಗೇರಪ್ಪ, ರಾಮಾಂಜಿನಿ, ಮತ್ತು ಗಂಗಮ್ಮ ಅವರು ತಮ್ಮ ಕ್ಷೇತ್ರಗಳಲ್ಲಿ ಅಧಿಕಾರಿಗಳು ಕ್ರಿಯಾ ಯೋಜನೆಯಾಗಲಿ, ಅನುಪಾಲನಾ ವರದಿಯಾಗಲಿ ನೀಡುತ್ತಿಲ್ಲ, ಕೆಲಸಗಳು ಆಗುತ್ತಿಲ್ಲ. ನಾವು ಸಭೆ ನಡೆಸುವುದು ವ್ಯರ್ಥ್ಯ ಎಂದು ಅಸಮಾಧಾನ ಹೊರಹಾಕಿದರು. ಸಿಡಿಪಿಒ ಪ್ರೇಮಮೂರ್ತಿ ಮಾತನಾಡಿದರು.

ಇದನ್ನೂ ಓದಿ ; ರೈತರ ಅನುಕೂಲಕ್ಕಾಗಿ ಕ್ವಿಂಟಲ್‌ ತೊಗರಿಗೆ 6 ಸಾವಿರ ರೂ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.