ಈರುಳ್ಳಿ ಬೆಳೆ ನಷ್ಟ : ಪರಿಹಾರಕ್ಕೆ ಮನವಿ
Team Udayavani, Jun 27, 2020, 1:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಂಡೂರು: ತಾಲೂಕಿನಾದ್ಯಂತ ಬೆಳೆದ ಈರುಳ್ಳಿ ಬೆಳೆ ನಷ್ಟವಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ರೈತರಿಗೂ ಸಹ ಕಾರ್ಮಿಕರ ಕೊರತೆ ಮತ್ತು ಮಾರುಕಟ್ಟೆಯ ಸಮಸ್ಯೆಯಿಂದ ತೊಂದರೆಯಾಗಿದ್ದು, ಹಿಂಗಾರು ಹಾಗೂ ಮುಂಗಾರು ಬೆಳೆಯ ಸರಿಯಾದ ಸಮೀಕ್ಷೆ ಮಾಡುವ ಮೂಲಕ ಈರುಳ್ಳಿ ಬೆಳೆ ಪರಿಹಾರ ಕೊಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಬಿ.ಎಂ. ಉಜ್ಜಿನಯ್ಯ ಒತ್ತಾಯಿಸಿದರು.
ಪಟ್ಟಣದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಅವರಿಗೆ ಬೆಳೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿ ಮಾತನಾಡಿದ ಅವರು, ರೈತರು ಸಾಲ ಮಾಡಿ ಈರುಳ್ಳಿ ಬೆಳೆದರು. ಅಲ್ಲದೆ ಎಕರೆಗೆ 50 ರಿಂದ 60 ಸಾವಿರ ರೂ. ಖರ್ಚು ಮಾಡಿದ್ದಾರೆ. ಮಾರುಕಟ್ಟೆಯ ಕೊರತೆಯಿಂದ ಬೆಳೆದ ಬೆಳೆ ನಷ್ಟವಾಗಿ ವಿಪರೀತ ತೊಂದರೆ ಅನುಭವಿಸಿದ್ದಾರೆ ಎಂದರು.
ರೈತ ಶಂಕ್ರಪ್ಪ ಮಾತನಾಡಿ, ಈರುಳ್ಳಿ ಕಟಾವು ಮಾಡುವ ವೇಲೆ ಲಾಕ್ಡೌನ್ ಅಗಿದ್ದು ಬೆಳೆ ಹೊಲದಲ್ಲಿಯೇ ಕೊಳೆತು ಹೋಗಿದೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ತಾಲೂಕಿನ ಎಲ್ಲಾ ಈರುಳ್ಳಿ ಬೆಳೆಗಾರರಿಗೆ ಹಿಂಗಾರು, ಮುಂಗಾರು ಎನ್ನದೆ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು. ರೈತರಾದ ಶಂಕ್ರಪ್ಪ, ಕೆ.ಶ್ರೀಕಾಂತ, ಟಿ.ಜಗದೀಶ್, ಜಿ.ಕರಿಬಸಪ್ಪ, ಬಿ.ಎಂ.ಉಜ್ಜಿನಯ್ಯ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ