ಸಂಡೂರು ಪುರಸಭೆ ಅಧ್ಯಕ್ಷ್ಯ ಗಾದಿಗೆ ಗುದ್ದಾಟ

ಮೀಸಲಾತಿ ಘೋಷಣೆ: ಅಧ್ಯಕ್ಷ ಹುದ್ದೆಗೆ ಕೈ ಅಭ್ಯರ್ಥಿಗಿಲ್ಲ ಅವಕಾಶ; ಬಿಜೆಪಿಗೆ ವರದಾನ

Team Udayavani, Mar 16, 2020, 12:52 PM IST

16-March-9

ಸಂಡೂರು: ಪಟ್ಟಣದ ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಅಧ್ಯಕ್ಷಗಾದಿಗೆ ತೀವ್ರ ಪೈಪೋಟಿ ನಡೆಯುತ್ತಿದೆ. ಬಹುಮತವನ್ನು ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದಿದ್ದು, ಆದರೆ ಘೋಷಿಸಿರುವ ಮೀಸಲಾತಿಯಲ್ಲಿ ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್‌ ದಿಂದ ಯಾವುದೇ ಅಭ್ಯರ್ಥಿ ಇಲ್ಲದ ಕಾರಣ ಬಿಜೆಪಿ ಬಹುಮತವಿಲ್ಲದೆ ಅಧ್ಯಕ್ಷ ಸ್ಥಾನ ಪಡೆಯುವಂತಾಗಿದೆ.

ಪುರಸಭೆ ಅಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗ (ಎ) ಮಹಿಳೆ ಮೀಸಲಾತಿ ಪ್ರಕಟವಾಗಿದೆ. ಉಪಾಧ್ಯಕ್ಷ ಹುದ್ದೆಗೆ ಸಾಮಾನ್ಯ ಮೀಸಲಾತಿ ಘೋಷಣೆಯಾಗಿದೆ. ಆದರೆ ಈ ಮೀಸಲಾತಿಯಂತೆ ಕಾಂಗ್ರೆಸ್‌ದಿಂದ ಮೀಸಲಾತಿಯಂತೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಶಾಲತಾ ಸೋಮಪ್ಪ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯಿಂದ ಸ್ಪರ್ಧಿಸಿದ ಅಭ್ಯರ್ಥಿ ದುರುಗಮ್ಮ ಕೆ. 137 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಇವರಿಗೆ ಅಧ್ಯಕ್ಷ ಹುದ್ದೆ ಸಿಗಲಿದೆ. ಆದರೆ ಒಟ್ಟು 23 ಕ್ಷೇತ್ರಗಳಲ್ಲಿ ಬಿಜೆಪಿ 10, ಕಾಂಗ್ರೆಸ್‌ 12, ಪಕ್ಷೇತರ 1 ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಆದರೆ ಬಹುಮತ ಇಲ್ಲದ ಬಿಜೆಪಿ ಅಧ್ಯಕ್ಷ ಹುದ್ದೆ ಪಡೆಯುವಂತಾಗಿರುವುದು ಕಾಂಗ್ರೆಸ್‌ನ್ನು ಇಕ್ಕಟ್ಟಿಗೆ ಸಿಲುಕಿಸಿದೆ.  ಮೀಸಲಾತಿ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಿಳಿಸಿದ್ದಾರೆ.

ಹಿನ್ನೆಲೆ: ಈ ಹಿಂದೆ ತಾಲೂಕು ಪಂಚಾಯಿತಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ಕಾಂಗ್ರೆಸ್‌ 8 ಸ್ಥಾನ, ಬಿಜೆಪಿ 10 ಸ್ಥಾನ ಗೆದ್ದರೂ ಕಾಂಗ್ರೆಸ್‌ ಮೀಸಲಾತಿಯನ್ನು ತಮ್ಮ ಪಕ್ಷದ ಅಭ್ಯರ್ಥಿಗೆ ಸಿಗುವಂತೆ ತಂದಿದೆ ಎಂದು ಬಿಜೆಪಿಯವರು ಅರೋಪಿಸಿದ್ದರು. ಆದರೂ ಬಹುಮತವಿಲ್ಲದ ಕಾಂಗ್ರೆಸ್‌ ಇಂದು ಅಧ್ಯಕ್ಷ ಹುದ್ದೆಯನ್ನು ಪಡೆದುಕೊಂಡಿದೆ. ಅದೇ ರೀತಿಯ ತಂತ್ರಗಾರಿಕೆ ಮೇಲ್ನೋಟಕ್ಕೆ ಬಿಜೆಪಿಯಿಂದ ಕಂಡುಬರುತ್ತಿದೆ. ಆದರೆ ತಾಲೂಕು ಪಂಚಾಯಿತಿ ಮೀಸಲಾತಿ ಸರಣಿಯಲ್ಲಿ ಈ ಹಿಂದೆ ಪಡೆದಿರಲಿಲ್ಲ. ಆದ್ದರಿಂದ ಕಾಂಗ್ರೆಸ್‌ ಸಮರ್ಥನೆ ಮತ್ತು ಬಳಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಈಗ ಪುರಸಭೆಯಲ್ಲಿ ಈಗಾಗಲೇ ಅಧ್ಯಕ್ಷ ಹುದ್ದೆಯನ್ನು ಕೇವಲ 3 ವರ್ಷಗಳ ಹಿಂದೆಯೇ ಪಡೆದುಕೊಂಡು ಅಧ್ಯಕ್ಷರಾಗಿದ್ದ ಮಾಜಿ ಪುರಸಭೆ ಸದಸ್ಯರಾದ ಅಶಾಲತಾ ಸೋಮಪ್ಪ ಕಾಂಗ್ರೆಸ್‌ ದಿಂದ ಅಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು.

ಆದ್ದರಿಂದ ಮೀಸಲಾತಿ ಸರಣಿಯಲ್ಲಿ ಇದು ಪುನರಾವರ್ತನೆಯಾಗಿದೆ ಎಂದು ಕಾಂಗ್ರೆಸ್‌ ಕೋರ್ಟ್‌ ಮೆಟ್ಟಿಲೇರುವ ಎಲ್ಲ ಪ್ರಯತ್ನಗಳನ್ನು ಮಾಡದೇ ಬಿಡಲಾರದು ಎಂಬುದಾಗಿ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಒಟ್ಟಾರೆಯಾಗಿ ಸಂಡೂರು ಪುರಸಭೆ ಅಧಿಕಾರದ ಗದ್ದುಗೆ ಗುದ್ದಾಟ ಜೋರಾಗಲಿದೆ.

ಮೀಸಲಾತಿ ಬಗ್ಗೆ ಪೂರ್ಣ ಮಾಹಿತಿ ದೊರೆತಿಲ್ಲ. ಶಾಸಕರ ಗಮನಕ್ಕೆ ತಂದು ಹೈಕಮಾಂಡ್‌ ತೀರ್ಮಾನದಂತೆ ನಿರ್ಧರಿಸಲಾಗುತ್ತದೆ.
ಹಿರೇಮಠ,
ಶಾಸಕರ ಅಪ್ತ ಸಹಾಯಕ

ನಮ್ಮ ಪಕ್ಷದಿಂದ ಇಂಥ ಯಾವುದೇ ರೀತಿಯ ಪ್ರಯತ್ನಪೂರ್ವಕವಾಗಿ ಮೀಸಲಾತಿ ತಂದಿಲ್ಲ. ಸರ್ಕಾರಿ ನಿಯಮದ ಪ್ರಕಾರವೇ ಅಧ್ಯಕ್ಷ ಹುದ್ದೆ ಪಡೆಯುತ್ತೇವೆ.
ಜಿ.ಟಿ. ಪಂಪಾಪತಿ,
ಬಿಜೆಪಿ ತಾಲೂಕು ಅಧ್ಯಕ್ಷ್ಯ

„ಬಸವರಾಜ ಬಣಕಾರ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.