ಕೃಷ್ಣಾ ನಗರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಭೇಟಿ
Team Udayavani, May 10, 2020, 2:34 PM IST
ಸಂಡೂರು: ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಇಡೀ ಜಿಲ್ಲಾಡಳಿತ, ತಾಲೂಕು ಆಡಳಿತದ ನೇತೃತ್ವದಲ್ಲಿ ಆರೋಗ್ಯ ರಕ್ಷಣೆ ಮತ್ತು ಚಿಕಿತ್ಸಾ ಕ್ರಮ ಕೈಗೊಳ್ಳುತ್ತಿದೆ. ಆದ್ದರಿಂದ ಜನ ಮನೆಯಲ್ಲಿಯೇ ಇರಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ಆಹಾರ ಧಾನ್ಯಗಳು, ತರಕಾರಿ, ಔಷಧ, ದನಕರುಗಳಿಗೆ ಮೇವಿನ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಕುಲ್ ಭರವಸೆ ನೀಡಿದರು.
ಅವರು ತಾಲೂಕಿನ ಕೃಷ್ಣಾನಗರಕ್ಕೆ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕೆಲವು ಗ್ರಾಮಸ್ಥರು ಮೂಲಭೂತ ಅಂಶಗಳ ಬೇಕಾಗುವ ಬಗ್ಗೆ ತಿಳಿಸಿದರು. ಅದಕ್ಕೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಯಾರೂ ಆತಂಕ ಪಡಬಾರದು. ಮುನ್ನೇಚ್ಚರಿಕೆಯಾಗಿ ಬಿಸಿನೀರಿನ ಬಳಕೆ, ಸ್ವಚ್ಛತೆ ಕಾಪಾಡಿಕೊಳ್ಳುವುದು, ಮನೆಯಲ್ಲಿ ಯಾವುದೇ ಕಾರಣಕ್ಕೂ ಹೊರಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯಾರಾದರೂ ತೀವ್ರವಾದ ರೋಗಗಳಿಗೆ ತುತ್ತಾದವರು ಇದ್ದರೆ ಮಾಹಿತಿ ನೀಡಿ, ಗರ್ಭಿಣಿಯರು, ಮಕ್ಕಳ ಸೂಕ್ತ ಚಿಕಿತ್ಸೆಗೆ ಸಹ ವ್ಯವಸ್ಥೆ ಮಾಡಲಾಗುವುದು. ಸಹಕಾರ ಅತಿ ಅಗತ್ಯ, ರೋಗ ಬಂದಿದೆ ಎಂದಾಕ್ಷಣ ಸಾಯುತ್ತೇವೆ ಎನ್ನುವ ಅಂಶವನ್ನು ದೂರವಿಡಿ, ಆದರೆ ಎಚ್ಚರಿಕೆ ಅತಿ ಅಗತ್ಯವಾಗಿದೆ. ಈಗಾಗಲೇ ಇಡೀ ಗ್ರಾಮಕ್ಕೆ ಬೇಕಾಗುವ ತರಕಾರಿಗಳನ್ನು ತೋಟಗಾರಿಕೆ ಇಲಾಖೆಯವರು ಪೂರೈಸಿದ್ದಾರೆ, ಅದೇ ರೀತಿ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ತಹಶೀಲ್ದಾರ್ ರಶ್ಮಿ ಗ್ರಾಮದ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಜಿಲ್ಲಾದಿಕಾರಿಗಳಿಗೆ ತಿಳಿಸಿದರು. ಪ್ರಮುಖವಾಗಿ ಲಾಕ್ ಡೌನ್ ಮಾಡಿದ ಪ್ರದೇಶಗಳು ಮತ್ತು ವಾಹನಗಳ ಬಗ್ಗೆ, ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳು, ಕ್ವಾರಂಟೈನ್
ಮಾಡಿರುವ ಬಗ್ಗೆ, ಜಿಲ್ಲಾಸ್ಪತ್ರೆಗೆ ರೋಗಿಯನ್ನು ಕಳುಹಿಸದ ಬಗ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್