ತಾಪಂ ಸಾಮಾನ್ಯ ಸಭೆಯಲ್ಲಿ ಕೊರೊನಾ ಚರ್ಚೆ


Team Udayavani, Mar 19, 2020, 2:41 PM IST

19-March-29

ಸಂಡೂರು: ನೂತನ ಸದಸ್ಯರು ಅಧಿಕಾರಕ್ಕೆ ಬಂದು 15 ತಿಂಗಳು ಕಳೆದರೂ ಸಹ ಅಧಿಕಾರಿಗಳು ಅನುಪಾಲನಾ ವರದಿ ನೀಡುತ್ತಿಲ್ಲ. ಈ ಸಭೆಯಲ್ಲಿ ಕೊಡುತ್ತೇವೆ ಎಂದ ಅಧಿಕಾರಿ ಮುಂದಿನ ಸಭೆಗೆ ಬರುವುದಿಲ್ಲ ಏನು ಮಾಡುವುದು ಎಂದು ತಾಲೂಕು ಪಂಚಾಯಿತಿ ತಾಳೂರು ಕ್ಷೇತ್ರದ ಸದಸ್ಯ ಮೇಘನಾಥ ಪ್ರಶ್ನಿಸಿದರು.

ಅವರು ಸೋಮವಾರ ತಾಲೂಕು ಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆ ಚರ್ಚೆ ಪ್ರಾರಂಭದಲ್ಲಿಯೇ ಪ್ರಶ್ನಿಸಿ, ಬಹಳಷ್ಟು ಅಧಿ ಕಾರಿಗಳು ಸಭೆಗೆ ಹಾಜರಾಗುತ್ತಿಲ್ಲ. ತಾಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ವಿಪರೀತ ಮಾಲಿನ್ಯವಾಗಿದೆ. ಕೊರೊನಾ ವೈರಸ್‌ ದಾಳಿಯೂ ಹೆಚ್ಚಾಗುತ್ತಿದೆ. ಜಿಂದಾಲ್‌ ಕಂಪನಿಯ ವಿಮಾನ ನಿಲ್ದಾಣ, ಕಂಪನಿ ಕಾರ್ಯಕ್ಕೆ ಹೊರ ರಾಜ್ಯದ ಮತ್ತು ಬೇರೆ ದೇಶದ ಪ್ರಜೆಗಳು ಬರುತ್ತಾರೆ ಕ್ರಮವೇನು ಎಂದು ಪ್ರಶ್ನಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್‌ ಉತ್ತರಿಸಿ, ಈಗಾಗಲೇ ಎಲ್ಲ ಪಿಡಿಓಗಳಿಗೆ ಮಾಹಿತಿ ತಿಳಿಸಿದೆ. ಅಲ್ಲದೆ ತಾಲೂಕುಮಟ್ಟದ ಅಧಿಕಾರಿಗಳಿಗೂ ಸಹ ಹೇಳಲಾಗಿದೆ. ಮುಂದಿನ ಹಂತದಲ್ಲಿ ಕ್ರಮ ವಹಿಸಲಾಗುವುದು ಎಂದರು.

ತಾಪಂ ಸದಸ್ಯೆ ಗಂಗಮ್ಮ ಪ್ರಶ್ನಿಸಿ ಎಚ್ಚರಿಕೆ ವಹಿಸಿರುವುದು ಉತ್ತಮವೇ ಸರಿ, ಅದರೆ ಭುಜಂಗನಗರ, ಇತರ ಗ್ರಾಮಗಳಲ್ಲಿ ಚರಂಡಿಗಳು ತುಂಬಿ ತುಳುಕುತ್ತಿವೆ. ವಿಪರೀತ ಸೊಳ್ಳೆಗಳಾಗಿವೆ. ಯಾವಾಗ ಸ್ವಚ್ಛತೆ, ಸ್ವಚ್ಛತೆ ಕೊರತೆಯಿಂದಲೇ ರೋಗ ಹರಡಬಹುದು ಎಂದಾಗ ಇತರ ಸದಸ್ಯರೂ ಸಹ ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿಯ ಸಮಸ್ಯೆ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಐ.ಅರ್‌. ಅಕ್ಕಿ ಮಾಹಿತಿ ನೀಡಿ ಸರ್ಕಾರದ ಅದೇಶದಂತೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರೇಮಮೂರ್ತಿ ಮಾಹಿತಿ ನೀಡಿ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ರಜೆ ಘೋಷಿಸಿ ಮನೆಗಳಿಗೆ ಆಹಾರ ತಲುಪಿಸುತ್ತಿದ್ದೇವೆ, ಅದೇ ರೀತಿ ಗರ್ಭಿಣಿಯರಿಗೂ ಸಹ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಂತಿಮವಾಗಿ ಎಲ್ಲ ನೋಡಲ್‌ ಅಧಿ ಕಾರಿಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಬೇಕು. ಕೊರೊನಾ ಹರಡುವಿಕೆ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಅಧ್ಯಕ್ಷೆ ಫರ್ಜಾನ್‌ ಗೌಸ್‌ ಅಜಂ, ತಿರುಕಮ್ಮ ವೆಂಕಟೇಶ್‌, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.