ಸೆಕ್ಯೂರಿಟಿ ಗಾರ್ಡ್ ಕುಟುಂಬಕ್ಕೆ ಪರಿಹಾರಕ್ಕಾಗಿ ಪ್ರತಿಭಟನೆ
Team Udayavani, Jan 22, 2022, 8:19 PM IST
ಸಂಡೂರು: ಎನ್ಎಂಡಿಸಿ ಗಣಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಡಿವಾಳ ಟಿ. ಕೊಟ್ರಪ್ಪ 16 ಚಕ್ರದ ಅದಿರು ಲಾರಿ ಗಾಲಿಗೆ ಸಿಕ್ಕು ಸಾವನ್ನಪ್ಪಿದ್ದು ತಕ್ಷಣ ಪರಿಹಾರ ಕೊಡಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟಿಸಿತು.
ಸೆಕ್ಯೂರಿಟಿ ಗಾರ್ಡ್ ಮಡಿವಾಳ ಟಿ.ಕೊಟ್ರಪ್ಪ ಕರ್ತವ್ಯ ನಿರತನಾಗಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಎನ್ಎಂಡಿಸಿ ಅವರು ಹೈದರಾಬಾದ್ನ ಎಸ್.ಎಸ್. ಕನಸ್ಟಕ್ಷನ್ ಕಂಪನಿಯವರಿಗೆ ಹೊರಗುತ್ತಿಗೆ ನೀಡಿದ್ದರು.
ಸ್ಥಳದಲ್ಲಿಯೇ ಸಾವನ್ನಪ್ಪಿದ ಮಡಿವಾಳ ಟಿ.ಕೊಟ್ರಪ್ಪನವರ ಕುಟುಂಬಕ್ಕೆ ಯಾವುದೇ ಪರಿಹಾರ ನೀಡದೆ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಕ.ರ. ವೇ. ತಾಲೂಕು ಘಟಕದ ಅಧ್ಯಕ್ಷ (ಶಿವರಾಮೇಗೌಡ ಬಣ) ಪಿ. ರಾಜು, ಗಣಿ ಕಾರ್ಮಿಕರ ಸಂಘದ ಅಧ್ಯಕ್ಷ ಆನಂದ, ರೈತ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ. ಉಜ್ಜೀನಯ್ಯ, ಸತೀಶ್ ಜಿಲ್ಲಾಧಿ ಕಾರಿ ಪವನ್ ಕುಮಾರ ಮಲಪಾಟಿ ಅವರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಡೆಸಿದರು.
ತದನಂತರ ಮಡಿವಾಳ ಟಿ. ಕೊಟ್ರಪ್ಪನವರ ಮೃತದೇಹವನ್ನು ಸಂಡೂರಿನ ಸಾರ್ವಜನಿಕ ಆಸ್ಪತ್ರೆಗೆ ಪೋಸ್ಟ್ಮಾರ್ಟಂಗಾಗಿ ತರಲಾಯಿತು. ತದನಂತರ ಕರವೇ ರಾಜು ಅವರು ಜಿಲ್ಲಾ ಧಿಕಾರಿ ಪವನ್ ಕುಮಾರ ಮಾಲಿಪಾಟಿ ಅವರ ಜೊತೆ ಮಾತನಾಡಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸೂಚಿಸಿದರು. ಸಂಡೂರಿನ ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಜೆ 5.40 ನಿಮಿಷಕ್ಕೆ ಮೃತನ ಪೋಸ್ಟ್ಮಾಟಂ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಎಸಿ ಗ್ಯಾಸ್ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್