ಬ್ಲ್ಯಾ ಫಂಗಸ್‌ ಚಿಕಿತ್ಸೆಗೆ ಪ್ರತ್ಯೇಕ ತಂಡ


Team Udayavani, May 29, 2021, 9:59 AM IST

ಬ್ಲ್ಯಾ ಫಂಗಸ್‌ ಚಿಕಿತ್ಸೆಗೆ ಪ್ರತ್ಯೇಕ ತಂಡ

ಬಳ್ಳಾರಿ: ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದ್ದ ಕೋವಿಡ್‌ ಸೋಂಕಿನಿಂದ ತುಸು ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ “ಬ್ಲ್ಯಾಕ್‌ ಫಂಗಸ್‌’ ಹಾವಳಿ ನಿಧಾನವಾಗಿ ಹೆಚ್ಚುತ್ತಿದ್ದು, ಈ ಸೋಂಕನ್ನು ನಿಭಾಯಿಸಲು, ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ಪ್ರತ್ಯೇಕ ವೈದ್ಯರ ತಂಡವನ್ನು ರಚಿಸಲಾಗಿದೆ.

ಉಭಯ ಜಿಲ್ಲೆಗಳಲ್ಲಿ ಈವರೆಗೆ 41 ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 6 ಜನರು ಮೃತಪಟ್ಟಿದ್ದಾರೆ. ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕು ನಿಧಾನವಾಗಿ ನಿಯಂತ್ರ ಣಕ್ಕೆ ಬರುತ್ತಿರುವ ಬೆನ್ನಲ್ಲೇ ಉಭಯ ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ (ಮ್ಯೂಕೋರಮೈಕೋಸಿಸ್‌) ಪ್ರಕರಣಗಳು ವರದಿಯಾಗುತ್ತಿರುವುದು ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಿವೆ.

ಬಳ್ಳಾರಿ, ಹೊಸಪೇಟೆ, ಹರಪನಹಳ್ಳಿ, ಹಡಗಲಿ, ಕೂಡ್ಲಿಗಿ ತಾಲೂಕುಗಳಲ್ಲಿ ಈ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಪ್ರಕರಣಗಳು ಕಂಡುಬಂದಿವೆ. ಹಡಗಲಿ, ಹರಪನಹಳ್ಳಿ ಸೇರಿ ಇತರೆ ತಾಲೂಕುಗಳಲ್ಲಿ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕನ್ನು ಎದುರಿಸಲು ಸಿದ್ಧವಾಗಿರುವ ವಿಮ್ಸ್‌ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ವಿಮ್ಸ್‌ನಲ್ಲಿ ತಜ್ಞವೈದ್ಯರ ಪ್ರತ್ಯೇಕ ತಂಡವನ್ನು ರಚಿಸಿದೆ.

ಮೂರು ಹಂತದಲ್ಲಿ ಪತ್ತೆ: ಉಭಯ ಜಿಲ್ಲೆಗಳಲ್ಲಿ ನಿಧಾನವಾಗಿ ಹೆಚ್ಚಳವಾಗುತ್ತಿರುವ ಬ್ಲ್ಯಾಕ್‌ ಫಂಗಸ್‌ ಸೋಂಕು ಮೂರು ಹಂತದಲ್ಲಿ ಪತ್ತೆಯಾಗಲಿದೆ. ಕೋವಿಡ್‌ ಸೋಂಕಿತರಲ್ಲಿ, ಕೋವಿಡ್‌ ಸೋಂಕಿನಿಂದ ಗುಣಮುಖರಾದವರಲ್ಲಿ ಮತ್ತು ಸ್ಟೀರಾಯ್ಡ ಬಳಸುತ್ತಿದ್ದವರಲ್ಲಿ ಈ ಸೋಂಕು ಪತ್ತೆಯಾಗಲಿದೆ. ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಲ್ಲವಾದರೂ, ಸೋಂಕಿತರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಸೋಂಕು ಆವರಿಸಿದ್ದ ರೋಗಿಯ ಗಂಭೀರತೆಯನ್ನು ಆಧರಿಸಿ 6 ರಿಂದ 21 ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಸೋಂಕಿಗೆ ನೀಡುವ ಇಂಜೆಕ್ಷನ್‌ ದುಬಾರಿ ವೆಚ್ಚದ್ದಾಗಿದ್ದು, ಸದ್ಯಕ್ಕೆ ರಾಜ್ಯ ಸರ್ಕಾರವೇ ಪೂರೈಸುತ್ತಿದೆ ಎಂದು ವಿಮ್ಸ್‌ ನಿರ್ದೇಶಕ ಡಾ| ಗಂಗಾಧರಗೌಡ ತಿಳಿಸಿದ್ದಾರೆ.

ತಜ್ಞವೈದ್ಯರ ತಂಡ ರಚನೆ: ಬ್ಲ್ಯಾಕ್‌ ಫಂಗಸ್‌ ದೃಢಪಟ್ಟ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ನೆಗೆಟಿವ್‌ ಮತ್ತು ಪಾಸಿಟಿವ್‌ ಎಂಬ ಎರಡು ಪ್ರತ್ಯೇಕ ವಾರ್ಡ್‌ಗಳನ್ನು ತೆಗೆಯಲಾಗಿದೆ. ಈ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಮೆಡಿಸಿನ್‌, ಅನಸ್ತೇಸಿಯಾ, ಆಪ್ತಮಾಲಜಿ, ಇಎನ್‌ಟಿ, ನ್ಯೂರೊ ಸರ್ಜರಿ ಸೇರಿ ಒಟ್ಟು 6 ಜನರ ತಜ್ಞವೈದ್ಯರ ತಂಡವನ್ನು ರಚಿಸಲಾಗಿದೆ. ಈ ಎಲ್ಲ ವಿಭಾಗಗಳಿಗೆ ಸಂಬಂಧಿ ಸಿದಂತೆ ಸೋಂಕಿತರಲ್ಲಿ ಲಕ್ಷಣಗಳು ಕಾಣಿಸಲಿವೆ. ಕೆಲವೊಮ್ಮೆ ಸರ್ಜರಿ ಮಾಡುವ ಅವಶ್ಯಕತೆಯೂ ಬರಬಹುದು. ಹಾಗಾಗಿ ಈ ಎಲ್ಲ ವಿಭಾಗಗಳ ತಜ್ಞವೈದ್ಯರ ತಂಡವನ್ನು ರಚಿಸಿ, ಸೋಂಕಿತರಿಗೆ ಸ್ಥಳೀಯವಾಗಿಯೇ ಸೂಕ್ತ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದವರು ವಿವರಿಸಿದ್ದಾರೆ.

ಇಂಜೆಕ್ಷನ್‌ ಕೊರತೆ: ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ದಿನೇದಿನೆ ನಿಧಾನವಾಗಿ ಏರಿಕೆಯಾಗುತ್ತಿರುವ ಬ್ಲ್ಯಾಕ್‌ಫಂಗಸ್‌ ಸೋಂಕಿತರಿಗೆ ನೀಡುವ ಇಂಜೆಕ್ಷನ್‌ಗಳ ಕೊರತೆ ಎದುರಾಗಿದೆ. ದುಬಾರಿ ವೆಚ್ಚದ ಈ ಇಂಜೆಕ್ಷನ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆ, ವಿಮ್ಸ್‌ಗೆ ಸದ್ಯ ಸರ್ಕಾರವೇ ಪೂರೈಸುತ್ತಿದೆ. ಆದರೆ, ಆರೋಗ್ಯ ಇಲಾಖೆಯ ಬೇಡಿಕೆಯಷ್ಟು ಸರ್ಕಾರದಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಜಿಲ್ಲಾಡಳಿತದಿಂದ ತ್ವರಿತವಾಗಿ 200 ಇಂಜೆಕ್ಷನ್‌ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಿದರೆ, ಸರ್ಕಾರದಿಂದ ಕೇವಲ 10 ಇಂಜೆಕ್ಷನ್‌ಗಳು ಬಂದಿವೆ.

ಇಷ್ಟು ಕಡಿಮೆ ಇಂಜೆಕ್ಷನ್‌ಗಳನ್ನು ಹೇಗೆ ನಿಭಾಯಿಸಬೇಕು ಎಂಬುದೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವಿಮ್ಸ್‌ ಅಧಿ ಕಾರಿಗಳಿಗೆ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದ್ದು, ಇನ್ನಷ್ಟು ಇಂಜೆಕ್ಷನ್‌ಗಳನ್ನು ಕಳುಹಿಸುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 41 ಜನರಲ್ಲಿ ಬ್ಲಾಕ್‌ ಫಂಗಸ್‌ ಸೋಂಕು ದೃಢಪಟ್ಟಿದೆ. ವಿಮ್ಸ್‌ನಲ್ಲಿ 7 ಜನರಿಗೆ ಕೆಒಎಚ್‌ ಪರೀಕ್ಷೆ ಮಾಡಿಸಿದಾಗ ನಾಲ್ವರಲ್ಲಿ ಬ್ಲಾಕ್‌ ಫಂಗಸ್‌ ದೃಢಪಟ್ಟಿದೆ. ಈ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ಎರಡು ಪ್ರತ್ಯೇಕ ವಾರ್ಡ್‌ಗಳನ್ನು ತೆರೆಯಲಾಗಿದೆ. ಜತೆಗೆ ಈ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಡಿಸಿನ್‌, ಅನಸ್ತೇಸಿಯಾ, ಆಪ್ತಮಾಲಜಿ, ಇಎನ್‌ಟಿ, ನ್ಯೂರೊ ಸರ್ಜರಿ ಸೇರಿ ಒಟ್ಟು 6 ಜನರ ತಜ್ಞವೈದ್ಯರ ತಂಡವನ್ನು ರಚಿಸಲಾಗಿದೆ. ಸೋಂಕಿತರಲ್ಲಿ ರೋಗದ ತೀವ್ರತೆಯನ್ನು ಆಧರಿಸಿ 6 ರಿಂದ 21 ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. –ಗಂಗಾಧರಗೌಡ, ನಿರ್ದೇಶಕರು, ವಿಮ್ಸ್‌, ಬಳ್ಳಾರಿ.

 

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.