ಗೋವಿನಜೋಳಕ್ಕೆ ಬೆಂಬಲ ಬೆಲ ನಿಗದಿ ಮಾಡಿ


Team Udayavani, Nov 15, 2020, 5:34 PM IST

ballary-tdy-1

ಹೂವಿನಹಡಗಲಿ: ತಾಲೂಕು ಕೃಷಿ ವಿಸ್ತರಣಾ ಶಿಕ್ಷಣ ಕೇಂದದಿಂದ ತಾಲೂಕಿನ ಉತ್ತಂಗಿಗ್ರಾಮದ ಪ್ರಗತಿಪರ ರೈತರಾದ ಮುದೇಗೌಡ್ರ ಬಸವರಾಜಪ್ಪ ಇವರ ಜಮೀನಿನಲ್ಲಿಗೋವಿನಜೋಳ (ಆರ್‌ಸಿಆರ್‌ಎಹೆಚ್‌) ಬೆಳೆ ಕ್ಷೇತ್ರೋತ್ಸವ ಆಯೋಜಿಸಲಾಗಿತ್ತು. ಪ್ರಗತಿಪರ ರೈತ ಎಸ್‌.ಎಂ. ಕೃಪಾಮೂರ್ತಿ ಕ್ಷೇತ್ರೋತ್ಸವ ಉದ್ಘಾಟಿಸಿ ಮಾತನಾಡಿ, ಈ ಭಾರಿ ಮುಂಗಾರು ಮಳೆಯು ಉತ್ತಮವಾಗಿದ್ದು, ಗೋವಿನಜೋಳದಲ್ಲಿ ಹೆಚ್ಚಿನ ಇಳುವರಿ ಬರಬಹುದು. ರೈತರಿಗೆ ಉತ್ತಮ ಮಾರುಕಟ್ಟೆ ದೊರಕಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಪ್ರಗತಿಪರ ರೈತ ಬಿ.ಚಂದ್ರಪ್ಪ, ಗೋವಿನಜೋಳವು ಈ ಭಾರಿ ಅತೀ ಹೆಚ್ಚಿನ ಇಳುವರಿ ಬರಲು ಸಕಾಲಕ್ಕೆ ಉತ್ತಮ ಮಳೆ ವಾತಾವರಣವೇಕಾರಣವಾಗಿದೆ. ಸರ್ಕಾರ ಬೆಂಬಲ ಬೆಲೆಯನ್ನು ನಿಗದಿಗೊಳಿಸದೇ ಇರುವುದರಿಂದ ಉತ್ತಮ ದರ ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರವು ಆದಷ್ಟು ಬೇಗನೆ ಬೆಂಬಲ ಬೆಲೆಯನ್ನು ನಿಗದಿಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ವಿಸ್ತರಣಾ ಮುಂದಾಳುಗಳಾದ ಡಾ| ಸಿ.ಎಮ್‌. ಕಾಲಿಬಾವಿ ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಲ್ಲಿ ನೂತನವಾಗಿ ಬಿಡುಗಡೆಗೊಂಡಂಥ ಹೈಬ್ರಿಡ್‌ ಗೋವಿನಜೋಳ (ಆರ್‌ಸಿಆರ್‌ ಎಂಎಚ್‌-2) ಬರಸಹಿಷ್ಣುತೆಯನ್ನು ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು ಇಳುವರಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ರೈತರು ಈ ಹೈಬ್ರಿಡ್‌ ಗೋವಿನಜೋಳವನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರದೇಶದಲ್ಲಿ ಬೆಳೆದು ಅಧಿಕ ಇಳುವರಿಯನ್ನು ಪಡೆಯುವುದರ ಮೂಲಕ ಆರ್ಥಿಕವಾಗಿ ಸದೃಢರಾಗಬೇಕೆಂದರು.

ಗೋವಿನಜೋಳ ಸುಧಾರಿತ ಬೇಸಾಯ ಕ್ರಮಗಳಲ್ಲಿ ಗೋವಿನಜೋಳ:ತೊಗರಿ (4:2 / 6:2) ಸಾಲುಗಳ ಅಂತರ ಬೆಳೆಯುವ ರೈತರ ಆದಾಯ ವೃದ್ಧಿಸುವ ಜೊತೆಗೆ ಮಣ್ಣಿನ ಫಲವತ್ತತೆ ಸುಸ್ಥಿರವಾಗುತ್ತದೆ. ಗೋವಿನಜೋಳ ಕಟಾವಿನ ನಂತರತೊಗರಿ ಬೆಳೆ ಅಂತರ ಹೆಚ್ಚಾಗಿದ್ದಲ್ಲಿ/ಕಪ್ಪು ಜಮೀನಿನಲ್ಲಿ ಕಡಲೆ/ಕುಸುಬೆ/ಹವೀಜ (ಕೊತ್ತಂಬರಿ)/ಅಗಸೆ ಬೆಳೆಯಿಂದ ಹೆಚ್ಚಿನ ಲಾಭ ಪಡೆಯಬಹುದಾಗಿದೆ.

ಕಾರ್ಯಕ್ರಮದಲ್ಲಿ ಉತ್ತಂಗಿ ಗ್ರಾಮದ ಪ್ರಗತಿಪರ ರೈತರಾದ ಜಿ. ಸೋಮೆಶೇಖರ ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನಿಗಳು ನಮ್ಮ ಗ್ರಾಮದ ರೈತರಿಗೆ ನೂತನ ತಾಂತ್ರಿಕತೆಗಳ ಮಾಹಿತಿಯನ್ನು ಹಾಗೂ ನೂತನವಾಗಿ ಬಿಡುಗಡೆಗೊಂಡಂಥ ತಳಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ರೈತರಿಗೆ ಪರಿಚಯಿಸುತ್ತಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು. ಇನ್ನೋರ್ವ ಪ್ರಗತಿಪರ ರೈತರಾದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳಾದ ಹನುಮಂತಪ್ಪ ಶ್ರೀಹರಿ ಕಾರ್ಯಕ್ರಮ ಕುರಿತು ಮಾತನಾಡಿ, ಗೋವಿನಜೋಳದಲ್ಲಿ ಬರುವ ಕೀಟ ಮತ್ತು ರೋಗಗಳ ಕುರಿತು ಸಮಗ್ರವಾಗಿ ವಿವರಿಸಿದರು. ಡಾ| ಮಂಜುನಾಥ ಭಾನುವಳ್ಳಿ ಮಣ್ಣಿನ ಫಲವತ್ತತೆ ಮತ್ತು ನೀರಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು. ಸುನೀತಾ ಎನ್‌.ಎಚ್‌. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉತ್ತಂಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹೆಚ್ಚಿನ ರೈತರು ಭಾಗವಹಿಸಿ ಕೃಷಿಯಲ್ಲಿ ಬರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.