ಆಶ್ರಯ ಮನೆ‌ ಕಾಮಗಾರಿ ಸ್ಥಗಿತ!


Team Udayavani, Feb 8, 2019, 11:09 AM IST

bell-5.jpg

ಕೊಟ್ಟೂರು: ಮರಳು ಸಾಗಾಣೆಯ ಮೇಲೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದ ಪರಿಣಾಮ ತಾಲೂಕಿನಲ್ಲಿ ಮರಳಿನ‌ ಅಭಾವ ಸೃಷ್ಟಿಯಾಗಿದ್ದು, ಸರ್ಕಾರದ ವಸತಿ ಯೋಜನೆಗಳಡಿ ನಿರ್ಮಿಸುತ್ತಿರುವ ಮನೆ ಹಾಗೂ ಖಾಸಗಿ ಕಟ್ಟಡಗಳ ನಿರ್ಮಾಣಗಳ ಕಾಮಗಾರಿ ಸ್ಥಗಿತಗೊಂಡಿದೆ.

ತಾಲೂಕಿನ ನಾಗರಕಟ್ಟೆ, ಕೆ.ಅಯ್ಯನಹಳ್ಳಿ, ರಾಂಪುರ ಸೇರಿದಂತೆ ಇನ್ನಿತರ ಹಳ್ಳಿಗಳಲ್ಲಿರುವ ಕೆರೆಯ ಹಿಂಭಾಗ, ಸಣ್ಣ ಪುಟ್ಟ ಕೆರೆಗಳಿಂದ ಸ್ಥಳೀಯರು ತಮಗೆ ಬೇಕಾದಷ್ಟು ಮರಳನ್ನು ಬಂಡಿ, ಟ್ರ್ಯಾಕ್ಟರ್‌ ಮೂಲಕ ಸಾಗಾಣೆ ಮಾಡುತ್ತಿದ್ದರು. ಆದರೆ ಕ್ರಮೇಣ ಮರಳಿಗೆ ಬೇಡಿಕೆ ಹೆಚ್ಚಾಗಿ ಈಗ ಸರ್ಕಾರ ಮರಳು ಸಾಗಾಣೆ ಮೇಲೆ ಕಟ್ಟೆಚ್ಚರ ವಹಿಸಿ ಅಲ್ಲಲ್ಲಿ ಮರಳು ಸಾಗಾಣೆ ಮಾಡುವವರ ವಿರುದ್ಧ ಪ್ರಕರಣಗಳು ದಾಖಲಿಸಲಾಯಿತು. ಇದರಿಂದ ಮನೆ ಕಟ್ಟಿಕೊಳ್ಳುವವರಿಗೆ ನುಂಗಲಾರದ ತುತ್ತಾಗಿದೆ.

ಅಲ್ಲದೆ, ಇದೀಗ ರಾಜ್ಯಾದ್ಯಾಂತ ಹೊಸ ಮರಳು ನೀತಿ ಜಾರಿಯಾಗಿದ್ದು, ಎಲ್ಲಿ ಮರಳನ್ನು ತೆಗೆಯಬೇಕು, ಎಲ್ಲಿ ಮರಳನ್ನು ಸಂಗ್ರಹಿಸಬೇಕು ಎಂಬ ಕುರಿತು ಹೊಸ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಇದರ ಅನ್ವಯ ಕೊಟ್ಟೂರು ತಾಲೂಕಿನಲ್ಲಿ ಎಲ್ಲಿಯೂ ಮನೆ ನಿರ್ಮಾಣಕ್ಕೆ ಯೋಗ್ಯ ಮರಳು ಇಲ್ಲವೆಂದು ಘೋಷಿಸಲಾಗಿದೆ. ಅಲ್ಲದೆ, ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಬಿದ್ದಿದೆ.

ಮರಳು ಅಭಾವದಿಂದ ಕಾಮಗಾರಿಗಳಿಗೆ ಬಳಸುತ್ತಿರುವ ಎಂ.ಸ್ಯಾಂಡ್‌ನಿಂದ ಕಟ್ಟಡಗಳು ಕೆಲವೇ ದಿನಗಳಲ್ಲಿ ಮನೆಗಳಲ್ಲಿ ಹಾಗೂ ನಿರ್ಮಾಣವಾಗಿರುವ ಕಟ್ಟಡಗಳು ಬಿರುಕು ಬೀಳುತ್ತಿವೆ.

ಹೂವಿನಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮರಳು ಸಂಗ್ರಹ ಮಾಡಲಾಗುತ್ತ್ತದೆ. ಒಂದು ಘನ ಮೀಟರ್‌ ಮರಳಿಗೆ 690 ರೂ. ದರ ನಿಗದಿಪಡಿಸಲಾಗಿದೆ. ಸಾಗಾಣಿಕೆ ಮುನ್ನ ಅನೇಕ ಷರತ್ತು ವಿಧಿಸಲಾಗಿದೆ. ಅಲ್ಲಿಂದ ಕೊಟ್ಟೂರು ಪಟ್ಟಣಕ್ಕೆ ಒಂದು ಟ್ರ್ಯಾಕ್ಟರ್‌ ಲೋಡ್‌ ಮರಳು ತಂದರೆ ಸುಮಾರು 5 ರಿಂದ 6 ಸಾವಿರ ರೂ. ಖರ್ಚು ಬರಲಿದೆ. ಇದರಿಂದ ಬಡವರಿಗೆ ಮರಳು ದುಬಾರಿಯಾಗಿದ್ದು, ಕೂಡಲೇ ಸ್ಥಳೀಯವಾಗಿ ಸಿಗುವ ಮರಳನ್ನು ಬಳಸಿಕೊಳ್ಳಲು ಅವಕಾಶ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸರ್ಕಾರದ ಆಶ್ರಯ ಯೋಜನೆಯಡಿ 150 ಮನೆ ಕೂಲಿ ಕಾರ್ಮಿಕರಿಗೆ ಮಂಜೂರು ಮಾಡಿದ್ದೇವೆ. ಈ ಮನೆಗಳ ನಿರ್ಮಾಣಕ್ಕೆ ಮರಳಿನ ಅವಶ್ಯಕತೆ ಇದ್ದು, ಪಟ್ಟಣದಲ್ಲಿ ಮರಳು ಸಂಗ್ರಹಣೆಗೆ ಲೋಕೋಪಯೋಗಿ ಇಲಾಖೆ ಮುಂದಾಗಬೇಕು.
• ಎಚ್.ಎಫ್‌.ಬಿದರಿ, ಮುಖ್ಯಾಧಿಕಾರಿ, ಪುರಸಭೆ, ಕೊಟ್ಟೂರು.

ಲೋಕೋಪಯೋಗಿ ಇಲಾಖೆಯವರಿಗೆ ಮರಳನ್ನು ಸಂಗ್ರಹಿಸುವಂತೆ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೆೊಳ್ಳಲಾಗುವುದು.
•ಕೆ. ಮಂಜುನಾಥ್‌, ತಹಶೀಲ್ದಾರ್‌, ಕೊಟ್ಟೂರು.

ಸರ್ಕಾರ ನೀಡುವ ಸಹಾಯಧನದಿಂದ ಮನೆ ಕಟ್ಟಿಕೊಳ್ಳಲು ಆಗುತ್ತಿಲ್ಲ. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಬಡವರಿಗೆ ಉಚಿತವಾಗಿ ಮರಳು ನೀಡಬೇಕು. ಗುತ್ತಿಗೆದಾರರು, ಟೆಂಡರ್‌ ಮೂಲಕ ಮಾಡಿಕೊಂಡ ಕಾಮಗಾರಿಗಳನ್ನು ಮರಳಿನ ಅಭಾವದಿಂದ ಸಂಪೂರ್ಣ ಕೆಲಸ ಮುಗಿಯದೆ, ಕೂಲಿ ಕಾರ್ಮಿಕರಿಗೂ ಕೆಲಸವಿಲ್ಲದಂತಾಗಿದೆ. ಕೂಡಲೇ ಲೋಕೋಪಯೋಗಿ ಇಲಾಖೆಯು ಕೊಟ್ಟೂರಿನಲ್ಲಿ ಯೋಗ್ಯ ಬೆಲೆಗೆ ಮರಳಿನ‌ ಪಾಯಿಂಟ್ ಮಾಡಬೇಕು.
•ಅಜ್ಜಯ್ಯ, ಗುತ್ತಿಗೆದಾರ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.