ಪೊಲೀಸ್ ಭದ್ರತೆಯಲ್ಲಿಕಾಲಾ ಪ್ರದರ್ಶನ
Team Udayavani, Jun 8, 2018, 3:14 PM IST
ಬಳ್ಳಾರಿ: ಬಹುಭಾಷಾ ನಟ ರಜನಿಕಾಂತ್ ಅವರ ಬಹುನಿರೀಕ್ಷಿತ “ಕಾಲ’ ಚಲನಚಿತ್ರ ಪೊಲೀಸರ ಬಿಗಿ ಭದ್ರತೆ ನಡುವೆ ನಗರದಲ್ಲಿ ಗುರುವಾರ ಪ್ರದರ್ಶನ ಕಂಡಿದೆ. ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.
ಖ್ಯಾತ ಚಿತ್ರನಟ ರಜನಿಕಾಂತ್ ಅಭಿನಯದ “ಕಾಲಾ’ ಚಲನಚಿತ್ರ ಪ್ರದರ್ಶನಕ್ಕೆ ನಗರದ ರಾಧಿಕಾ ಚಿತ್ರಮಂದಿರದಲ್ಲಿ
ಸಿದ್ಧತೆ ನಡೆದಿತ್ತು. ಆದರೆ ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಶೆಟ್ಟಿ ಬಣ) ಮತ್ತು ಕರ್ನಾಟಕ ಜನಸೈನ್ಯ ಕಾರ್ಯಕರ್ತರು ಚಿತ್ರಮಂದಿರದ ಮುಂಭಾಗದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಚಿತ್ರಮಂದಿರ ಮಾಲೀಕರು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಕೆಲಕಾಲ
ವಾಗ್ವಾದವೂ ನಡೆಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.
ಈ ನಡುವೆ ಚಿತ್ರ ವೀಕ್ಷಣೆಗೆ ಆಗಮಿಸಿದ್ದ ರಜನಿಕಾಂತ್ ಅಭಿಮಾನಿಗಳು ಟಿಕೆಟ್ಗಾಗಿ ಸಾಲುಗಟ್ಟಿ ನಿಂತಿದ್ದರು. ಸಿನಿಮಾ ಪ್ರಿಯರನ್ನು ಪೊಲೀಸರು ಭದ್ರತೆಯಲ್ಲಿ ಒಳಗೆ ಬಿಟ್ಟರು. ವಿರೋಧದ ನಡುವೆಯೂ ಕಾಲಾ ಚಲನಚಿತ್ರ ಪ್ರದರ್ಶನ ನಡೆಯಿತು. ಚಿತ್ರಮಂದಿರದ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ