ಶ್ರಮಿಕ್ ರೈಲು ಓಡಾಟ 24ಕ್ಕೆ ಅಂತ್ಯ
ರಾಜ್ಯಕ್ಕೆ ತೆರಳುವ ಕಾರ್ಮಿಕರು ಇಂದು-ನಾಳೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ: ಡಿಸಿ ನಕುಲ್
Team Udayavani, Jun 22, 2020, 8:29 AM IST
ಬಳ್ಳಾರಿ: ಜಿಲ್ಲೆಯಲ್ಲಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ಅವರವರ ಸ್ವರಾಜ್ಯಕ್ಕೆ ತೆರಳಬೇಕಿದ್ದಲ್ಲಿ ಇದೇ ಜೂ.22 ಮತ್ತು 23 ರಂದು ಮಧ್ಯಾಹ್ನ 2ರಿಂದ ಬಳ್ಳಾರಿಯ ಎನ್ಇಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುವ ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಸರ್ಕಾರದ ನೇತೃತ್ವದಲ್ಲಿ ಅನ್ಯ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಶ್ರಮಿಕ್ ರೈಲು ಓಡಾಟ ಇದೇ ಜೂ.24 ರಂದು ಕೊನೆಯದ್ದಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ತೆರಳಲು ಇಚ್ಛಿಸಿದಲ್ಲಿ ಜೂ.22 ಮತ್ತು 23ರಂದು ಬಸ್ ನಿಲ್ದಾಣದಲ್ಲಿ ನಡೆಯುವ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಪ್ರಮಾಣಪತ್ರ ಹಾಗೂ ಇನ್ನಿತರೆ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.
ಇಲ್ಲಿ ತಪಾಸಣೆ ಮಾಡಿದ ನಂತರ ಯಾರು ಯಾವ ರಾಜ್ಯಕ್ಕೆ ಕಳುಹಿಸಬೇಕು ಎಂಬುದನ್ನು ಪಟ್ಟಿ ಮಾಡಿ ಅವರನ್ನು ಬಳ್ಳಾರಿಯಿಂದ ಬಸ್ ಮೂಲಕ ಆಹಾರ ಕಿಟ್ ಸೇರಿದಂತೆ ಅಗತ್ಯ ವಸ್ತುಗಳ ಸಮೇತ ಬೆಂಗಳೂರಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಂದ ಅವರವರ ರಾಜ್ಯಕ್ಕೆ ಕಳುಹಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದ ಕಾರಣ ಅನ್ಯರಾಜ್ಯಗಳ ವಲಸೆ ಕಾರ್ಮಿಕರಿಗೆ ಇದು ಅಂತಿಮ ಅವಕಾಶವಾಗಿದ್ದು, ಗಮನಹರಿಸಬೇಕು ಎಂದು ತಿಳಿಸಿರುವ ಜಿಲ್ಲಾದಿಕಾರಿಗಳು ನಂತರ ತೆರಳಲು ಇಚ್ಚಿಸಿದಲ್ಲಿ ಅದು ಅವರವರ ಸ್ವಂತ ಜವಾಬ್ದಾರಿಯಾಗಿರುತ್ತದೆ; ಜಿಲ್ಲಾಡಳಿತದ ಜವಾಬ್ದಾರಿ ಯಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು