ಶ್ರೀರಾಮುಲು V/S ಕರುಣಾಕರ ರೆಡ್ಡಿ:ಸುಷ್ಮಾ ಸ್ವರಾಜ್ ಕಾಲೋನಿಗಾಗಿ ಜಗಳ
Team Udayavani, Feb 18, 2017, 12:00 PM IST
ಬಳ್ಳಾರಿ: ಮಾಜಿ ಸಚಿವ ಕರುಣಾಕರ ರೆಡ್ಡಿ ಅವರು ಒಂದು ಕಾಲದ ಆತ್ಮೀಯ ಮಿತ್ರ ಸಂಸದ ಬಿ.ಶ್ರೀರಾಮುಲು ಅವರ ವಿರುದ್ಧ ಭೂವಿವಾದಕ್ಕೆ ಸಂಬಂಧಿಸಿ ಸಿಜೆಎಂ ನ್ಯಾಯಾಲಯದಲ್ಲಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಿಂದಾಗಿ ಇಬ್ಬರ ನಡುವಿನ ಸಂಬಂಧ ಸಂಪೂರ್ಣ ಹಳಸಿ ಹೋಗಿದೆ ಎನ್ನುವುದು ಜಗಜ್ಜಾಹೀರಾಗಿದೆ.
ಏನೀ ಭೂವಿವಾದ ?
1997 ರಲ್ಲಿ ಹಂದಿನ್ನಗುಂಡು ಪ್ರದೇಶದಲ್ಲಿ ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ಅವರು ಕ್ರಮವಾಗಿ 8 ಮತ್ತು 2.5 ಎಕರೆ ಜಮೀನನ್ನು ಖರೀದಿಸಿ ನಿವೇಶನಗಳನ್ನು ನಿರ್ಮಿಸುವ ಸಲುವಾಗಿ ಸುಷ್ಮಾ ಸ್ವರಾಜ್ ಕಾಲೋನಿ ಎಂದು ಹೆಸರಿಟ್ಟಿದ್ದರು. ಇದೀಗ ಆ ಜಮೀನನ್ನು ಶ್ರೀರಾಮುಲು ಅವರು ಮಾರಾಟ ಮಾಡಿದ್ದು ಮಾಲಿಕತ್ವದ ವಿಚಾರದಲ್ಲಿ ಇಬ್ಬರ ನಡುವೆ ಕಲಹ ಆರಂಭವಾಗಿದೆ.
ಕರುಣಾಕರ ರೆಡ್ಡಿ ಮಾಲಿಕತ್ವದ ಪಾಲು ಪಡೆಯುವ ಸಲುವಾಗಿ ಬೆಂಗಳೂರಿನ ವಕೀಲರೊಬ್ಬರ ಮೂಲಕ ಶ್ರೀರಾಮುಲು, ಕೆ.ತಿಮ್ಮರಾಜು ಮತ್ತು ಭೈರದೇವನಹಳ್ಳಿಯ ಡಿ.ರಾಘವೇಂದ್ರ ಎನ್ನುವವರ ಮೇಲೆ ನಗರದ ಸಿಜೆಎಂ ನ್ಯಾಯಾಲಯದಲ್ಲಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಪ್ರಕರಣಗಳಿಗೆ ಸಂಬಂಧಿಸಿ ಶ್ರೀರಾಮುಲು ಮತ್ತು ಇಬ್ಬರಿಗೆ ನ್ಯಾಯಾಲಯ ವಿವರಣೆ ಕೇಳಿ ಸಮನ್ಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ