ಸೋಂಕಿನಿಂದ ಸತ್ತವರ ಸಂಖ್ಯೆಯ ಬಗ್ಗೆ ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ


Team Udayavani, Jun 22, 2021, 4:21 PM IST

ಸೋಂಕಿನಿಂದ ಸತ್ತವರ ಸಂಖ್ಯೆಯ ಬಗ್ಗೆ ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ

ಬಳ್ಳಾರಿ: ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಸೋಂಕಿನಿಂದ ಸತ್ತವರ ಸಂಖ್ಯೆಯ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಜಿಲ್ಲೆಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸೀಜನ್ ಇಲ್ಲದೇ 36 ಜನರು ಮೃತಪಟ್ಟರು. ಆದರೆ, ರಾಜ್ಯ ಸರ್ಕಾರ ಕೇವಲ ಮೂರು ಜನರು ಮಾತ್ರ ಮೃತಪಟ್ಟಿದ್ದಾರೆ ಎಂದು ಸುಳ್ಳು ಮಾಹಿತಿ ನೀಡುತ್ತಿದೆ. ಕೋವಿಡ್ ನಿಯಂತ್ರಿಸುವಲ್ಲಿ ವಿಫಲರಾಗಿರುವ ರಾಜ್ಯ ಸರ್ಕಾರ, ಸೋಂಕಿತರಿಗೆ ಸಕಾಲಕ್ಕೆ ಐಸಿಯು ಬೆಡ್ ಕೊಡದೆ, ಸಮರ್ಪಕವಾಗಿ ಆಕ್ಸಿಜನ್ ಪೂರೈಸದೆ ಮೃತಪಟ್ಟಿದ್ದಾರೆ. ಸದ್ಯ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಗಿಂತಲೂ ದುಪ್ಪಟ್ಟು ಜನರು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ. ಹೀಗಾಗಿ ಒಟ್ಟಾರೆ ಡೆತ್ ಆಡಿಟ್ ಆಗಬೇಕು ಎಂದು ಒತ್ತಾಯಿಸಿದರು.

ಸಿಎಂ ಆಗುತ್ತೇನೆಂದು ಹೇಳಿಲ್ಲ: ನಾನು ಸಿಎಂ ಆಗುತ್ತೇನೆಂದು ಎಲ್ಲೂ ಹೇಳಿಲ್ಲ. ಶಾಸಕರು ಹೇಳುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷದ ಅಭಿಪ್ರಾಯ ಅಲ್ಲ. ಈ ಕುರಿತು ಯಾರೂ ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅವರವರ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು ಎನ್ನುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ ಪರ ಬ್ಯಾಟಿಂಗ್ ಮಾಡುತ್ತಿರುವ ಶಾಸಕರ ಹೇಳಿಕೆಗಳಿಗೆ ಪರೋಕ್ಷವಾಗಿ ಪುಷ್ಠಿ ನೀಡಿದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಒಂದು ವ್ಯವಸ್ಥೆ ಇದೆ ಎಂದ ಅವರು, ಚುನಾವಣೆ ಆಗಬೇಕು, ಪಕ್ಷಕ್ಕೆ ಬಹುಮತ ಲಭಿಸಬೇಕು. ಆಗ ಶಾಸಕಾಂಗ ಪಕ್ಷದ ನಾಯಕನ ಅಯ್ಕೆ ಪ್ರಕ್ರಿಯೆ ನಡೆಯುತ್ತದೆ. ಪಕ್ಷದ ವೇದಿಕೆಯಲ್ಲಿ ಈ ಅಭಿಪ್ರಾಯ ಇನ್ನು ಚರ್ಚೆ ಆಗಿಲ್ಲ. ಇದು ಮಹತ್ವದ ವಿಚಾರವೇ ಅಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಈ ಸರ್ಕಾರದಲ್ಲಿ ರಮೇಶ್ ಜಾರಕಿಹೊಳಿಗೊಂದು ನ್ಯಾಯ, ಮತ್ತೊಬ್ಬರಿಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು. ಮೊದಲು ರಮೇಶ್ ಜಾರಕಿಹೊಳಿಯವರನ್ನು ಬಂಧಿಸಲಿ ಎಂದು ಆಗ್ರಹಿಸಿದರು.

ನ್ಯಾಯಾಂಗ ತನಿಖೆಯಾಗಲಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಅಕ್ರಮ ಸಂಪಾದನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಬಿಜೆಪಿಯವರಾದ ವಿಶ್ವನಾಥ್, ಬಸವನಗೌಡ ಪಾಟೀಲ್ ಯತ್ನಾಳ್, ಯೋಗೀಶ್ವರ ಅವರೇ 20 ಸಾವಿರ ಕೋಟಿ ಅವ್ಯವಹಾರ ಅಗಿದೆ ಎಂದು ಆರೋಪಿಸಿದ್ದಾರೆ. ಅಪ್ಪರ್ ಭದ್ರ ಪ್ರಾಜೆಕ್ಟ್ ನಲ್ಲಿ ಹತ್ತು ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ ಎಂದು ವಿಶ್ವನಾಥ ಮಾಡಿರುವ ಆರೋಪ ಸುಳ್ಳೇ? ಸುಳ್ಳಾಗಿದ್ದರೆ ಸಚಿವ ಬೊಮ್ಮಯಿ ಅವರು ತನಿಖೆ ಮಾಡೋದು ಬೇಡ ಎಂದು ಯಾಕೆ ಹೇಳುತ್ತಾರೆ ಎಂದರು. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಜಿಂದಾಲ್ ಉಕ್ಕು ಕಾರ್ಖಾನೆಗೆ ಜಮೀನು ಪರಭಾರೆ ವಿಷಯವಾಗಿ ಕೇಳಿದ ಪ್ರಶ್ನೆಗೆ, ಪ್ರಸ್ತುತ ಮಾರುಕಟ್ಟೆ ದರಕ್ಕೆ ಭೂಮಿ ಕೊಡೋದಾದರೆ ಕೊಡಲಿ. ಅದು ಬಿಟ್ಟು ಈ ಹಿಂದೆ ಒಪ್ಪಂದ ಮಾಡಿಕೊಂಡಿರುವ ದರಕ್ಕೆ ಕೊಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.