ಕಂಪ್ಲಿ ಯಲ್ಲಿ ಸಹಿ ಸಂಗ್ರಹ ಅಭಿಯಾನ
Team Udayavani, Jan 14, 2020, 1:24 PM IST
ಕಂಪ್ಲಿ: ಪಟ್ಟಣದ ಪುರಸಭೆ ಮುಂಭಾಗದಲ್ಲಿ ಬಿಜೆಪಿ ಕಂಪ್ಲಿ ವಿಧಾನಸಭಾ ಕ್ಷೇತ್ರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಸಹಿ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯರ್ರಂಗಳಿ ತಿಮ್ಮಾರೆಡ್ಡಿ ಸಹಿ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಪೌರತ್ವ ಕಾಯ್ದೆಯಿಂದ ದೇಶದ ಜನತೆಗೆ ತೊಂದರೆಯಾಗುವುದಿಲ್ಲ. ಅದರಲ್ಲೂ ಮುಖ್ಯವಾಗಿ ದೇಶದ ಮುಸ್ಲಿಂರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ.ಕಾಂಗ್ರೆಸ್ ಪೌರತ್ವ ಕಾಯ್ದೆ ವಿರುದ್ಧ ಮುಸ್ಲಿಮರನ್ನು ದಾರಿ ತಪ್ಪಿಸುವ ಜತೆಗೆ ಕೋಮುಗಲಭೆಗೆ ಮುಂದಾಗುತ್ತಿದೆ. ಮುಸ್ಲಿಮರು ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಹೊಂದಬೇಕು ಎಂದರು. ಅಳ್ಳಳ್ಳಿ ವಿರೇಶ್ ಮಾತನಾಡಿ, ಈ ಕಾಯ್ದೆಯನ್ನು ರಾಜಕೀಯ ಹಿತಾಸಕ್ತಿಯಿಂದ ವಿರೋಧಿ ಸುತ್ತಿರುವ ಪ್ರತಿಪಕ್ಷಗಳು ದೇಶದ ಅಲ್ಪಸಂಖ್ಯಾತರಿಗೆ ತಪ್ಪು ಮಾಹಿತಿ ನೀಡಿ ಹಿಂಸೆಗೆ ಪ್ರಚೋದನೆ ನೀಡುತ್ತಿವೆ. ದೇಶದ ಜನರಲ್ಲಿ ಮುಸ್ಲಿಂ ವಿರೋಧಿ ಭಾವ ತುಂಬಲಾಗುತ್ತಿವೆ. ಸಾರ್ವಜನಿಕವಾಗಿ ಸಹಿ ಸಂಗ್ರಹಿಸಿ ಪೌರತ್ವ ಕಾಯ್ದೆ ಪರವಾಗಿ ಬೆಂಬಲ ಮೂಡಿಸುವುದು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿ ತಲುಪಿಸುವುದು ಉದ್ದೇಶ ಅಭಿಯಾನದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹಿ ಮಾಡುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ಸೂಚಿಸಿದರು. ಈ ಅಭಿಯಾನದಲ್ಲಿ ಪುರಸಭೆ ಸದಸ್ಯರಾದ ಸಿ.ಆರ್. ಹನುಮಂತ, ಎಸ್.ಎಂ. ನಾಗರಾಜ, ಟಿ.ವಿ. ಸುದರ್ಶನರೆಡ್ಡಿ, ಬಿಜೆಪಿ ಪಕ್ಷದ ಮುಖಂಡರಾದ ಪಿ. ಬ್ರಹ್ಮಯ್ಯ, ಬಿ. ಸಿದ್ದಪ್ಪ, ಜಿ.ಸುಧಾಕರ, ಕೊಡಿದಲ್ ರಾಜು, ಅಗಳಿ ಪಂಪಾಪತಿ, ಶ್ರೀಧರ್ ಶ್ರೇಷ್ಠಿ, ಜಿ.ಜಿ. ಚಂದ್ರಣ್ಣ, ವಿ. ವಿದ್ಯಾಧರ, ಬಾವಿಕಟ್ಟೆ ವೆಂಕಟೇಶ್, ಎ. ರೇಣುಕಪ್ಪ, ಬಿ.ಕೆ. ವಿರೂಪಾಕ್ಷಿ, ಭಾಸ್ಕರ್, ನಟರಾಜ್, ಕೆ. ಜ್ಯೋತಿ, ಪುಷ್ಪಾವತಿ, ಪದ್ದಮ್ಮ, ನೂರಾರು ಯವಕರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ