ಅಂತೂ ಇಂತೂ ಬಸ್ ನಿಲ್ದಾಣ ರೆಡಿ
ಶೀಘ್ರದಲ್ಲಿ ನೂತನ ನಿಲ್ದಾಣ ಲೋಕಾರ್ಪಣೆ,2018ರಲ್ಲಿ ಪ್ರಾರಂಭಗೊಂಡಿದ್ದ ಕಾಮಗಾರಿ
Team Udayavani, Jan 6, 2021, 4:58 PM IST
ಸಿರಗುಪ್ಪ: ನಗರದ ಹೃದಯಭಾಗದಲ್ಲಿ ಮೂರು ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಬಸ್ ನಿಲ್ದಾಣದಕಾಮಗಾರಿ ಅಂತೂ ಇಂತೂ ಮುಗಿಯುತ್ತಾ ಬಂದಿದ್ದು ಇನ್ನೊಂದು ತಿಂಗಳೊಳಗೆ ಬಸ್ನಿಲ್ದಾಣ ಸಾರ್ವಜನಿಕರ ಸೇವೆಗೆ ಸಿಗಲಿದೆ.
ರೂ. 2.50 ಕೋಟಿ ವೆಚ್ಚದಲ್ಲಿ ಕೇಂದ್ರ ಬಸ್ನಿಲ್ದಾಣದ ಕಾಮಗಾರಿಗೆ ಅಂದಿನ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಮಾ. 13, 2018ರಂದು ಭೂಮಿಪೂಜೆನೆರವೇರಿಸಿದ್ದರು. ಆದರೆ ನಿಲ್ದಾಣದ ಕಾಮಗಾರಿ ಕೆಲಸಮಾತ್ರ ಆಮೆಗತಿಯಲ್ಲಿ ಸಾಗುತ್ತಿದ್ದರಿಂದ ಮೂರುವರ್ಷಕ್ಕೆ ಮುಗಿಯುವ ಹಂತ ತಲುಪಿದೆ.ನಗರದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಶಾಸಕ ಬಿ.ಎಂ. ನಾಗರಾಜ ಶಥಪ್ರಯತ್ನ ಮಾಡಿ ಸರ್ಕಾರದ ಮಟ್ಟದಲ್ಲಅಧಿಕಾರಿಗಳೊಂದಿಗೆ ಚರ್ಚಿಸಿ ರೂ. 2.50 ಕೋಟಿ ವೆಚ್ಚದಲ್ಲಿ ಬಸ್ನಿಲ್ದಾಣ ಯೋಜನೆ ಕಾಮಗಾರಿಗೆ ಅನುಮೋದನೆ ಕೊಡಿಸಿ ನಿರ್ಮಾಣ ಕಾಮಗಾರಿಗೆ ಅಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಹೆಚ್. ಎಂ.ರೇವಣ್ಣರನ್ನು ಕರೆಸಿ ಭೂಮಿಪೂಜೆ ನೆರವೇರಿಸಿ 18 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದ್ದರು.
ಭೂಮಿಪೂಜೆ ನಂತರ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಿರ್ಮಾಣಕಾಮಗಾರಿ ತಡವಾಗಿ ಪ್ರಾರಂಭವಾಯಿತು. ನೂತನಶಾಸಕರಾಗಿ ಆಯ್ಕೆಯಾದ ಶಾಸಕ ಎಂ.ಎಸ್.ಸೋಮಲಿಂಗಪ್ಪ ಬಸ್ನಿಲ್ದಾಣದ ಕಾಮಗಾರಿಯನ್ನುತ್ವರಿತವಾಗಿ ಮುಗಿಸಿಕೊಡಬೇಕೆಂದು ಗುತ್ತಿಗೆದಾರರಿಗೆತಾಕೀತು ಮಾಡಿದರು. ಆದರೂ ಮೊದಲ ಹಂತದಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಸರ್ಕಾರದಿಂದ ಸಕಾಲಕ್ಕೆ ಬಿಲ್ ಪಾವತಿಯಾಗದ ಕಾರಣ ಬಸ್ನಿಲ್ದಾಣದ ಕಾಮಗಾರಿಯು ಕೆಲವು ತಿಂಗಳು ಸ್ಥಗಿತಗೊಂಡಿತ್ತು.
ಬಸ್ನಿಲ್ದಾಣದ ಕಾಮಗಾರಿ ತ್ವರಿತವಾಗಿ ಮುಗಿಯದೇ ಇರುವುದರಿಂದ ಬಸ್ಗಾಗಿ ಕಾಯುವ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಬಸ್ ಹತ್ತಬೇಕಾಗಿದ್ದರಿಂದ ಬಸ್ನಿಲ್ದಾಣದ ಸಮೀಪ ನಿರಂತರವಾಗಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಗಮನಿಸಿದ ಶಾಸಕರು ಶೀಘ್ರವಾಗಿ ಕಾಮಗಾರಿಯನ್ನುಮುಗಿಸಬೇಕೆಂದು ತಾಕೀತು ಮಾಡಿದ್ದರೂ ಮೂರುವರ್ಷ ಕಾಲಾವ ಧಿಯಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು ಉದ್ಘಾಟನೆಗೆ ಸಿದ್ಧವಾಗುತ್ತಿದೆ.
ಬಸ್ನಿಲ್ದಾಣದ ಕಾಮಗಾರಿ ಮುಗಿಯುತ್ತಿದ್ದರೂ ಅಧಿಕಾರಿಗಳು ನಿಲ್ದಾಣವನ್ನು ಲೋಕಾರ್ಪಣೆ ಮಾಡಲುಇನ್ನೂ ತಡಮಾಡುತ್ತಿರುವುದು ಸರಿಯಾದಕ್ರಮವಲ್ಲ. ಶೀಘ್ರವಾಗಿ ಬಸ್ನಿಲ್ದಾಣ ಲೋಕಾರ್ಪಣೆ ಮಾಡಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. – ಪ್ರಯಾಣಿಕರು
ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ವಿಭಾಗೀಯ ಅಧಿಕಾರಿಗಳು ಬಂದುತಪಾಸಣೆ ನಡೆಸಿದ ನಂತರ ಬಸ್ನಿಲ್ದಾಣ ಲೋಕಾರ್ಪಣೆ ಮಾಡಲು ನಮ್ಮ ಇಲಾಖೆ ಮೇಲಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. – ವಸಂತ್, ಎಇಇ, ಕೆಎಸ್ಆರ್ಟಿಸಿ ಕಾಮಗಾರಿ ವಿಭಾಗ
-ಆರ್. ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ