ಯಲ್ಲಮ್ಮ ದೇವಿ ಜಾತ್ರೆ: ರಾರಾವಿಯಲ್ಲಿ ಎತ್ತು ಗಳ ಪರಿಷೆ

ವಾರಗಳ ಕಾಲ ನಡೆಯುವ ಹಬ್ಬ ಅತ್ಯುತ್ತಮ ಜೋಡೆತ್ತುಗಳಿಗೆ ಬಹುಮಾನ

Team Udayavani, Feb 15, 2020, 12:46 PM IST

15-February-10

ಸಿರುಗುಪ್ಪ: ತಾಲೂಕಿನ ರಾರಾವಿ ಗ್ರಾಮದ ಅಧಿದೇವತೆ ಮುತ್ತಿನ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ರಾರಾವಿ ಗ್ರಾಮದಲ್ಲಿ ಎತ್ತುಗಳ ಪರಿಷೆ ನಡೆಯಿತು. ಈ ಪರಿಷೆಗೆ ವರ್ಷದಿಂದ ವರ್ಷಕ್ಕೆ ಎತ್ತುಗಳ ಸಂಖ್ಯೆ ಹೆಚ್ಚಾಗಿದೆ. ಈ ವರ್ಷ ಸುಮಾರು 100 ರಿಂದ 120 ಜೋಡಿ ಎತ್ತುಗಳು ಪರಿಷೆಗೆ ಬಂದಿದ್ದವು.

ಫೆ. 10ರಂದು ಪ್ರಾರಂಭಗೊಂಡಿದ್ದು ಒಂದು ವಾರಗಳ ಕಾಲ ನಡೆಯುವ ಈ ಪರಿಷೆಯಲ್ಲಿ ಸಿಂಧನೂರು, ರಾಯಚೂರು, ಗಂಗಾವತಿ, ಬಳ್ಳಾರಿ, ಸಿರುಗುಪ್ಪ, ಸೀಮಾಂಧ್ರ ಪ್ರದೇಶದ ಕರ್ನೂಲು, ಪತ್ತಿಕೊಂಡ, ಆಲೂರು, ಆದೋನಿ, ಹೊಳಗುಂದ, ಕೋಸ್ಗಿ, ಹರಿವಾಣಂ, ಕೌತಾಳಂ ಮತ್ತು ತಾಲೂಕಿನ ರಾರಾವಿ, ಬಾಗೇವಾಡಿ, ಅಗಸನೂರು ಮತ್ತು ಬಳ್ಳಾರಿ ತಾಲೂಕಿನ ಬಸರಕೋಡು, ಮೋಕಾ ಮುಂತಾದ ಹಳ್ಳಿಗಳ ಎತ್ತುಗಳು ಈ ಜಾತ್ರೆಗೆ ಬರುತ್ತವೆ. ಕಿಲಾರಿ, ಹಳ್ಳಿಕಾರ, ಜವಾರಿ ಹೋರಿಗಳು ಈ ಜಾತ್ರೆಗೆ ಬರುತ್ತವೆ.

ಕಿಲಾರಿ, ಹಳ್ಳಕಾರ, ಜವಾರಿ ಹೋರಿಗಳನ್ನು ಮಾರಾಟ ಮಾಡಲು ರಾಜ್ಯ ಸೇರಿದಂತೆ ಹೊರರಾಜ್ಯಗಳ ನೂರಾರು ರೈತರು ಮತ್ತು ವ್ಯಾಪಾರಿಗಳು ಇಲ್ಲಿಗೆ ಬರುತ್ತಾರೆ. ಈ ಜಾತ್ರೆಯಲ್ಲಿ ರೂ. 40ಸಾವಿರದಿಂದ ಒಂದು ಲಕ್ಷ 80 ಸಾವಿರ ಮೌಲ್ಯದವರೆಗಿನ ಎತ್ತುಗಳು ಮಾರಾಟಕ್ಕೆ ಬಂದಿರುತ್ತವೆ. ಕೆಲವು ರೈತರು ಈ ಪರಿಷೆಯಲ್ಲಿಯೇ ತಮ್ಮ ಒಕ್ಕಲುತನಕ್ಕೆ ಬೇಕಾದ ಎತ್ತುಗಳನ್ನು ಕೊಳ್ಳುವುದು ಮತ್ತು ಮಾರಾಟ ಮಾಡುವುದು ಸಾಮಾನ್ಯವಾಗಿದೆ. ರೂ. 50ಲಕ್ಷದಿಂದ 1 ಕೋಟಿಯವರೆಗೆ ಈ ಪರಿಷೆಯಲ್ಲಿ ಎತ್ತುಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ವ್ಯವಹಾರ ನಡೆಯುತ್ತದೆ.

ಈ ಪರಿಷೆಗೆ ಬರುವ ಎತ್ತುಗಳಿಗೆ ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆಯನ್ನು ದೇವಸ್ಥಾನ ಆಡಳಿತ ಮಂಡಳಿಯವರು ಮಾಡಿದ್ದು ಅತ್ಯುತ್ತಮ ಜೋಡೆತ್ತುಗಳಿಗೆ ಸಿರುಗುಪ್ಪ ಎಪಿಎಂಸಿ ಆಡಳಿತ ಮಂಡಳಿ ವತಿಯಿಂದ ಬಹುಮಾನ ನೀಡಲಾಗುತ್ತದೆ. ಆದರೆ ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಎತ್ತುಗಳು ಬಿಸಿಲಿನ ತಾಪಕ್ಕೆ ಬಳಲಿದಂತೆ ಕಾಣುತ್ತವೆ. ಆದ್ದರಿಂದ ಬಿಸಿಲಿನಿಂದ ರಕ್ಷಿಸಲು ನೆರಳಿನ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂಬುದು ಪರಿಷೆಗೆ ಬಂದ ರೈತರ ಅಭಿಪ್ರಾಯವಾಗಿದೆ. ರೈತರು ತಮ್ಮ ಎತ್ತುಗಳ ಅಲಂಕಾರಕ್ಕೆ ಬೇಕಾದ ವಸ್ತುಗಳನ್ನು ಪರಿಷೆಯಲ್ಲಿಯೇ ಖರೀದಿಸಿ ಎತ್ತುಗಳನ್ನು ಅಲಂಕರಿಸಿದ್ದು ಅಲ್ಲಲ್ಲಿ ಕಂಡುಬಂತು.

ಎತ್ತುಗಳ ಪರಿಷೆಯಲ್ಲಿ ರೈತರು ತಮಗೆ ಬೇಕಾದ ಎತ್ತುಗಳ ಸುಳಿ, ಕೊಂಬು, ಬಾಲ ಮುಂತಾದವುಗಳನ್ನು ಪರೀಕ್ಷಿಸಿ ಖರೀದಿ ಮಾಡುತ್ತಾರೆ. ಆದರೆ ಈ ಪರಿಷೆಯಲ್ಲಿ ದಲ್ಲಾಳಿಗಳ ಕಾಟ ಇರುವುದಿಲ್ಲ. ಕೊಳ್ಳುವವರು, ಮಾರುವವರು ನೇರವಾಗಿಯೇ ವ್ಯವಹರಿಸುತ್ತಿರುವುದರಿಂದ ರೈತರಿಗೆ ಅನುಕೂಲವಾಗಿದೆ. ರಾಮುಡು,
ಸೀಮಾಂಧ್ರ ಪ್ರದೇಶದ ಪತ್ತಿಕೊಂಡ ರೈತ

ದೇವಸ್ಥಾನ ಸಮಿತಿ ವತಿಯಿಂದ ಎತ್ತುಗಳ ಪರಿಷೆಗೆ ಬರುವ ರೈತರಿಗೆ ಉಚಿತ ಊಟ ಮತ್ತು ಎತ್ತುಗಳಿಗೆ ಕುಡಿಯುವ ನೀರು, ಮೇವಿನ ವ್ಯವಸ್ಥೆ ಮಾಡಲಾಗಿದೆ.
ಸೋಮಪ್ಪನಾಯಕ,
ದೇವಸ್ಥಾನ ಸಮಿತಿ ಸದಸ್ಯ

ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.