ಕರೂರಲ್ಲಿ ಅತ್ಯಧಿಕ ಮಳೆ
Team Udayavani, Jun 26, 2020, 4:03 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ತಾಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಬತ್ತಿದ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.
ಕರೂರಿನಲ್ಲಿ 62.4 ಮಿಮೀ ಅತಿ ಹೆಚ್ಚು, ಎಂ.ಸೂಗೂರಿನಲ್ಲಿ ಅತಿ ಕಡಿಮೆ 1.4 ಮಿಮೀ ಮಳೆಯಾಗಿದ್ದು, ತೆಕ್ಕಲಕೋಟೆ 34.8, ಸಿರಿಗೇರಿ 22.2, ಸಿರುಗುಪ್ಪ 10.0, ಕರೂರು 62.4, ಕೆ.ಬೆಳಗಲ್ 43.2 ಮಿಮೀ ಮಳೆಯಾಗಿದೆ ಎಂದು ತಾಲೂಕು ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ಹರಿಯುವ ದೊಡ್ಡಹಳ್ಳ, ಮುಂಜಿನ ಹಳ್ಳ, ಸೀಮೆ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಈ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಹಳ್ಳದ ದಂಡೆಯಲ್ಲಿ ವಿವಿಧ ಬೆಳೆಗಳನ್ನು ಬೆಳೆದ ರೈತರಿಗೆ ನೀರು ಹರಿಸಿಕೊಳ್ಳಲು ಈ ಮಳೆಯು ಅನುಕೂಲ ಕಲ್ಪಿಸಿದೆ.
ಶಾಲಾ ಅಂಗಳದಲ್ಲಿ ನೀರು ಸಂಗ್ರಹ: ಕರೂರು ಗ್ರಾಮದ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ಆವರಣವು ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಮಳೆ ನೀರಿನಿಂದ ಶಾಲಾ ಆವರಣ ಕೆರೆಯಂತಾಗಿದೆ. ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಳೆನೀರಿನ ಮಧ್ಯದಲ್ಲಿಯೇ ನಡೆದುಕೊಂಡು ಹೋಗಿ ಪರೀಕ್ಷೆ ಬರೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಲೆಯ ಅವರಣದಿಂದ ಮಳೆನೀರು ಹೊರ ಹೋಗದಂತೆ ಶಾಲೆ ಪಕ್ಕದ ಜಮೀನಿನ ಮಾಲೀಕರು ಅಡ್ಡಹಾಕಿದ್ದರಿಂದ ಮಳೆ ನೀರಿನಿಂದ ಶಾಲೆಯ ಆವರಣ ತುಂಬಿ ಹೋಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು ಕೆಲಕಾಲ ತೊಂದರೆ ಅನುಭವಿಸುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ