ಸೂಜಿಗಲ್ಲಿನಂತೆ ಸೆಳೆಯುವ ಗುಲ್‌ಮೊಹರ್‌

10ರಿಂದ 60 ಅಡಿ ಎತ್ತರ ಬೆಳೆಯುವ ಮರ ಬೇಸಿಗೆಯಲ್ಲಿ ಅರಳುವ ಉಷ್ಣವಲಯದ ವೃಕ್ಷ

Team Udayavani, May 28, 2020, 4:08 PM IST

28-May-18

ಸಿರುಗುಪ್ಪ: ಸಿಂಧನೂರು ರಸ್ತೆಯಲ್ಲಿ ಅರಳಿ ನಿಂತಿರುವ ಗುಲ್‌ಮೊಹರ್‌ ಹೂಗಳು.

ಸಿರುಗುಪ್ಪ: ಮೇ ತಿಂಗಳಿನಲ್ಲಿಯೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ನೋಡಿದಲ್ಲೆಲ್ಲಾ ಈಗ ಕೆಂಪು ಪುಷ್ಪಗಳು ಸೂಜಿಗಲ್ಲಿನಂತೆ ಗಮನ ಸೆಳೆಯುತ್ತಿವೆ. ಮೇ ಫ್ಲವರ್‌ ಎಂದೆ ಕರೆಯಲ್ಪಡುವ ಗುಲ್‌ಮೊಹರ್‌ ಸಮಯ ಇದಾಗಿದ್ದು, ನಗರ ಸೇರಿದಂತೆ ಗ್ರಾಮ, ರಸ್ತೆ, ಹೊಲ, ಗದ್ದೆ, ಶಾಲೆಗಳ ಬಳಿ ಗುಲ್‌ಮೊಹರ್‌ ಈಗ ಕಾಣಬಹುದು.

ಉಷ್ಣವಲಯದ ಮರವಾಗಿರುವ ಇದು ಪ್ರಪಂಚದ ಎಲ್ಲೆಡೆ ಬೆಳೆಯುತ್ತದೆ. ಮದುವೆ, ಹಬ್ಬ ಮತ್ತು ಗೃಹ ಪ್ರವೇಶದ ಸಂದರ್ಭದಲ್ಲಿ ಇದರ ಹೂ ಗೊಂಚಲನ್ನು ಕಿತ್ತು, ಚಪ್ಪರಗಳ ನಡುವೆ ಅಲಂಕರಿಸುವ ಪರಂಪರೆ ಗ್ರಾಮೀಣ ಭಾಗಗಳಲ್ಲಿ ಇನ್ನು ಉಳಿದಿದೆ. ಸುಮಾರು 10ರಿಂದ 60 ಅಡಿ ಎತ್ತರ ಬೆಳೆಯುವ ಇದನ್ನು ಪಾರ್ಕ್‌ಗಳಲ್ಲಿ ಮತ್ತು ರಸ್ತೆ ಬದಿಯಲ್ಲಿ ಹೆಚ್ಚು ಬೆಳೆಸಲಾಗುತ್ತದೆ. ಇದು ಕೆಂಪು ಹೂ, ಕಿತ್ತಳೆಗೆಂಪು, ಕೇಸರಿ ಲತೆಗಳು, ಹಸಿರು ವೃಕ್ಷಕ್ಕೆ ಬಾಸಿಂಗ ತೊಡಿಸಿದಂತೆ ಆಕರ್ಷಕವಾಗಿ ಕಾಣುತ್ತದೆ. ಮಳೆಗಾಲದ ಮುಂಜಾವಿನ ರಸ್ತೆಯಲ್ಲಿ ಪುಷ್ಪಗಳು ಉದುರಿದಾಗ ಪುಷ್ಪದ ಚಾದಾರ ಎದ್ದು ಕಾಣುತ್ತದೆ. ಹಳದಿ ಮತ್ತು ಬಿಳಿ ಹೂಗಳ ಸಂತತಿಯನ್ನು ಕಾಣಬಹುದು.

ಇದರ ಪುಷ್ಪ ಪಾತ್ರೆಯನ್ನು ಕಿತ್ತು, ಇದರೊಳಗಿನ ಕೇಸರದ ಕೊಕ್ಕೆಯನ್ನು ತೆಗೆದು ಆಟವಾಡುವ ಸಂಭ್ರಮವನ್ನು ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಕಾಣಬಹುದು. ಅವರೆ ಕಾಯಿಯಂತಹ ಉದ್ದನೆಯ ಕತ್ತಿಯಾಕಾರದ ಕೋಡು, ಸಣ್ಣಗಾತ್ರದ 20-30 ಬೀಜಗಳನ್ನು ಹೊಂದಿರುತ್ತದೆ. 5 ಸೆಂಟಿಮೀಟರ್‌ ಉದ್ದಬೆಳೆಯುವ ಹಸಿರು ಬಣ್ಣದ ಕೋಡು, ಬಲಿತಾಗ ಕಡು ಕಂದುಬಣ್ಣ ಹೊಂದಿದರೆ, ಮರದ ಕಾಂಡ ಬೂದಿ ಮಿಶ್ರಿತ ಕಂದುಬಣ್ಣ ಪಡೆಯುತ್ತದೆ. ಬೀಜ ಮತ್ತು ರೆಂಬೆನೆಟ್ಟು ಹೊಸ ಸಸ್ಯಗಳನ್ನು ಬೆಳೆಸಬಹುದು. ಅಲಂಕಾರಕಕ್ಕೆ ಇಲ್ಲವೆ ನೆರಳಿಗಾಗಿ ಸಾಲು ಮರದಂತೆ ಬೆಳೆಸುತ್ತಾರೆ.

ಮೇ, ಜೂನ್‌, ಜುಲೈಗಳಲ್ಲಿ ಹೂಗಳಿಂದ ಜನರನ್ನು ಆಕರ್ಷಿಸುವ ಈ ಮರ ವರ್ಷಪೂರ್ತಿ ಜನರಿಗೆ ನೆರಳು ನೀಡುತ್ತವೆ. ಬೇಸಿಗೆಯ ದಾಹ ನೀಗಲು ಸಂಜೆ ಮತ್ತು ಬೆಳಿಗ್ಗೆ ವಾಯು ವಿಹಾರಿಗಳು ಅಡ್ಡಾಡುವಾಗ ಮರದ ನೆರಳಿನಲ್ಲಿ ಸ್ವಲ್ಪ ಸಮಯ ಕುಳಿತು ವಿಶ್ರಮಿಸುತ್ತಾರೆ. ನಗರದ ಕೃಷ್ಣ ನಗರದ ಬಡಾವಣೆಯಲ್ಲಿ ಗುಲ್‌ ಮೊಹರ್‌ ಲತೆಗಳು ಹಸಿರು ವೃಕ್ಷಕ್ಕೆ ಕೆಂಪು ಛತ್ರಿ ತೊಟ್ಟಂತೆ ಜನರನ್ನು ಆಕರ್ಷಿಸುತ್ತಿವೆ ಎನ್ನುತ್ತಾರೆ ಪತ್ರಿಕಾ ವಿತರಕ ಶಿವಕುಮಾರಸ್ವಾಮಿ.

ಬೀಜದಿಂದ ಉತ್ಪಾದಿಸುವ ಅಂಟು, ಎಣ್ಣೆಯನ್ನು, ಜವಳಿ, ಚರ್ಮ, ಸಾಬೂನು, ಔಷ ಧ ಮೊದಲಾದ ಉದ್ದಿಮೆಗಳಲ್ಲಿ ಬಳಸಲಾಗುತ್ತದೆ. ಈ ವೃಕ್ಷದ ಮೂಲ ಮಡಗಾಸ್ಕರ್‌. ಸೆಭಾಷಿಯೇ ಕುಟುಂಬದ ಸೀತಂತಿನಿಯೋಯಿಡೆ ಉಪಕುಟುಂಬಕ್ಕೆ ಸೇರಿದೆ. ಇದರ ಸಸ್ಯ ಶಾಸ್ತ್ರಿಯ ಹೆಸರು ಡೆಲೋನಿಕ್ಸ್‌ ರೇಜಿಯಾ, ಕನ್ನಡದಲ್ಲಿ ಕತ್ತಿಕಾಯಿ ಮರ, ಹಿಂದಿಯಲ್ಲಿ ಗುಲ್‌ಮೊಹರ್‌, ಬೆಂಕಿಮರ, ದೊಡ್ಡರತ್ನಗಂದಿ, ಸೀಮೆಸಂಕೇಶ್ವರ, ಕೃಷ್ಣಾಚುರ ರಾಧಾಚುರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ.

ಆರ್‌. ಬಸವರೆಡ್ಡಿ, ಕರೂರು

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹರಿವು; ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Bellary; ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Bellary; Indefinite strike by Lorry Owners Association

Bellary; ಲಾರಿ ಮಾಲೀಕರ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

14-siruguppa

Siruguppa: ಅಕ್ರಮ ಗಾಂಜಾ; 2 ದ್ವಿಚಕ್ರ ವಾಹನ ವಶ, 5 ಆರೋಪಿಗಳ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.