ಹುಳು ಬಿದ್ದ ನೀರೇ ಗತಿ: ಆಕ್ರೋಶ
Team Udayavani, Apr 19, 2020, 6:08 PM IST
ಸಿರುಗುಪ್ಪ: ತಾಲೂಕಿನ ಬಗ್ಗೂರು ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಹುಳುಗಳು ಬಿದ್ದಿರುವುದು.
ಸಿರುಗುಪ್ಪ: ತಾಲೂಕಿನ ಬಗ್ಗೂರು ಗ್ರಾಮಕ್ಕೆ ಕೆರೆಯಿಂದ ಪೂರೈಕೆ ಮಾಡಿದ ಕುಡಿಯುವ ನೀರಿನಲ್ಲಿ ಹುಳುಗಳು ಕಾಣಿಸಿಕೊಂಡಿದ್ದು ಕೆರೆ ನೀರು ಕುಡಿಯಲು ಯೋಗ್ಯವಿಲ್ಲವೆಂದು ಗ್ರಾಮಸ್ಥರು ಗ್ರಾಮದಿಂದ 5 ಕಿ.ಮೀ. ದೂರದಲ್ಲಿರುವ ರಾರಾವಿ ಕೆರೆಗೆ ಹೋಗಿ ನೀರನ್ನು ತರುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿದ್ದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೇ ಇರುವುದರಿಂದ ಹುಳುಗಳು ಬಿದ್ದ ನೀರನ್ನು ಬಳಸಲಾಗದೆ ಚೆಲ್ಲುತ್ತಿರುವುದು ಸಾಮಾನ್ಯವಾಗಿದೆ.
ಬಗ್ಗೂರು ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಕೆರೆಯ μಲ್ಟರ್ ಬೆಡ್ ಗಳನ್ನು ಸ್ವತ್ಛಗೊಳಿಸಲಾಗಿದ್ದು, ಕೆರೆಯಿಂದ ಪೂರೈಕೆಯಾಗುವ ನೀರಿನಲ್ಲಿ ಯಾವುದೇ ಹುಳುಗಳು ಇರುವುದಿಲ್ಲ, ನೀರು ಪೂರೈಕೆಯಾಗುವ ಟ್ಯಾಂಕರ್ನಲ್ಲಿ ಏನಾದರೂ ಸ್ವತ್ಛತೆ ಇಲ್ಲದಿರುವುದರಿಂದ ಹುಳುಬಿದ್ದ ನೀರು ಪೂರೈಕೆಯಾಗುತ್ತಿರಬಹುದು. ಆದ್ದರಿಂದ ಗ್ರಾಮಸ್ಥರಿಗೆ ಟ್ಯಾಂಕ್ ಸcತ್ಛಗೊಳಿಸಿ ಕುಡಿಯುವ ನೀರೊದಗಿಸಲು ಕ್ರಮ ಕೈಗೊಳ್ಳಲಾಗುವುದು.
ಪಕ್ಕೀರ್ಸ್ವಾಮಿ, ಗ್ರಾಮೀಣ
ಕುಡಿಯುವ ನೀರು ಮತ್ತು
ನೈರ್ಮಲ್ಯ ಇಲಾಖೆ ಜಿಇ
ಕುಡಿಯುವ ನೀರಿನಲ್ಲಿ ಹುಳುಗಳು ಬಿದ್ದಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಮಲ್ಲಿಕಾರ್ಜುನ ಶರ್ಮ, ಪಿಡಿಒ
ಬಗ್ಗೂರು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರೊದಗಿಸಲಾಗುವುದು.
ಹೊಕ್ರಾಣಿ, ಗ್ರಾಮೀಣ
ಕುಡಿಯು ನೀರು ಮತ್ತು ನೈರ್ಮಲ್ಯ
ಇಲಾಖೆ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ