ಮೆಣಸಿನಕಾಯಿಗೆ ಶೈತ್ಯಾಗಾರ ಒದಗಿಸಿ
ಮುಚ್ಚಿವೆ ಬಳ್ಳಾರಿ-ಬ್ಯಾಡಗಿ ಮಾರುಕಟ್ಟೆಗಳು ತಪ್ಪದ ರೈತರ ಪರದಾಟ
Team Udayavani, Apr 16, 2020, 7:23 PM IST
ಸಿರುಗುಪ್ಪ: ಸಿರಿಗೇರಿ ಕ್ರಾಸ್ನಲ್ಲಿ ರೈತರು ಬೆಳೆದ ಒಣ ಮೆಣಸಿನಕಾಯಿಯನ್ನು ಹೊಲದಲ್ಲಿ ರಾಶಿ ಹಾಕಿರುವುದು.
ಸಿರುಗುಪ್ಪ: ತಾಲೂಕಿನಲ್ಲಿ ಸುಮಾರು ಆರುವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಬ್ಯಾಡಗಿ, ಸಿಜೆಂಟಾ, ಗುಂಟೂರು ಒಣ ಮೆಣಸಿನಕಾಯಿ ಬೆಳೆಯಲಾಗಿದ್ದು, ಉತ್ತಮ ಇಳುವರಿ ಬಂದಿದೆ. ಆದರೆ ಕೋವಿಡ್ ವೈರಸ್ನಿಂದಾಗಿ ಮೆಣಸಿನಕಾಯಿ ಮುಖ್ಯ ಮಾರುಕಟ್ಟೆ ಬ್ಯಾಡಗಿ ಮುಚ್ಚಿದೆ. ಆದರೆ ಮೆಣಸಿನಕಾಯಿ ಸಂಗ್ರಹಿಸಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇಲ್ಲದ್ದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ.
ಹೆಚ್ಚಿನ ಮಳೆಯಿಂದ ತಾಲೂಕಿನಲ್ಲಿ ಒಣ ಮೆಣಸಿನಕಾಯಿ ಬೆಳೆದ ರೈತರಿಗೆ ತೊಂದರೆಯಾಗಿದೆ. ಅಲ್ಲಲ್ಲಿ ಗಿಡಗಳು ಒಣಗಿ ಬೆಳೆಗೆ ವಿವಿಧ ರೀತಿಯ ರೋಗಗಳು ಕಾಣಿಸಿಕೊಂಡಿದ್ದವು. ಬೆಳವಣಿಗೆ ಸಹ ಸರಿಯಾಗಿ ಆಗಿರಲಿಲ್ಲ. ಆದರೂ ಮೆಣಸಿನಕಾಯಿ ಬೆಳೆಯ ಬೆಳವಣಿಗೆಗೆ ವಾತಾವರಣ ಈಬಾರಿ ಅನುಕೂಲ ಮಾಡಿಕೊಟ್ಟಿತ್ತು. ಇದರಿಂದಾಗಿ ಒಂದು ಎಕರೆಗೆ 18 ರಿಂದ 23 ಕ್ವಿಂಟಾಲ್ ಇಳುವರಿ ಬಂದಿದ್ದು, ಉತ್ತಮ ಬೆಲೆ ಇದ್ದರೂ ಬ್ಯಾಡಗಿ ಮಾರುಕಟ್ಟೆ ಮುಚ್ಚಿರುವುದರಿಂದ ಹೊಲಗಳಲ್ಲಿಯೇ ಮೆಣಸಿನಕಾಯಿ ರಾಶಿಹಾಕಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನ ಕೆಲವು ರೈತರು ಮೆಣಸಿನಕಾಯಿಯನ್ನು ಬಳ್ಳಾರಿ ಕೋಲ್ಡ್ ಸ್ಟೋರೇಜ್ನಲ್ಲಿ ಸಂಗ್ರಹಿಸಿಟ್ಟಿದ್ದಾರೆ. ಆದರೆ ಕೋವಿಡ್ ಹಾವಳಿಯಿಂದಾಗಿ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆ ಬ್ಯಾಡಗಿಗೆ ಮೆಣಸಿನಕಾಯಿಯನ್ನು ಮಾರುಕಟ್ಟೆಗೆ ಮತ್ತು ಕೋಲ್ಡ್ಸ್ಟೋರೇಜ್ ಗಳಿಗೆ ಕೊಂಡೊಯ್ಯಲು ದಾರಿ ಮಧ್ಯದಲ್ಲಿ ನಿರ್ಬಂಧ ಹೆಚ್ಚಾಗಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಬ್ಯಾಡಗಿಯಲ್ಲಿ ಮೆಣಸಿನಕಾಯಿ ಮಾರಾಟ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮೆಣಸಿನಕಾಯಿ ತೆಗೆದುಕೊಂಡು ಹೋದ ರೈತರು ಕೋಲ್ಡ್ ಸ್ಟೋರೇಜ್ನಲ್ಲಿ ಇಡುವ ಪರಿಸ್ಥಿತಿ ಇದೆ.
ತಾಲೂಕಿನಲ್ಲಿ ಆರುವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆದಿದ್ದು, ರೈತರು ಮೆಣಸಿನಕಾಯಿ ಕೋಲ್ಡ್ ಸ್ಟೋರೇಜ್ಗಳಲ್ಲಿ ಗ್ರಹಿಸಿಟ್ಟುಕೊಳ್ಳಲು ಅನುಕೂಲವಿಲ್ಲ. ಆದ್ದರಿಂದ ಸರ್ಕಾರ ತಾಲೂಕಿನಲ್ಲಿ ಮೆಣಸಿಕನಾಯಿ ಸಂಗ್ರಹಕ್ಕಾಗಿ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಬೇಕು.
ವಾ.ಹುಲುಗಯ್ಯ,
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕಾಧ್ಯಕ್ಷ
ಲಾಕ್ಡೌನ್ ಹಿನ್ನೆಲೆಯಲ್ಲಿ ಲಾರಿಗಳ ಮಾಲೀಕರು ಬ್ಯಾಡಗಿಗೆ ಮೆಣಸಿನಕಾಯಿ ತೆಗೆದುಕೊಂಡು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ತಾಲೂಕಿನ ರೈತರು ತಮ್ಮ ಹೊಲಗಳಲ್ಲಿಯೇ ಮೆಣಸಿನಕಾಯಿ ಸಂಗ್ರಹಿಸಿಟ್ಟಿದ್ದಾರೆ.
ಶಿವಕುಮಾರ, ಸಿರಿಗೇರಿ ಕ್ರಾಸ್ನ
ಮೆಣಸಿನಕಾಯಿ ಬೆಳೆದ ರೈತ
ಆರ್.ಬಸವರೆಡ್ಡಿ ಕರೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ