ಎಟಿಎಂಗಳಲಿಲ್ಲ ಸ್ಯಾನಿಟೈಸರ್ ವ್ಯವಸ್ಥೆ
ಸರ್ಕಾರಿ ಆದೇಶ ಪಾಲನೆ ಇಲ್ಲ , ಭದ್ರತಾ ಸಿಬ್ಬಂದಿಯೂ ಇಲ್ಲ
Team Udayavani, May 25, 2020, 5:10 PM IST
ಸಾಂದರ್ಭಿಕ ಚಿತ್ರ
ಸಿರುಗುಪ್ಪ: ನಗರ ಸೇರಿದಂತೆ ತಾಲೂಕಿನಾದ್ಯಂತ ಎಲ್ಲ ಎಟಿಎಂಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಇಲ್ಲ. ಭದ್ರತಾ ಸಿಬ್ಬಂದಿಯೂ ಇಲ್ಲ. ಇದರಿಂದಾಗಿ ಇಲ್ಲಿ ಅಂತರ ಕಾಯ್ದುಕೊಳ್ಳುವ ನಿಯಮ ಬಹುತೇಕ ಮಾಯವಾಗಿದೆ.
ತಾಲೂಕಿನಲ್ಲಿ ರಾಷ್ಟ್ರೀಕೃತ 35ಕ್ಕೂ ಹೆಚ್ಚು ಬ್ಯಾಂಕ್ಗಳಿದ್ದು, ಅಷ್ಟೇ ಸಂಖ್ಯೆಯ ಎಟಿಎಂಗಳಿವೆ. ಆದರೆ ಬಹುಪಾಲು ಎಟಿಎಂಗಳಲ್ಲಿ ಸಾಂಕ್ರಾಮಿಕ ರೋಗ ಕೋವಿಡ್ ಗೆ ಸಂಬಂಧಿಸಿದಂತೆ ಯಾವುದೇ ಸೂಚನೆ ಜಾರಿಯಾಗುತ್ತಿಲ್ಲ. ಎಟಿಎಂ ಒಳಗೆ ಒಬ್ಬರ ನಂತರ ಮತ್ತೊಬ್ಬರು ಪ್ರವೇಶ ಮಾಡಬೇಕು. ಆದರೆ ಇಬ್ಬರು ಮೂವರು ಎಟಿಎಂ ಒಳಗಡೆ ನಿಂತಿರುತ್ತಾರೆ. ಎಲ್ಲಿಯೂ ಅಂತರ ಪಾಲನೆಯಾಗುತ್ತಿಲ್ಲ, ಕೋವಿಡ್ ಸಾಂಕ್ರಾಮಿಕ ರೋಗವಾಗಿದ್ದರಿಂದ ಪದೇ ಪದೇ ಕೈತೊಳೆದುಕೊಳ್ಳಬೇಕು. ಎಲ್ಲ ಕಡೆ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕೆಂದು ತಾಲೂಕು ಆಡಳಿತದ ಸೂಚನೆಯಾಗಿದೆ. ಆದರೆ ಎಟಿಎಂಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕ ಕಚೇರಿ ಮತ್ತು ಬ್ಯಾಂಕ್ಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕೆನ್ನುವುದು ಜಿಲಾಡಳಿತ ಸೂಚನೆಯಾಗಿದೆ. ಆದರೆ ಎಟಿಎಂ ಕೇಂದ್ರಗಳಲ್ಲಿ ಬ್ಯಾಂಕ್ ಅಧಿಕಾರಿಗಳು ಈ ನಿಯಮವನ್ನು ಗಾಳಿಗೆ ತೂರಿದ್ದಾರೆಂದು ಗ್ರಾಹಕರ ಆರೋಪವಾಗಿದೆ.
ನಗರದಲ್ಲಿರುವ ಕೆಲವು ಎಟಿಎಂಗಳಲ್ಲಿ ಆರಂಭದಿಂದಲೂ ಭದ್ರತಾ ಸಿಬ್ಬಂದಿ ಇಲ್ಲ. ಕೋವಿಡ್ ಸಂದರ್ಭದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಲ್ಲವೆಂದು ಗ್ರಾಹಕರು ದೂರುತ್ತಿದ್ದಾರೆ. ಒಟ್ಟಾರೆ ತಾಲೂಕಿನಲ್ಲಿರುವ ಎಟಿಎಂಗಳಿಗೆ ಬರುವ ಗ್ರಾಹಕರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕೆನ್ನುವುದು ಎಟಿಎಂ ಬಳಕೆ ಮಾಡುವ ಗ್ರಾಹಕರ ಒತ್ತಾಯವಾಗಿದೆ.
ನಾನು ಹಲವಾರು ದಿನಗಳಿಂದ ಎಟಿಎಂ ಕೇಂದ್ರಕ್ಕೆ ಬರುತ್ತಿದ್ದೇನೆ. ಆದರೆ ಬ್ಯಾಂಕ್ ಅಧಿಕಾರಿಗಳು ಇಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ. ಹಣ ಪಡೆಯಲು ನೂರಾರು ಗ್ರಾಹಕರು ಬರುತ್ತಾರೆ. ಆದರೆ ಇಲ್ಲಿರುವ ಎಟಿಎಂ ಕೇಂದ್ರಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ.
ವೆಂಕಟೇಶ್, ಗ್ರಾಹಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು