ತುಂಗಭದ್ರಾ ಒಡಲಲ್ಲಿ ಮೊಸಳೆ ಕಾಟ!

ನಾಮಫಲಕ ಅಳವಡಿಸದ ಅರಣ್ಯ ಇಲಾಖೆಸುತ್ತಲಿನ ಘಾಟ್‌ಗಳಲ್ಲಿವೆ ದೊಡ್ಡ ಗಾತ್ರದ ಮೊಸಳೆಗಳು

Team Udayavani, Mar 20, 2020, 3:38 PM IST

20-March-17

ಸಿರುಗುಪ್ಪ: ತಾಲೂಕಿನಲ್ಲಿ ಸುಮಾರು 50 ಕಿಮೀ ಹರಿಯುವ ತುಂಗಭದ್ರಾ ನದಿ ಪಾತ್ರದಲ್ಲಿ ಮೊಸಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮನುಷ್ಯರು ಮತ್ತು ದನಗಳ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿದೆ.

ನದಿಪಾತ್ರದಲ್ಲಿ ಮೊಸಳೆಗಳಿವೆ ಎಂದು ಅರಣ್ಯ ಇಲಾಖೆ ಮಾತ್ರ ನಾಮಫಲಕಗಳನ್ನು ಅಳವಡಿಸಿಲ್ಲ! ಸಾರ್ವಜನಿಕರು ಎಲ್ಲೆಂದರಲ್ಲಿ ನದಿಗೆ ಇಳಿದು ಸ್ನಾನ ಮಾಡುವುದು, ದನಕರುಗಳಿಗೆ ನೀರು ಕುಡಿಸಿ, ಮೈತೊಳೆಯುವುದು ಮತ್ತು ಹರಿಗೋಲು ಮೂಲಕ ಹೊಲಗದ್ದೆಗಳಿಗೆ, ಪಕ್ಕದ ಗ್ರಾಮಗಳಿಗೆ ತೆರಳುವುದು ಸಾಮಾನ್ಯವಾಗಿದೆ.

ತಾಲೂಕಿನ ಎಂ. ಸೂಗೂರು, ಮಣ್ಣೂರು, ನಡವಿ, ನಿಟ್ಟೂರು, ಹೆರಕಲ್ಲು, ರುದ್ರಪಾದ, ಕೆಂಚನಗುಡ್ಡ, ದೇಶನೂರು, ಸಿರುಗುಪ್ಪ, ಗಡ್ಡೆ ವಿರುಪಾಪುರ, ಇಬ್ರಾಹಿಂಪುರ, ಬಾಗೇವಾಡಿ, ಹೊನ್ನಾರಹಳ್ಳಿ, ಚಿಕ್ಕಬಳ್ಳಾರಿ, 25-ಹಳೇಕೋಟೆ, ಶ್ರೀಧರಗಡ್ಡೆ, ಹಚ್ಚೊಳ್ಳಿ, ಮಾಟೂರು, ಚಳ್ಳೆಕೂಡ್ಲೂರು ಮುಂತಾದ ಗ್ರಾಮಗಳ ಹತ್ತಿರ ಹರಿಯುವ ತುಂಗಭದ್ರಾ ನದಿ ನೀರನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ನದಿ ಪಾತ್ರದಲ್ಲಿ ಆಗಾಗ ಕಾಣಿಸಿಕೊಳ್ಳುವ ಮೊಸಳೆಗಳಿಂದಾಗಿ ಏತನೀರಾವರಿ ಹೊಂದಿದ ರೈತರು ತಮ್ಮ ಮೋಟಾರ್‌ಗೆ ಅಳವಡಿಸಿದ ಪೈಪ್‌ ಗಳನ್ನು ಸರಿಪಡಿಸಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಮೈಮೇಲೆ ಬಿದ್ದು, ದಾಳಿ ಮಾಡುತ್ತವೋ ಎನ್ನುವ ಭಯದಲ್ಲಿಯೇ ರೈತರು ಕಾಲಕಳೆಯುತ್ತಿದ್ದಾರೆ.

ನಗರದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ, ಕೆಂಚನಗುಡ್ಡದ ನೀರು ಸಂಗ್ರಹಾಗಾರಗಳು, ವಿನಾಯಕ ಕ್ಯಾಂಪ್‌ನ ಹರಿಗೋಲ್‌ ಘಾಟ್‌, ಬಾಗೇವಾಡಿ ಮುಂತಾದ ಕಡೆಗಳಲ್ಲಿ ದೊಡ್ಡ ಗಾತ್ರದ ಮೊಸಳೆಗಳು ಕಂಡುಬರುತ್ತಿವೆ. ಕೆಂಚನಗುಡ್ಡ ಗ್ರಾಮದ ವಿಜಯನಗರ ಕಾಲುವೆಯಲ್ಲಿ ಇಂದಿಗೂ ಮೊಸಳೆಗಳು ಕಾಣಿಸಿಕೊಳ್ಳುತ್ತಿವೆ. ನಿಟ್ಟೂರು ಮತ್ತು ವಿನಾಯಕ ನಗರದ ಕ್ಯಾಂಪ್‌ ಹತ್ತಿರ ತುಂಗಭದ್ರಾ ನದಿಯಲ್ಲಿರುವ ಘಾಟ್‌ಗಳಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಮಾಡುತ್ತಿದ್ದು, ಈ ಘಾಟ್‌ಗಳ ಹತ್ತಿರ ದಡದ ಮೇಲೆ ಬಂದು ಗುಂಪುಗುಂಪಾಗಿ ಮಲಗಿಕೊಳ್ಳುವುದು ಸಾಮಾನ್ಯವಾಗಿದೆ.

ವಿನಾಯಕ ನಗರ ಘಾಟ್‌ನಲ್ಲಿ 7ಕ್ಕೂ ಹೆಚ್ಚು ಮತ್ತು ನಿಟ್ಟೂರು ಘಾಟ್‌ನಲ್ಲಿ 20ಕ್ಕೂ ಹೆಚ್ಚು ಮೊಸಳೆಗಳು ವಾಸಮಾಡುತ್ತಿವೆ ಎಂದು ನದಿ ಪಾತ್ರದ ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ನದಿಯಲ್ಲಿನ ಮೊಸಳೆಗಳು ಇಲ್ಲಿವರೆಗೆ ಅನೇಕ ಬಾರಿ ಕೇವಲ ದನಗಳ ಮೇಲೆ ಮಾತ್ರ ದಾಳಿ ಮಾಡಿದ್ದವು. ಮಂಗಳವಾರ ಹರಿಗೋಲ್‌ ಘಾಟ್‌ನ ಹತ್ತಿರ ಸಿರಗುಪ್ಪ ನಗರದ ವ್ಯಕ್ತಿಯೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ ಪ್ರಾಣ ತೆಗೆದ ಘಟನೆ ನಡೆದಿದೆ.

2019ರ ಅಕ್ಟೋಬರ್‌ನಲ್ಲಿ ಕೆಂಚನಗುಡ್ಡದ ರೈತರಾದ ಪಕ್ಕೀರಪ್ಪ, ಲಕ್ಷ್ಮಣ, ವೀರೇಶ ಎನ್ನುವವರಿಗೆ ಸೇರಿದ ಹಸು ಮತ್ತು ಎತ್ತುಗಳು ನದಿ ದಾಟುತ್ತಿದ್ದಾಗ ಮೊಸಳೆ ದಾಳಿ ಮಾಡಿ ಗಾಯಗೊಳಿಸಿದ್ದು ಬಿಟ್ಟರೆ ಹೆಚ್ಚಿನ ಕಾಟ ಕೊಟ್ಟಿರಲಿಲ್ಲ. ಆದರೆ ಇತ್ತೀಚೆಗೆ ಮನುಷ್ಯರ ಮೇಲೆ ದಾಳಿ ಮಾಡುತ್ತಿರುವುದರಿಂದ ನದಿ ಪಾತ್ರದಲ್ಲಿ ಜನ ಮೊಸಳೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕಾಗಿದೆ.

ನದಿ ಪಾತ್ರದಲ್ಲಿ ಮೊಸಳೆಗಳು ವಾಸಮಾಡುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ನಾಮಫಲಕಗಳನ್ನು ಅಳವಡಿಸುವಂತೆ ಅರಣ್ಯ ಇಲಾಖೆ ಅಧಿ ಕಾರಿಗಳಿಗೆ ಪತ್ರ ಬರೆದು ತಿಳಿಸಲಾಗುವುದು.
ಎಸ್‌.ಬಿ. ಕೂಡಲಗಿ,
ತಹಶೀಲ್ದಾರ್‌

ತಾಲೂಕಿನಲ್ಲಿ ಮೊಸಳೆಗಳು ವಾಸಿಸುವ 6 ಸ್ಥಳಗಳನ್ನು ಗುರುತಿಸಲಾಗಿದ್ದು, ಅಲ್ಲಿ ಮೊಸಳೆಗಳು ವಾಸವಿರುವ ಬಗ್ಗೆ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.
ಟಿ. ಪಂಪಾಪತಿ ನಾಯ್ಕ,
ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ

2019 ಆಗಸ್ಟ್‌ನಲ್ಲಿ ಕೆಂಚನಗುಡ್ಡದ ಹತ್ತಿರ ನದಿಯಲ್ಲಿ 2 ಜಾನುವಾರುಗಳ ಮೇಲೆ ಮೊಸಳೆ ದಾಳಿ ಮಾಡಿ ತೀವ್ರ ಗಾಯಗೊಳಿಸಿದ್ದವು. ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.
ಗಂಗಾಧರ,
ಪಶುಸಂಗೋಪನ ಇಲಾಖೆ ಅಧಿಕಾರಿ

„ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.