ಚರ್ಮ-ಕೊಂಬು ಮಾರಾಟ: ಇಬ್ಬರ ಬಂಧನ
Team Udayavani, May 19, 2022, 4:37 PM IST
ಬಳ್ಳಾರಿ: ಹೊರವಲಯದ ಹಲಕುಂದಿ ಮುಖ್ಯರಸ್ತೆಯ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಕಾನೂನು ಬಾಹಿರವಾಗಿ ವನ್ಯಜೀವಿಗಳ ಚರ್ಮ, ಕೊಂಬು, ಚಿಪ್ಪು, ಮೂಳೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿದಳ ಬಳ್ಳಾರಿ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಡೂರು ತಾಲೂಕಿನ ಎಚ್.ಕೆ. ವೀರೇಶ್, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆಯ ಹುಲಿಕುಂಟೆಪ್ಪ ಬಂಧಿತ ಆರೋಪಿಗಳು.
ಆರೋಪಿಗಳಿಬ್ಬರು ವನ್ಯಜೀವಿಗಳ ಚರ್ಮ, ಕೊಂಬು, ಚಿಪ್ಪು, ಮೂಳೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಳ್ಳಾರಿ ಘಟಕದ ಪಿಎಸ್ಐ ಎಸ್.ವಿ. ಮಾರುತಿ ಮತ್ತು ಸಿಬ್ಬಂದಿ ದಾಳಿ ನಡೆಸಿ, ಆರೋಪಿಗಳಿಬ್ಬರನ್ನು ಬಂಧಿಸುವುದರ ಜತೆಗೆ ಕೃಷ್ಣಮೃಗದ ತಲೆಬುರುಡೆ ಸಮೇತ ಎರಡು ಕೊಂಬುಗಳು, ಕೃಷ್ಣಮೃಗದ ಚರ್ಮ, ಚಿಪ್ಪು ಹಂದಿ ಚಿಪ್ಪುಗಳು, ಅದರ ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಬಳ್ಳಾರಿ ಅರಣ್ಯ ಸಂಚಾರಿ ದಳದಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್