ಹಣ ಸಂಪಾದನೆಯೊಂದಿಗೆ ಸಾಮಾಜಿಕ ಕಾಳಜಿ ಇರಲಿ: ಎಸ್ಪಿ


Team Udayavani, Nov 21, 2017, 7:22 PM IST

21-26.jpg

ಬಳ್ಳಾರಿ: ಔಷಧ ತಜ್ಞರು ಹಣ ಸಂಪಾದನೆಯ ಜೊತೆಗೆ ಸಾಮಾಜಿಕ ಸೇವೆ ಮಾಡಲೂ ಮುಂದಾಗಬೇಕು. ನಿಷೇಧಿತ ಔಷಧಗಳ ಪೂರೈಕೆಗೆ ಮುಂದಾಗಿ, ಸಮಾಜದಲ್ಲಿ ಅನಾರೋಗ್ಯಕರ ವಾತಾವರಣ ಮೂಡಿಸಬಾರದು ಎಂದು ಎಸ್‌ಪಿ ಆರ್‌. ಚೇತನ್‌ ಸಲಹೆ ನೀಡಿದರು.

ಸೋಮವಾರ ನಗರದ ವೀವಿ ಸಂಘದ ಎಎಸ್‌ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ, ಟಿವಿಎಂ ಫಾರ್ಮಸಿ ಕಾಲೇಜು, ರಾಜ್ಯ ಸರ್ಕಾರಿ ಔಷಧ ತಜ್ಞರ ಸಂಘ ಹಾಗೂ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ 56ನೇ ರಾಷ್ಟ್ರೀಯ ಔಷಧ ಶಾಸ್ತ್ರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಣಗಳಿಕೆಯ ಉದ್ದೇಶದೊಂದಿಗೆ ಮಾದಕ ರಾಸಾಯನಿಕಗಳಿರುವ ಮತ್ತು ಷೆಡ್ನೂಲ್‌-ಎಚ್‌ ಡ್ರಗ್ಸ್‌ ಮಾರಾಟ ಮಾಡಲು ಕಡ್ಡಾಯವಾಗಿ ಔಷಧ ವಿಜ್ಞಾನಾಲಯದ ಪರವಾನಗಿಯನ್ನು ಪಡೆಯಬೇಕು. ಇಲ್ಲದೆ ಹೋದಲ್ಲಿ ಇಂತಹ ಮಾರಾಟ ಕಾನೂನು ಬಾಹಿರ ಎಂದೆನಿಸಿ ಅಂತಹವರು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.

ವಿವಿಧ ಕಾಯಿಲೆಗಳಿಂದ ಮುಕ್ತಿ ಪಡೆದು ಉತ್ತಮ ಆರೋಗ್ಯ ಹೊಂದಲು ಔಷಧಗಳು ಉಪಯುಕ್ತ. ಆದರೆ, ಯಾವುದೇ ವೈದ್ಯರ ಸಲಹೆ, ಸೂಚನೆಗಳಿಲ್ಲದೇ ರೋಗಿಗಳು ಸ್ವಯಂ ಔಷಧಗಳನ್ನು ಖರೀದಿಸಿ ಬಳಸಬಾರದು. ಅತ್ಯುತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಮುಂದಾಗಬೇಕು. ಔಷಧಗಳ ಬಳಕೆ, ವಿತರಣೆ ಕುರಿತು ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದರು.

ಬೆಂಗಳೂರಿನ ಸಾಗರ್‌ ಆಸ್ಪತ್ರೆಯ ಫಾರ್ಮಸಿ ವಿಭಾಗದ ಹಿರಿಯ ವ್ಯವಸ್ಥಾಪಕ ಎಸ್‌.ಜಯಪ್ರಕಾಶ ವಸ್ತ್ರದ್‌ ಫಾರ್ಮಸಿ ಕುರಿತ ವಿಶೇಷ ಉಪನ್ಯಾಸ ನೀಡಿದರು. ಔಷಧ ವಿಜ್ಞಾನ ಕ್ಷೇತ್ರದ ವಿನೂತನ ಸಂಶೋಧನೆ, ರೋಗಿಗಳು ಅನುಸರಿಸಬೇಕಾದ ಕ್ರಮಗಳು, ಔಷಧಗಳ ಸಮರ್ಪಕ ಬಳಕೆಯ ವಿಧಾನ ಕುರಿತಾಗಿ ಅವರು ವಿವರಿಸಿದರು. 

ಕಾರ್ಯಕ್ರಮದಲ್ಲಿ ವಿಜಯನಗರ  ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ನಿರ್ದೇಶಕ ಡಾ| ಡಿ.ಪ್ರಭಂಜನ್‌ ಕುಮಾರ್‌,
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಡೇದ ಬಸವರಾಜ್‌, ಉಪಾಧ್ಯಕ್ಷ ವೀರಭದ್ರ ಶರ್ಮಾ, ತೊಗರಿ ವೀರಮಲ್ಲಪ್ಪ ಮೆಮೋರಿಯಲ್‌ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಮಂಜುನಾಥ ಜಾಲಿ, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್‌, ಪದಾಧಿಕಾರಿಗಳಾದ ಸುಧಾ, ಶಂಕರ ಜ್ಯೋತಿ, ಮಲ್ಲಿಕಾರ್ಜುನ ಇದ್ದರು. ಲಕ್ಷ್ಮೀರೆಡ್ಡಿ ನಿರೂಪಿಸಿದರು.

ಹಣ ಗಳಿಕೆಯ ಉದ್ದೇಶದೊಂದಿಗೆ ಮಾದಕ  ರಾಸಾಯನಿಕಗಳಿರುವ ಮತ್ತು ಷೆಡ್ನೂಲ್‌-ಎಚ್‌ ಡ್ರಗ್ಸ್‌ ಮಾರಾಟ ಮಾಡಲು ಕಡ್ಡಾಯವಾಗಿ ಔಷಧ ವಿಜ್ಞಾನಾಲಯದ ಪರವಾನಗಿ ಪಡೆಯಬೇಕು. ಇಲ್ಲದೆ ಹೋದರೆ ಇಂತಹ ಮಾರಾಟ ಕಾನೂನು ಬಾಹಿರ ಎಂದೆನಿಸಿ ಅಂತಹವರು ಶಿಕ್ಷೆಗೆ ಗುರಿಯಾಗುತ್ತಾರೆ.
 ಆರ್‌.ಚೇತನ್‌, ಎಸ್ಪಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.