ವಿಜಯನಗರ ಸಾಮ್ರಾಜ್ಯ ಪತನಕ್ಕೆ ಸಜ್ಜಾದ ಸಿಂಗ್
Team Udayavani, Feb 11, 2021, 3:27 PM IST
ಬಳ್ಳಾರಿ: ಶ್ರೀಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯವನ್ನು ಆಂಧ್ರಪ್ರದೇಶದವರೆಗೆ ವಿಸ್ತರಣೆ ಮಾಡಿದ್ದರೆ ಸಚಿವ ಆನಂದ ಸಿಂಗ್ ಚಿಕ್ಕದಾಗಿಸಿ ವಿಜಯನಗರ ಸಾಮ್ರಾಜ್ಯವನ್ನು ಪತನ ಮಾಡಲು ಹೊರಟಿದ್ದಾರೆ ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ಜಿಲ್ಲೆ ವಿಭಜನೆಗೆ ಬಗ್ಗೆ ಮತ್ತೂಮ್ಮೆ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಅಖಂಡವಾಗಿದ್ದ ಬಳ್ಳಾರಿ ಜಿಲ್ಲೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ವಿಭಜಿಸಿ ಕಡಿಮೆ ಮಾಡುವ ಮೂಲಕ ವಿಜಯನಗರ ಸಾಮ್ರಾಜ್ಯವನ್ನು ಪತನಗೊಳಿಸುತ್ತಿದ್ದಾರೆ. ಕೇವಲ ಐದಾರು ತಾಲೂಕುಗಳಿಗೆ ಸೀಮಿತಗೊಳಿಸಿದ್ದಾರೆ. ಸಾಮ್ರಾಜ್ಯವನ್ನು ವಿಸ್ತರಿಸಬೇಕೆ ಹೊರತು ಅದನ್ನು ಸಣ್ಣದಾಗಿ ಮಾಡಬಾರದು. ಮುಂದಿನ ದಿನಗಳಲ್ಲಿ ಹಂಪಿ ಗ್ರಾಮವೊಂದನ್ನೇ ಜಿಲ್ಲೆ ಮಾಡು ಅಂತಲೂ ಕೇಳಬಹುದೇನೋ. ವಿಜಯನಗರ ಸಾಮ್ರಾಜ್ಯ ಈಗಾಗಲೇ ಒಮ್ಮೆ ಪತನವಾಗಿದೆ. ಇದೀಗ ಆನಂದ ಸಿಂಗ್ ಎರಡನೇ ಬಾರಿಗೆ ಪತನ ಮಾಡಲು ಹೊರಟಿದ್ದಾರೆ. ಯಾವುದೇ ಕಾರಣಕ್ಕೂ ಆನಂದ ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಯಬಾರದು.
ಇದನ್ನು ನಾನು, ನಮ್ಮ ಕಾರ್ಯಕರ್ತರು ಒಪ್ಪುವುದಿಲ್ಲ. ಹಾಗಂತ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮುಖ್ಯಮಂತ್ರಿಗಳು ಕೊಟ್ಟರೆ ನಿಭಾಯಿಸುವೆ. ಒಂದು ವೇಳೆ ಸಚಿವ ಬಿ. ಶ್ರೀರಾಮುಲು ಅವರಿಗೆ ಉಸ್ತುವಾರಿ ನೀಡಿದರೂ ಓಕೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ