ಕುಡಿಯುವ ನೀರಿನ ಸಮಸ್ಯೆಗೆ ಸೋಮಶೇಖರ ರೆಡ್ಡಿ ಹೊಣೆ


Team Udayavani, May 14, 2019, 3:15 PM IST

ballry-tdy-2..

ಬಳ್ಳಾರಿ: ಯುವಸೇನಾ ಸೋಷಿಯಲ್ ಆ್ಯಕ್ಷನ್‌ ಕ್ಲಬ್‌ ಅಧ್ಯಕ್ಷ ಮೇಕಲ ಈಶ್ವರರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಳ್ಳಾರಿ: ಕುಡಿಯುವ ನೀರಿನ ಸಮಸ್ಯೆ ನಗರ ಶಾಸಕ ಬಿ.ಸೋಮಶೇಖರರೆಡ್ಡಿ ಅವರಿಗೂ ತಟ್ಟಿರುವುದು ಅವರ ಅಸಹಾಯಕತೆ ತೋರುತ್ತಿದ್ದು, ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಯುವಸೇನಾ ಸೋಷಿಯಲ್ ಆ್ಯಕ್ಷನ್‌ ಕ್ಲಬ್‌ ಅಧ್ಯಕ್ಷ ಮೇಕಲ ಈಶ್ವರರೆಡ್ಡಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕ ಜಿ.ಸೋಮಶೇಖರರೆಡ್ಡಿಯವರು ತಮ್ಮ ಮನೆಗೆ ಖಾಸಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿಕೊಂಡಿರುವುದು ಎಲ್ಲ ಪತ್ರಿಕೆಗಳಲ್ಲಿ ಬಿತ್ತರವಾಗಿದೆ. ವಾಸ್ತವದಲ್ಲಿ ಬಳ್ಳಾರಿ ನಗರಕ್ಕೆ ಪ್ರತಿ 10 ರಿಂದ 15 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಇದನ್ನು ಸರಿಪಡಿಸಲಾಗದೆ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗದೆ ತಮಗೂ ನೀರಿನ ಬಿಸಿ ತಟ್ಟಿದೆ ಎಂದು ಪತ್ರಿಕೆಗಳಲ್ಲಿ ಪ್ರಚಾರ ಪಡಿಸಿ ಸಾರ್ವಜನಿಕರ ಪ್ರಶ್ನೆಗಳಿಂದ ನುಣುಚಿಕೊಳ್ಳುತ್ತಿದ್ದಾರೆ. ಮುಂದಿನ 15 ದಿನಗಳ ಒಳಗಾಗಿ ಇರುವ ಲೋಪದೋಷಗಳನ್ನು ಸರಿಪಡಿಸಿ ಕನಿಷ್ಠ 10 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡದಿದ್ದಲ್ಲಿ ಪಾಲಿಕೆ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಗರಕ್ಕೆ ಕುಡಿವ ನೀರು ಪೂರೈಸುವ ಅಲ್ಲೀಪುರ ಕೆರೆ ಏಳುವರೆ ಮೀಟರ್‌ ನೀರಿನ ಸಾಮರ್ಥ್ಯದಿಂದ ಐದುವರೆ ಮೀಟರ್‌ಗೆ ಇಳಿಕೆಯಾಗಿದೆ. ಇದಕ್ಕೆ ಕಾರಣವೇನು? ಕೊಳಗಲ್ಲು ಗ್ರಾಮದಲ್ಲಿ ಹೊಸದಾಗಿ ಕೆರೆ ನಿರ್ಮಿಸುವುದಾಗಿ ಮಾಜಿ ಸಚಿವ ಜನಾರ್ದನರೆಡ್ಡಿ ಅವಧಿಯಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿತ್ತು. ಅದು ಸಾಧ್ಯವಾಗಿಲ್ಲ. ನಗರಕ್ಕೆ ವಾರದ ಏಳು ದಿನಗಳೂ ಕುಡಿವ ನೀರು ಪೂರೈಸುವ 24X7 ಕುಡಿಯುವ ನೀರಿನ ಯೋಜನೆ ಎಲ್ಲಿಗೆ ಬಂದು ನಿಂತಿದೆ. ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ, ಸರಿಪಡಿಸಲಾಗದ ಶಾಸಕರು ತಮ್ಮ ಮನೆಗೂ ನೀರಿನ ಬಿಸಿ ಎನ್ನುತ್ತಿರುವುದು ಅವರ ನಿಸ್ಸಾಹಾಯಕತೆ ತೋರುತ್ತಿದ್ದು, ಇಂಥ ಶಾಸಕರು ನಮಗೆ ಬೇಡ. ಕೂಡಲೇ ನೈತಿಕ ಹೊಣೆ ಹೊತ್ತು ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಎಸ್‌.ಕೃಷ್ಣಾ, ಜಿ.ಎಂ.ಬಾಷಾ, ಸಲಾವುದ್ದೀನ್‌, ತೇಜು ಪಾಟೀಲ್, ಎಂ.ರಾಮಕೃಷ್ಣ, ಶಿವಾನಂದ, ಎಂ.ಕೆ.ಜಗನ್ನಾಥ, ಬಿ.ನರಸಿಂಹಬಾಬು, ಶ್ರೀನಿವಾಸ, ಕೆ.ವೆಂಕಟೇಶ್‌, ಶ್ರೀಧರ್‌, ಪಿ.ನಾರಾಯಣಿ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.