ಬಿಸಿಲುನಾಡಲ್ಲಿ’ ಸೌತ್‌ ಆಫ್ರಿಕಾ’ಕೋವಿಡ್ ಭೀತಿ

ಜನರಲ್ಲಿ ಮತ್ತೆ ಆತಂಕ ಸೃಷ್ಟಿಸಿದ ರೂಪಾಂತರಿ ವೈರಸ್‌! ­ದಿನೇ ದಿನೇ ಹೆಚ್ಚುತ್ತಿದೆ ಸೋಂಕು

Team Udayavani, Mar 14, 2021, 6:23 PM IST

gdgsd

ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಜನ ನಿಟ್ಟುಸಿರು ಬಿಡುತ್ತಿದ್ದ ಬೆನ್ನಲ್ಲೇ ವಿದೇಶದಿಂದ ಬಂದವರಲ್ಲಿ ಎರಡನೇ ಅಲೆಯ ರೂಪಾಂತರಿ ಕೋವಿಡ್ ವೈರಸ್‌ ಪತ್ತೆಯಾಗಿದ್ದು, ಮತ್ತೆ ಆತಂಕ ಸೃಷ್ಟಿಸಿದೆ.

2020 ರಲ್ಲಿ ಜಗತ್ತನ್ನೇ ಕಾಡಿದ ಕೋವಿಡ್ ಏಪ್ರಿಲ್‌ 3 ರಂದು ಮೊದಲ ಪ್ರಕರಣ ಪತ್ತೆಯಾಗುವ ಮೂಲಕ ಬಳ್ಳಾರಿ ಜಿಲ್ಲೆಗೆ ಕಾಲಿಟ್ಟಿತ್ತು. ಹೊಸಪೇಟೆಯ ಒಂದೇ ಕುಟುಂಬದ ಮೂವರಲ್ಲಿ ಸೋಂಕು ದೃಢಪಡುವ ಮೂಲಕ ಜಿಲ್ಲೆಯ ಜನರನ್ನು ಭಯಭೀತರನ್ನಾಗಿ ಮಾಡಿತ್ತು. ಇದರ ಬೆನ್ನಲ್ಲೇ ಏಪ್ರಿಲ್‌ 5ರಂದು ಬಳ್ಳಾರಿ ನಗರದಲ್ಲಿ ಒಬ್ಬರಲ್ಲಿ ಸೋಂಕು ದೃಢಪಡುವ ಮೂಲಕ ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿತು. ಮೇ ತಿಂಗಳ ಕೊನೆಯವರೆಗೂ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಇದ್ದ ಸೋಂಕಿತರ ಸಂಖ್ಯೆ ಜೂನ್‌ ತಿಂಗಳ ಆರಂಭದಲ್ಲಿ ಜಿಂದಾಲ್‌ ಸಂಸ್ಥೆಯ ನೌಕರರಲ್ಲಿ ಕಾಣಿಸಿಕೊಳ್ಳುವ ಮೂಲಕ ಸ್ಫೋಟಗೊಂಡಿತು. ನಂತರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇತ್ತು.

ಕೆಲವೊಂದು ದಿನ 700-800 ಜನರಲ್ಲೂ ಕೋವಿಡ್ ಪತ್ತೆಯಾಗಿತ್ತು. ಇದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿತ್ತು. ಸದ್ಯ ಜಿಲ್ಲೆಯಲ್ಲಿ ಸೋಂಕು ಇಳಿಮುಖವಾಗಿದ್ದು ಶುಕ್ರವಾರ 17 ಜನರಲ್ಲಿ ಸೋಂಕು ದೃಢವಾಗಿದೆ. 103 ಸಕ್ರಿಯ ಪ್ರಕರಣಗಳು ಇವೆ. ಸೋಂಕಿನಿಂದ ಗುಣಮುಖರಾದ 7 ಜನರನ್ನು ಬಿಡುಗಡೆಗೊಳಿಸಲಾ್ಗಿದೆ. ಈವರೆಗೆ ಒಟ್ಟು 39,386 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಗುಣಮುಖರಾದ 38,686 ಜನರನ್ನು ಬಿಡುಗಡೆಗೊಳಿಸಲಾಗಿದೆ. ಈ ವರೆಗೆ 597 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ವರೆಗೆ 2,12,233 ರ್ಯಾಪಿಡ್‌ ಆ್ಯಂಟಿಜೆನ್‌, 3,42,364 ಜನರಿಗೆ ಆರ್‌ಟಿಪಿಸಿಆರ್‌ ಸೇರಿ ಒಟ್ಟು 5,54,597 ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ. ಜಿಲ್ಲೆಯಲ್ಲಿ ಪ್ರತಿದಿನ ನೂರರ ಗಡಿದಾಟುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ ಕೇವಲ ಒಂದಂಕಿ, ಎರಡಂಕಿಗೆ ಇಳಿದಿದೆ. ಕೊನೆಗೂ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಜನ ನಿಟ್ಟುಸಿರು ಬಿಡುತ್ತಿರುವಾಗಲೇ ರೂಪಾಂತರಿ ಕೋವಿಡ್ ಕಾಲಿಟ್ಟಿದ್ದು, ಮತ್ತೆ ಭಯ ಮೂಡಿಸಿದೆ.

ಹೈದ್ರಾಬಾದ್‌, ದುಬೈನಿಂದ ಬಂದವರಲ್ಲಿ ರೂಪಾಂತರಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಇದು ಉಲ್ಬಣವಾಗುತ್ತ ಹೋದಲ್ಲಿ ಮತ್ತೂಮ್ಮೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಾಗಬಹುದು ಎಂಬ ಆತಂಕ ಜನರಲ್ಲಿ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.