ಸದಸ್ಯೆ-ಅಧ್ಯಕ್ಷರ ಮಧ್ಯೆ ಮಾತಿನ ಚಕಮಕಿ


Team Udayavani, Jan 29, 2019, 8:10 AM IST

gul-6.jpg

ಕೂಡ್ಲಿಗಿ: ನನ್ನ ಮೇಲೆ ಹಣ ದುರುಪಯೋಗದ ಆರೋಪ ಮಾಡಿ ತಾಪಂನಿಂದ ಹೇಗೇ ನೋಟಿಸ್‌ ಕಳುಹಿಸಿದ್ದೀರಿ. ಹಣ ದುರುಪಯೋಗ ಸಾಬೀತು ಮಾಡುವವರೆಗೂ ಸಭೆ ನಡೆಯಲು ಬಿಡುವುದಿಲ್ಲ ಪ್ರತಿಭಟನೆ ಮಾಡುತ್ತೇನೆ ಎಂದು ತಾಪಂ ಅಧ್ಯಕ್ಷರ ವಿರುದ್ಧ ಸದಸ್ಯೆಂಯೋಬ್ಬರು ವಾಗ್ಧಾಳಿ ನಡೆಸಿದ ಪರಿ ಇದು. ಸೋಮವಾರ ನಡೆದ ತಾಪಂ ಸಭೆ ಗೊಂದಲ ಗೂಡಾಗಿ ಪರಿಣಮಿಸಿತು.

ತಾಪಂ ವಾಣಿಜ್ಯ ಮಳಿಗೆಗಳನ್ನು ತಾಲೂಕಿನ ಗುಂಡುಮುಣಗು ತಾಪಂ ಸದಸ್ಯೆ ಸರೋಜಾ ಅವರ ಪತಿ ಸೂರ್ಯ ಪಾಪಣ್ಣ ಬಾಡಿಗೆಗೆ ಪಡೆದಿದ್ದು, ವರ್ಷಗಳೇ ಕಳೆದರೂ ಬಾಡಿಗೆ ಹಣ ಪಾವತಿ ಯಾಕೆ ಮಾಡಿಲ್ಲ. ಈ ಬಗ್ಗೆ ಸೂಕ್ತ ವಿವರಣೆ ಕೊಡಿ ಎಂದು ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅವರ ಸೂಚನೆ ಮೇರೆಗೆ ತಾಪಂ ಇಒ ನೋಟಿಸ್‌ ಕಳುಹಿಸಿದ್ದಾರೆ. ಸೂರ್ಯಪಾಪಣ್ಣ ತಮ್ಮ ಪ್ರಭಾವ ಬಳಸಿ ರಾಮದುರ್ಗ ಕೆರೆಯ ಟೆಂಡರ್‌ ಕರೆಯದೇ ಪತ್ರಿಕಾ ಪ್ರಕಟಣೆ ನೀಡದೇ ಗ್ರಾಪಂ ಸಭೆಯಲ್ಲಿ ತೀರ್ಮಾನಿಸಿ, ಸರ್ಕಾರಿ ನಿಯಮ ಉಲ್ಲಂಘಿಸಿ ಕೆರೆಯ ವಿಲೇವಾರಿ ಹಕ್ಕನ್ನು ಪಡೆದಿದ್ದಾರೆ. ಈ ಎರಡು ಆರೋಪಗಳನ್ನು ತಾಪಂ ಅಧ್ಯಕ್ಷ ವೆಂಕಟೇಶನಾಯ್ಕ ಅವರು ಮಾಡಿದ್ದಾರೆ. ಅಲ್ಲದೇ ಗುಂಡುಮುಣಗು ತಾಪಂ ಸದಸ್ಯೆ ಸರೋಜಮ್ಮ ಅವರ ಕ್ಷೇತ್ರದಲ್ಲಿ 3 ವರ್ಷದ ಅವಧಿಯಲ್ಲಿ ಅಧಿಕಾರಿಗಳನ್ನು ಹೆದರಿಸಿ ಕಾಮಗಾರಿ ಮಾಡದೇ ಬಿಲ್‌ ಪಡೆದಿರುತ್ತಾರೆ. ಹೀಗಾಗಿ ತಾಪಂ ಅಧಿಕಾರಿಗಳು ತಾವೇ ಖುದ್ದಾಗಿ ರಾಮದುರ್ಗ ಹಾಗೂ ಗುಂಡುಮುಣುಗು ಕ್ಷೇತ್ರಗಳ ಕಾಮಗಾರಿಗಳನ್ನು ಪರಿಶೀಲಿಸಿ 10 ದಿನಗಳೊಳಗೆ ವರದಿ ನೀಡಬೇಕು. ಇಲ್ಲವಾದಲ್ಲಿ ಈ ವಿಷಯವನ್ನು ಜಿಪಂ ಸಭೆಯಲ್ಲಿ ಚರ್ಚಿಸುವೆ ಎಂದು ಇಒಗೆ ಡಿ. 11 ರಂದು ಲಿಖೀತವಾಗಿ ದೂರು ನೀಡಿದ್ದಾರೆ. ಇದರಂತೆ ಇಒ ಬಸಣ್ಣ ಅವರು ತಾಪಂ ಸದಸ್ಯೆ ಪತಿ ಸೂರ್ಯ ಪಾಪಣ್ಣ ಅವರಿಗೆ ಡಿ.12 ರಂದು ತಾಪಂ ಇಒ ಬಸಣ್ಣ ಅವರು ನೋಟಿಸ್‌ ನೀಡಿದ್ದಾರೆ. ಇದರಿಂದ ತಾಪಂ ಸದಸ್ಯೆ ಸರೋಜಾ ಪಾಪಣ್ಣ ಅವರು ಸೋಮವಾರ ತಾಪಂ ಸಾಮಾನ್ಯ ಸಭೆ ನಡೆಯುತ್ತಿದ್ದಂತೆ ಅಧ್ಯಕ್ಷರ ವಿರುದ್ಧ ವಾಗ್ಧಾಳಿ ನಡೆಸಿದರು.

ಇದರಿಂದ ಆಕ್ರೋಶಗೊಂಡ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಮಾತನಾಡಿ, ನಿಮ್ಮ ಪತಿ ಮಳಿಗೆ ಬಾಡಿಗೆ ಪಡೆದು ಯಾಕೆ ಬಾಡಿಗೆ ಕಟ್ಟಿಲ್ಲ. ಇದಕ್ಕಾಗಿ ನೋಟಿಸ್‌ ನೀಡಿರುವುದು ನಿಜ. ಬಾಡಿಗೆ ಕಟ್ಟಿ ಎಂದು ತಿಳಿಸಿದರು.

ನೀವು ಯಾವ ಆಧಾರದ ಮೇಲೆ ಅನುಮೋದನೆ ಮಾಡಿದ್ದೀರಿ ಎಂದು ತಾಪಂ ಸದಸ್ಯೆ ಸರೋಜಾ ಅಧ್ಯಕ್ಷರನ್ನು ಪ್ರಶ್ನಿಸಿದರು. ಬಾಡಿಗೆ ಬೇಕು ಎಂದು ಅರ್ಜಿ ನೀಡದೇ ಬಾಡಿಗೆ ನೀಡಿರುವುದು ತಪ್ಪಲ್ಲವೇ. ನೀವು ಸರ್ಕಾರಿ ನಿಯಮ ಉಲ್ಲಂಘಿಸಿದಂತಲ್ಲವೇ ಎಂದು ಮರುಪ್ರಶ್ನೆ ಮಾಡಿದರು.

ಇಒ ಬಸಣ್ಣ ಕೂಡ ಈ ಪ್ರಶ್ನೆಗೆ ಉತ್ತರ ನೀಡದೇ ಸುಮ್ಮನಾದರು. ನನ್ನ ಮೇಲೆ ವಿನಾಕಾರಣ ಅಧಿಕಾರಿಗಳನ್ನು ಬೆದರಿಸಿ ಕಾಮಗಾರಿ ಮಾಡದೆ ಬಿಲ್‌ ಡ್ರಾ ಮಾಡಿಕೊಂಡಿದ್ದಾರೆ ಎಂದು ತಾಪಂ ಅಧ್ಯಕ್ಷರು ಆರೋಪಿಸಿದ್ದಾರೆ. ಅದನ್ನು ಸಾಬೀತು ಮಾಡುವವರೆಗೂ ಸಭೆ ನಡೆಯಲು ಬಿಡುವುದಿಲ್ಲ ಎಂದು ಸಭೆ ಮಧ್ಯದಲ್ಲಿ ಬಂದು ಸದಸ್ಯೆ ಕುಳಿತರು.

ತಕ್ಷಣವೇ ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅವರು ಪೊಲೀಸರ ಕರೆಯಿಸಿ ನಿಮ್ಮನ್ನು ಹೊರಗೆ ಕಳುಹಿಸಿ ಸಭೆ ಮಾಡ್ತೀನಿ ಎಂದು ಠಾಣೆಗೆ ಕರೆ ಮಾಡಿ ಇಬ್ಬರು ಮಹಿಳಾ ಪೊಲೀಸರನ್ನು ಕರೆಯಿಸಿದರು. ಪೊಲೀಸರು ಬರುವಷ್ಟರಲ್ಲಿ ತಾಪಂ ಸದಸ್ಯ ಹೂಡೇಂ ಪಾಪಾನಾಯಕ ಅವರು ಅಧ್ಯಕ್ಷರನ್ನು ಸಮಾಧಾನಪಡಿಸಿದರು. ನಂತರ ಸರೋಜಾ ಪಾಪಣ್ಣ ಸಭೆಯಲ್ಲಿ ಕುಳಿತರು.

ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಚರ್ಚಿಸಲಾಯಿತು. ತಾಪಂ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅಮಲಾಪುರ ಬಸವರಾಜ, ತಾಪಂ ಇಒ ಬಸಣ್ಣ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಒಗಳು ತಾಪಂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.