ಡಿಕೆಶಿ- ರಾಮುಲು ವಾಕ್ಸಮರ
Team Udayavani, Oct 17, 2018, 6:00 AM IST
ಬಳ್ಳಾರಿ: ಲೋಕಸಭೆ ಉಪಚುನಾವಣೆಯ ಹೈ ವೋಲ್ಟೆಜ್ ಕ್ಷೇತ್ರವಾಗಿರುವ ಬಳ್ಳಾರಿಯಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು ಮಧ್ಯೆ ಪರಸ್ಪರ ವಾಕ್ಸಮರ ನಡೆದಿದೆ.
ಸುದ್ದಿಗಾರರ ಜತೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್: “ಶ್ರೀರಾಮುಲುಗೆ ದೊಡ್ಡ ನಮಸ್ಕಾರ. ಅವರು ರಾಮಾಯಣದ ರಾಮನ ವಂಶಸ್ಥರು. ಅವರೊಬ್ಬ ದೊಡ್ಡ ನಾಯಕರು. ಅವರು ಎಲ್ಲಿ ಕಳುಹಿಸಿದ್ರೂ ಒಪ್ಪುತ್ತೇನೆ. ನ.6ಕ್ಕೆ ನನ್ನ ಬಂಧನವಾಗುತ್ತದೆ ಎಂದು ಅವರು ಹೇಳುತ್ತಿದ್ದಾರೆ. ಆದರೆ, ಅಂದು ಜನರೇ ಇವರಿಗೆ ಸರಿಯಾದ ಉತ್ತರ ನೀಡಲಿದ್ದಾರೆ ಎಂದರು. ಇದಕ್ಕೆ ತಿರುಗೇಟು ನೀಡಿದ ಶಾಸಕ ಬಿ.ಶ್ರೀರಾಮುಲು: “ಡಿ.ಕೆ.ಶಿವಕುಮಾರ್ ಅವರಂತೆ ನಾಟಕೀಯ ಮಾತುಗಳನ್ನು ಹೇಳಿ ರಾಜಕೀಯ ಮಾಡುವ ವ್ಯಕ್ತಿ ನಾನಲ್ಲ. ನೇರವಾಗಿ ನುಡಿದಂತೆ ನಡೆದುರಾಜಕೀಯ ಮಾಡಿದವನು. ಬೆಳಗಾವಿಯಲ್ಲಿ ರಾಜಕೀಯ ಮಾಡಲು ಹೋಗಿ, ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ವಿರುದಟಛಿ ಸೋತು ಸುಣ್ಣವಾಗಿ ಜಿಲ್ಲೆಯಲ್ಲಿ ವಾಲ್ಮೀಕಿ ಮುಖಂಡರನ್ನು ತುಳಿಯಬೇಕೆಂಬ
ಉದ್ದೇಶದಿಂದ ಕನಕಪುರ ಗೌಡರು ಬಳ್ಳಾರಿಗೆ ಬಂದಿದ್ದಾರೆ. ಕಳೆದ ಬಾರಿ ಭ್ರಷ್ಟಾಚಾರ ಬಗ್ಗೆ ಸತ್ಯಹರಿಶ್ಚಂದ್ರರಂತೆ
ಮಾತನಾಡಿದ್ದ ಡಿಕೆಶಿ, ಇಂದು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ.
ಅವರ ಮನೆಯಲ್ಲಿ ಸಿಕ್ಕ ಹಣ ಬಡವರ ಹಣ. ತಪ್ಪು ಮಾಡಿದ್ದೇನೆ. ತೊಂದರೆಯಲ್ಲಿ ಸಿಲುಕುತ್ತೇನೆ ಎಂಬ ಭಯ ಅವರಲ್ಲಿದ್ದರೂ, ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಇದ್ದಾರೆ. ನಾವು ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ರಾಜಕೀಯ ಮಾಡುವಂತವರು. ಅವರಿಂದಲೇ ಜೆ.ಶಾಂತಾ ಜಯಗಳಿಸಲಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ