ಶ್ರೀಜಂಬುನಾಥೇಶ್ವರವೈಭವದ ರಥೋತ್ಸವ
Team Udayavani, Mar 30, 2018, 10:30 AM IST
ಹೊಸಪೇಟೆ: ನಗರದ ಲೋಹಾದ್ರಿ ಬೆಟ್ಟದಲ್ಲಿರುವ ಶ್ರೀಜಂಭುನಾಥಸ್ವಾಮಿ ರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಶ್ರೀಜಂಬುನಾಥಸ್ವಾಮಿಗೆ ವಿಶೇಷ ಅಭಿಷೇಕ, ಪುಷ್ಪಲಂಕಾರ ನೆರವೇರಿಸಲಾಯಿತು. ಬೆಳಗ್ಗೆ 9ಕ್ಕೆ ಸಂಪ್ರದಾಯದಂತೆ ಉತ್ಸವ ಮೂರ್ತಿಯೊಂದಿಗೆ ಭಕ್ತರು ಮಡಿತೇರು ಎಳೆದರು. ಬೆಳಗ್ಗೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಶ್ರೀಸ್ವಾಮಿಯ ದರ್ಶನ ಪಡೆದರು. ಬೇಸಿಗೆ ಬಿಸಿಲು ಲೆಕ್ಕಿಸದೆ ಜಂಭುನಾಥಸ್ವಾಮಿಯ ನಾಮಸ್ಮರಣೆಯೊಂದಿಗೆ ನಗರದಿಂದ ಮೂರು ಕಿ.ಮೀ. ನಡಿಗೆಯಲ್ಲಿ ಗುಡ್ಡಕ್ಕೆ ತೆರಳಿದರು. ರಸ್ತೆಯುದ್ದಕ್ಕೂ ಭಕ್ತರ ದಾಹ ತಣಿಸಲು ಭಕ್ತರೇ ನೀರಿನ ಅರವಟಿಗೆಗಳನ್ನಿಟ್ಟು ದಣಿವು, ದಾಹ ತಣಿಸಿದರೆ, ಇನ್ನೂ ಕೆಲವರು ಮಜ್ಜಿಗೆ, ಅನ್ನದಾಸೋಹ ಮಾಡಿ ಭಕ್ತಿಸೇವೆ ಸಲ್ಲಿಸಿದರು. ಶ್ರೀಜಂಭುನಾಥಸ್ವಾಮಿ ದೇವಸ್ಥಾನದಲ್ಲಿ ಮಾ.30ರಂದು ಕಡುಬಿನ ಕಾಳಗ ನಡೆಯಲಿದೆ. ಏ.5ರಂದು ಮಧ್ಯರಾತ್ರಿ 12ರಿಂದ ಬೆಳಗ್ಗೆ 5ರವರೆಗೆ ಗಂಗೆ ಪೂಜೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು