ಲೋಕೋಪಯೋಗಿ ಖಾತೆ ಮೇಲೆ ಕಣ್ಣು

ಡಿಸಿಎಂ ಹುದ್ದೆ ಕೈತಪ್ಪುವ ಸಂಭವ ; ಖಾತೆ ಬದಲಾವಣೆಗೆ ಸಿಎಂಗೆ ಶ್ರೀರಾಮುಲು ಬೇಡಿಕೆ

Team Udayavani, Dec 13, 2019, 5:26 AM IST

sa-54

ಬಳ್ಳಾರಿ: ಉಪಚುನಾವಣೆ ನಂತರ ಆದ ರಾಜಕೀಯ ಬದಲಾವಣೆಯಿಂದ ಉಪಮುಖ್ಯಮಂತ್ರಿ ಸ್ಥಾನ ಕೈ ತಪ್ಪುವುದನ್ನು ಮನಗಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಈಗ ಖಾತೆ ಬದಲಾವಣೆಗೆ ಮನವಿ ಸಲ್ಲಿಸಿದ್ದಾರೆ.

ಕೊನೆಗೂ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ ಸಿಎಂ ಯಡಿಯೂರಪ್ಪ ಬಳಿ ಹೊಸ ಬೇಡಿಕೆಗಳನ್ನಿಡಲು ಮುಂದಾಗಿದ್ದಾರೆ. ಶೀಘ್ರದಲ್ಲೇ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಲೋಕೋಪಯೋಗಿ ಇಲಾಖೆ ಖಾತೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೋಕಾಕ ಕ್ಷೇತ್ರದಲ್ಲಿ ರಮೇಶ್‌ ಜಾರಕಿಹೊಳಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ.
ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಲಭಿಸೋದು ಸುಲಭವಲ್ಲ. ಅಲ್ಲದೆ ಈ ಹುದ್ದೆ ರಮೇಶ್‌ ಜಾರಕಿಹೊಳಿ ಪಾಲಾಗಲಿದೆ ಎಂಬ ಮಾತು ಸಹ ರಾಜಕೀಯ ಪಡಸಾಲೆಯಲ್ಲಿ ಜೋರಾಗಿದೆ. ಹೀಗಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಸಿಎಂ ಯಡಿಯೂರಪ್ಪ ಬಳಿ ಹೊಸ ಬೇಡಿಕೆ ಮುಂದಿಡಲು ಸಜ್ಜಾಗಿದ್ದಾರೆ. ಈ ಮೊದಲು ಹೇಳಿದಂತೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು. ಇಲ್ಲದಿದ್ದರೆ ಖಾತೆ ಬದಲಾಯಿಸಿ ಲೋಕೋಪಯೋಗಿ ಖಾತೆ ನೀಡುವಂತೆ ಬೇಡಿಕೆ ಇಡಲು ಸಿದ್ಧರಾಗಿದ್ದಾರೆ. ಒಂದು ವೇಳೆ
ತಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ವರಿಷ್ಠರಿಂದಲೂ ಒತ್ತಡ ಹೇರಲು ರಾಮುಲು ಮುಂದಾಗಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಕುಗ್ಗಿದ ರಾಮುಲು ಬಲ: ಒಂದು ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನೇ ರಚನೆ ಮಾಡುವಷ್ಟು ಸಾಮರ್ಥ್ಯ ಹೊಂದಿದ್ದ ರೆಡ್ಡಿ ಸಹೋದರರ ಪರಮಾಪ್ತ ರಾಮುಲು ಇಂದು ಖಾತೆ ಬದಲಾವಣೆಗಾಗಿ
ಮುಖ್ಯಮಂತ್ರಿ ಬಳಿ ದುಂಬಾಲು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. 2008ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೇಕಾಗಿದ್ದ ಪಕ್ಷೇತರ ಶಾಸಕರ ಬೆಂಬಲ ಕೊಡಿಸುವಲ್ಲಿ ರೆಡ್ಡಿ, ರಾಮುಲು ಯಶಸ್ವಿಯಾಗಿದ್ದರು. ರಾಮುಲು ಸೇರಿ ರೆಡ್ಡಿ ಸಹೋದರರು ಕಂದಾಯ,
ಪ್ರವಾಸೋದ್ಯಮ, ಆರೋಗ್ಯ ಖಾತೆ ಸೇರಿ ಕೆಎಂಎಫ್‌ ಅಧ್ಯಕ್ಷ ಸ್ಥಾನವನ್ನೂ ತಮ್ಮದಾಗಿಸಿಕೊಂಡಿದ್ದರು. ಪಕ್ಷ ಸೇರಿದಂತೆ ರಾಜ್ಯದಲ್ಲೂ ತಮ್ಮದೇ ವರ್ಚಸ್ಸು ಸೃಷ್ಟಿಸಿಕೊಂಡಿದ್ದ ಶ್ರೀರಾಮುಲು ಅವರಿಗೆ
ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆದ್ದಿರುವುದರಿಂದ ಪಕ್ಷದಲ್ಲಿ ಅರ್ಹತೆಯ ಪ್ರಶ್ನೆ ಎದುರಾಗಿದೆ. ಕೇಳಿದ ಹುದ್ದೆ, ಖಾತೆ ಪಡೆಯಲಾಗದೆ ನೀಡಿದ ಖಾತೆಗೆ ತೃಪ್ತಿಪಟ್ಟುಕೊಳ್ಳಬೇಕಾದ ಪರಿಸ್ಥಿತಿ
ನಿರ್ಮಾಣವಾಗಿದೆ.

ಸಿಎಂ ಮೇಲೆ ಒತ್ತಡ
2018ರ ವಿಧಾನಸಭೆ ಚುನಾವಣೆ ವೇಳೆಯಿಂದಲೂ ಉಪಮುಖ್ಯಮಂತ್ರಿ ಹುದ್ದೆ ನಿರೀಕ್ಷೆಯಲ್ಲಿದ್ದ ಶ್ರೀರಾಮುಲು ಇಂದಲ್ಲ ನಾಳೆ ಹುದ್ದೆ ಸಿಗಲಿದೆ ಎಂದು ತಮಗೆ ನೀಡಿದ್ದ ಆರೋಗ್ಯ ಖಾತೆಯನ್ನೇ ನಿಭಾಯಿಸುತ್ತಿದ್ದರು. ಆದರೆ ಈಗ ಲೋಕೋಪಯೋಗಿ ಖಾತೆ ನೀಡುವಂತೆ ಸಿಎಂ ಮೇಲೆ ಒತ್ತಡ
ಹೇರುವ ಮೂಲಕ ನಿಧಾನವಾಗಿ ವೈಲೆಂಟ್‌ ಆಗುತ್ತಿದ್ದಾರೆ ಎನ್ನಲಾಗಿದೆ. ಇವರ ಒತ್ತಡಕ್ಕೆ ಸಿಎಂ ಮಣಿದು ಖಾತೆ ಬದಲಾಯಿಸುವರೋ ಅಥವಾ ಇರುವ ಖಾತೆಯಲ್ಲೇ ಮುಂದುವರಿಸುವರೋ ಕಾದು ನೋಡಬೇಕಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.