28-29ಕ್ಕೆ ರೈತ -ಕೃಷಿ ಕಾರ್ಮಿಕರ ರಾಜ್ಯ ಸಮ್ಮೇಳನ

ಧಾರವಾಡ ನೌಕರರ ಭವನದಲ್ಲಿ ಆಯೋಜನೆ, ಬಳ್ಳಾರಿಯಿಂದ ನೂರು ಪ್ರತಿನಿಧಿಗಳು ಭಾಗಿ

Team Udayavani, Apr 14, 2022, 2:05 PM IST

ballary

ಬಳ್ಳಾರಿ: ಅಖೀಲ ಭಾರತ ಕೃಷಿ ಕಾರ್ಮಿಕ ಸಂಘಟನೆಯಿಂದ ಏ.28, 29 ರಂದು ಧಾರವಾಡ ನೌಕರರ ಭವನದಲ್ಲಿ 2ನೇ ರಾಜ್ಯಮಟ್ಟದ ರೈತ ಕೃಷಿ ಕಾರ್ಮಿಕರ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ಸುಮಾರು ನೂರು ಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದು ಸಂಘಟನೆ ರಾಜ್ಯ ಖಜಾಂಚಿ ವಿ.ನಾಗಮ್ಮಾಳ್‌ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ರೈತರು, ಕೃಷಿ ಕಾರ್ಮಿಕರ ಪರಿಸ್ಥಿತಿ ದಿನಗಳೆದಂತೆ ಚಿಂತಾಜನಕವಾಗಿದೆ. ಕೃಷಿಯೇ ಬೇಡವೆಂದು ಪಟ್ಟಣಗಳಿಗೆ ವಲಸೆ ಹೋಗುವುದು ಸಾಮಾನ್ಯವಾಗಿದೆ. ಸಣ್ಣ, ಮಧ್ಯಮ ರೈತರಿಗೆ ಕೃಷಿಯು ಆತ್ಮಹತ್ಯೆಯ ದಾರಿಯಾಗಿದೆ. 1991ರಲ್ಲಿ ಅಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಉದಾರೀಕರಣ, ಖಾಸಗೀಕರಣ, ಜಾಗತೀಕರಣ ನೀತಿಗಳ ಪರಿಣಾಮ ಕೃಷಿ ಮಾರುಕಟ್ಟೆ, ಬೀಜ, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಉತ್ಪಾದನೆ ಮತ್ತು ಮಾರಾಟಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸಲಾಗಿದ್ದು, ನಂತರ ಸರ್ಕಾರದ ಸರಬರಾಜನ್ನು ನಿಲ್ಲಿಸಲಾಗುತ್ತಿದೆ ಎಂದ ಅವರು, ಈ ಕೃಷಿ ವಿರೋಧಿ ನೀತಿಗಳು, ರೈತ-ಕೃಷಿ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಪ್ರಬಲ ಚಳುವಳಿ ಕಟ್ಟುವ ಉದ್ದೇಶದಿಂದ ಧಾರವಾಡದಲ್ಲಿ ಏ.28 ರಿಂದ ಈ ಸಮ್ಮೇಳನ ಸಂಘಟಿಸಲಾಗಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ರಾಜ್ಯ ಸರ್ಕಾರವು ಎಪಿಎಂಸಿ (ತಿದ್ದುಪಡಿ) ಕಾಯ್ದೆ, ಭೂ ಸುಧಾರಣೆ (ತಿದ್ದುಪಡಿ) ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ವಿದ್ಯುತ್‌ ಕಾಯ್ದೆ ತಿದ್ದುಪಡಿ 2021 ಜಾರಿಗೊಳಿಸಬಾರದು. ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ, ವಿದ್ಯುತ್‌ ಖಾಸಗೀಕರಣ ಮಾಡಬಾರದು. ನರೇಗಾ ಯೋಜನೆಯಡಿ 200 ದಿನಗಳು ಕೆಲಸ ನೀಡಬೇಕು. ಕನಿಷ್ಠ ಕೂಲಿ 600 ರೂ.ಗೆ ನಿಗದಿಪಡಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಬೇಕು. ನೀರಿನ ಖಾಸಗೀಕರಣ ಮಾಡುವ ಜಲಜೀವನ್‌ ಮಿಷನ್‌ ಯೋಜನೆ ಹಿಂತೆಗೆದುಕೊಳ್ಳಬೇಕು. ಪ್ರವಾಹ, ಅಕಾಲಿಕ, ಅತಿಯಾದ ಮಳೆ ಮತ್ತು ಬರದಿಂದ ನಷ್ಟ ಹೊಂದಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ರೈತರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಕನಿಷ್ಠ ಬೆಂಬಲ ಬೆಲೆ ಕಾನೂನುಬದ್ಧಗೊಳಿಸಬೇಕು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಹಕ್ಕೊತ್ತಾಯಗಳನ್ನು ಮಂಡಿಸಲಾಗುತ್ತದೆ ಎಂದವರು ವಿವರಿಸಿದರು.

ಸಮ್ಮೇಳನವನ್ನು ಖ್ಯಾತ ಬಂಡಾಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಉದ್ಘಾಟಿಸುವರು. ಅತಿಥಿಯಾಗಿ ಕೊಪ್ಪಳದ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಮುಖ್ಯಭಾಷಣಕಾರರಾಗಿ ಎಐಕೆಕೆಎಂಎಸ್‌ ಅಧ್ಯಕ್ಷ ಸತ್ಯವಾನ್‌ ಭಾಗವಹಿಸುವರು. ಎಐಕೆಕೆಎಂಎಸ್‌ ರಾಜ್ಯಾಧ್ಯಕ್ಷ ಟಿ.ಎಸ್. ಸುನೀತ್‌ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದಲ್ಲಿ ಬಳ್ಳಾರಿ ಜಿಲ್ಲೆಯಿಂದ ಸುಮಾರು 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋವಿಂದ್‌, ಕಾರ್ಯದರ್ಶಿ ಗುರಳ್ಳಿ ರಾಜ, ಹನುಮಂತಪ್ಪ ಇದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.