ದೇವಸ್ಥಾನ ಸುತ್ತ ಗಣಿಗಾರಿಕೆ ನಿಲ್ಲಿಸಿ


Team Udayavani, Jun 19, 2018, 10:40 AM IST

ballery-2.jpg

ಸಂಡೂರು: ತಾಲೂಕಿನ ಐತಿಹಾಸಿಕ ಕ್ಷೇತ್ರ ಶ್ರೀಕುಮಾರಸ್ವಾಮಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶದ 3 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಲ್ಲಿಸಿ ದೇವಸ್ಥಾನ ರಕ್ಷಿಸಬೇಕೆಂದು ಒತ್ತಾಯಿಸಿ ಜನಸಂಗ್ರಾಮ ಪರಿಷತ್‌ ಹಾಗೂ ಎಐಡಿಎಸ್‌ಒ ಪದಾಧಿಕಾರಿಗಳು ತಹಶೀಲ್ದಾರ್‌ ಎಚ್‌. ಎಂ.ರಮೇಶ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜನಸಂಗ್ರಾಮ ಪರಿಷತ್‌ ಮುಖಂಡ ಶ್ರೀಶೈಲ ಅಲ್ದಳ್ಳಿ, ಈಗಾಗಲೇ ಹಲವಾರು ಬಾರಿ ದೇವಸ್ಥಾನ ಉಳಿಸಿ ಎಂದು ಒತ್ತಾಯಿಸಿ ಪಾದಯಾತ್ರೆ ಮೂಲಕ ಹೋರಾಟ ಮಾಡಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ದೇವಸ್ಥಾನ ರಕ್ಷಿಸುವುದಾಗಿ ಭರವಸೆ ನೀಡಿದ್ದರು.

ಆದರೆ ಈಗ ಎಚ್‌.ಟಿ. ಮೈನಿಂಗ್‌ ಕಂಪನಿಯ ಪ್ರದೇಶದಲ್ಲಿ ಜಿಂದಾಲ್‌ ಕಂಪನಿಯ ಒಡೆತನದ ನಂದಿ ಮೈನಿಂಗ್‌ ಕಂಪನಿಗೆ ಅದಿರು ಉತ್ಪಾದನೆ ಮಾಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಿನಾಂಕ: 31.05.2018ರಂದು ಪರವಾನಗಿ ನೀಡಿದ್ದು, ಕೂಡಲೇ ಗಣಿಗಾರಿಕೆ ನಿಲ್ಲಿಸಬೇಕು.ದೇವಸ್ಥಾನದ ಸುತ್ತ 3 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು. ಅಲ್ಲದೇ ಆ ಪ್ರದೇಶವನ್ನು ರಾಷ್ಟ್ರೀಯ ಪಾರಂಪರಿಕ ತಾಣ ಎಂದು ಘೋಷಿಸಬೇಕೆಂದು ಆಗ್ರಹಿಸಿದರು.

ಜನಸಂಗ್ರಾಮ ಪರಿಷತ್‌ ಜಿಲ್ಲಾ ಮುಖಂಡ ಟಿ.ಎಂ.ಶಿವಕುಮಾರ್‌ ಮಾತನಾಡಿ, ತಾಲೂಕಿನ ಆರಾಧ್ಯ ದೈವ ಶ್ರೀಪಾರ್ವತಿ ಮತ್ತು ಕುಮಾರಸ್ವಾಮಿ ದೇವಸ್ಥಾನಗಳು ಸಮುದ್ರ ಮಟ್ಟದಿಂದ 3500 ಅಡಿ ಎತ್ತರದಲ್ಲಿವೆ. ಇದು ಐತಿಹಾಸಿಕ ಸ್ವಾಮಿ ಮಲೈ ಬೆಟ್ಟವೆಂದು ರಾಮಾಯಣ, ಮಹಾಭಾರತಗಳಲ್ಲಿ ಪ್ರಸಿದ್ಧವಾಗಿವೆ. 12 ವರ್ಷಕ್ಕೊಮ್ಮೆ ನೀಲಕುರಂಜಿ ಎನ್ನುವ ವಿಶೇಷ ಸಸ್ಯ ಪ್ರಭೇದ ಹೊಂದಿದೆ.

ಅಲ್ಲದೇ ಶ್ರೀಗಂಧ, ತೇಗದಂತಹ ಅಪರೂಪದ ಸಸ್ಯ ವರ್ಗವಿದೆ. ಸಾವಿರಾರು ಔಷಧ  ಸಸ್ಯಗಳ ತಾಣವಾಗಿದೆ. ರಾಷ್ಟ್ರೀಯ ಪಕ್ಷಿ ನವಿಲು ವಾಸಿಸುವ ತಾಣವೂ ಇದಾಗಿದೆ. ಆದ್ದರಿಂದ ದೇವಸ್ಥಾನದ ಸುತ್ತ 3 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು. 1978ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆದು ಕೇವಲ 200 ಮೀಟರ್‌ಗೆ ನಿಗದಿ ಮಾಡಿದ್ದು, ಇದು ದೇವಸ್ಥಾನಕ್ಕೆ ಅಪಾಯ ತಂದೊಡ್ಡಿದೆ. ಆದ್ದರಿಂದ ಕೂಡಲೇ ಪರವಾನಗಿ ರದ್ದು ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ದೇವಸ್ಥಾನದ ಉಳುವಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಿನಾಂಕ: 12.03.2001 ಹಾಗೂ 2005ರ ಸುತ್ತೋಲೆಯ ಮೂಲಕ ಸರ್ಕಾರದ ಗಮನ ಸೆಳೆದಿದೆ. ಅಲ್ಲದೇ, ಈ ಪ್ರದೇಶ ಅಕ್ರಮ ಗಣಿಗಾರಿಕೆ ಎಂದು ಸಾಬೀತಾಗಿ ಗಣಿಗಾರಿಕೆ ಸ್ಥಗಿತಕ್ಕೆಲೋಕಾಯುಕ್ತ ಆದೇಶಿಸಿದೆ. ಆದರೆ ಸರ್ಕಾರ ಸಿ ಕ್ಯಾಟಗರಿ ಗಣಿ ಕಂಪನಿಗಳನ್ನು ಇ-ಹರಾಜು ಮೂಲಕ ಪ್ರಾರಂಭಸಿದ್ದು, ಕೂಡಲೇ ದೇವಸ್ಥಾನದ ಸುತ್ತ  ಗಣಿಗಾರಿಕೆ ನಿಲ್ಲಬೇಕು. 

ರಾಷ್ಟ್ರೀಯ ಪಾರಂಪಾರಿಕೆ ಅರಣ್ಯ ಪ್ರದೇಶ ಎಂದು ಘೋಷಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಗೋವಿಂದ, ಮುಖಂಡರಾದ ಮಂಜು, ಹನುಮಂತಪ್ಪ, ಸೋಮಶೇಖರ್‌,
ಸೋಮಶೇಖರಗೌಡ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.