ಮಾಲಾಧಾರಿಗಳು ದುಶ್ಚಟದಿಂದ ದೂರವಿರಿ: ನಾಯ್ಕ


Team Udayavani, Feb 12, 2019, 9:14 AM IST

bell-6.jpg

ಹರಪನಹಳ್ಳಿ; ಸಂತ ಶ್ರೀಸೇವಾಲಾಲ್‌ ಮಹಾರಾಜರ 280ನೇ ಜಯಂತ್ಯುತ್ಸವದ ಅಂಗವಾಗಿ ತಾಲೂಕಿನ ಮಾಡಲಗೇರಿ ತಾಂಡಾದಿಂದ ಮಾಲಾಧಾರಿಗಳು ಸೇವಾಲಾಲ್‌ ಮಹಾರಾಜರ ಜನ್ಮ ಸ್ಥಳ ಸೂರನಗೊಂಡಕೊಪ್ಪಕ್ಕೆ ಪಾದಯಾತ್ರೆ ಮೂಲಕ ತೆರಳಿದರು.

ಸಂತ ಶ್ರೀಸೇವಾಲಾಲ್‌ ಮಹಾರಾಜರ ಮಾಲಧಾರೆ ವೃತವನ್ನು ಪ್ರಾರಂಭಿಸಿದ್ದು, ಕೊಮರನಹಳ್ಳಿ ತಾಂಡಾ, ಮಾಡಲಗೇರಿ ತಾಂಡಾ, ಕೆ.ಕೆ.ತಾಂಡಾದ ಯುವಕರು ಹಿರಿಯರ ಮಾರ್ಗದರ್ಶನದಲ್ಲಿ ಮಾಲಧಾರಿಗಳ ಪಾದಯಾತ್ರೆ ಆರಂಭಗೊಂಡಿದ್ದು, ಇಂದು ಭಕ್ತರು ತೆರಳುತ್ತಿದ್ದಾರೆ. ಮಾಲಾಧಾರಿಗಳು ದುಶ್ಚಟದಿಂದ ದೂರವಿರಬೇಕು. ಕುಟುಂಬದ ಸದಸ್ಯರಿಗೆ ಯಾಡಿ, ಬಾಪೂ ಎಂಬ ಪದವನ್ನು ಬಳಸಬೇಕು ಎಂದು ತಾಂಡಾದ ಹಟ್ಟಿ ನಾಯಕ ಎಂ.ಪಿ.ನಾಯ್ಕ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕೊಮರನಹಳ್ಳಿ ಕೊಟ್ರೇಶನಾಯ್ಕ, ಹೀರಾನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ಚನ್ನವೀರನಾಯ್ಕ, ಗ್ರಾಪಂ ಸದಸ್ಯರಾದ ಎಂ.ಪಿ.ನಾಗೇಶ್‌, ಶಿಲ್ಪಬಾಯಿ ಮಲ್ಲೇಶನಾಯ್ಕ, ಭಜನಿ ಸಂಘದ ಅಧ್ಯಕ್ಷ ಕೊಟ್ರೇಶನಾಯ್ಕ, ಡಾವೋ ಗೇಮ್ಯಾನಾಯ್ಕ, ಕಾರಭಾರಿ ಯಂಕ್ಯಾನಾಯ್ಕ, ಹಾಲೇಶನಾಯ್ಕ, ಅಡಿಟರ್‌ ಭೋಜ್ಯಾನಾಯ್ಕ, ನಾಗೇಂದ್ರನಾಯ್ಕ, ಭೀಮಾನಾಯ್ಕ, ಆರ್‌.ಮಲ್ಲೇಶನಾಯ್ಕ, ಪೂಜಾರಿ ಶೇಖರನಾಯ್ಕ, ಯುವರಾಜನಾಯ್ಕ, ಹೋಭ್ಯಾನಾಯ್ಕ, ಚುಣ್ಯಾನಾಯ್ಕ, ಎಸ್‌.ಪ್ರವೀಣ್‌ಕುಮಾರ್‌ ಇನ್ನಿತರಿದ್ದರು.

15ರಂದು ಸಂತ ಸೇವಾಲಾಲ್‌ ಜಯಂತಿ
ಬಳ್ಳಾರಿ:
ನಗರದ ಡಾ| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಫೆ.15 ರಂದು ಬೆಳಗ್ಗೆ 10.30ಕ್ಕೆ ಸಂತ ಶ್ರೀ ಸೇವಾಲಾಲ್‌ ಜಯಂತಿ ನಡೆಯಲಿದೆ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಉದ್ಘಾಟಿಸುವರು.

ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ, ಈ.ತುಕಾರಾಂ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಶಾಸಕ ಜಿ.ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವಿ.ಎಸ್‌.ಉಗ್ರಪ್ಪ, ಡಾ| ಸೈಯದ್‌ ನಾಸೀರ್‌ ಹುಸೇನ್‌,ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯ, ಪಾಲಿಕೆ ಮೇಯರ್‌ ಆರ್‌.ಸುಶೀಲಾಬಾಯಿ ಭಾಗವಹಿಸಲಿದ್ದಾರೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಗ್ಗೆ 9.30ಕ್ಕೆ ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಸಂತ ಸೇವಾಲಾಲ್‌ ಭಾವಚಿತ್ರದ ಮೆರವಣೆಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್‌ ತಿಳಿದ್ದಾರೆ.

ಕಾರ್ಯಕ್ರಮಕ್ಕೆ ಅಧಿಕಾರಿಗಳ ಹಾಜರಿ ಕಡ್ಡಾಯ
ಹರಪನಹಳ್ಳಿ;
ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ತಹಶೀಲ್ದಾರ್‌ ಡಾ| ನಾಗವೇಣಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಆಡಳಿತದ ವತಿಯಿಂದ ಫೆ.15ರಂದು ಸಂತ ಶ್ರೀಸೇವಾಲಾಲ್‌ ಹಾಗೂ ಫೆ.12ರಂದು ಸವಿತಾ ಮಹರ್ಷಿ ಜಯಂತಿಯನ್ನು ಪಟ್ಟಣದ ಸಾಮರ್ಥ್ಯಸೌಧದಲ್ಲಿ ಆಚರಿಸಲು ನಿರ್ಧರಿಸಲಾಯಿತು.

ಮಹನೀಯರ ಜಯಂತಿಗಳಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಒಂದು ವೇಳೆ ಅಧಿಕಾರಿಗಳು ಜಯಂತಿಗಳಿಗೆ ಭಾಗವಹಿಸದಿದ್ದರೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಬೇಕು ಎಂದು ಎರಡು ಸಮಾಜದ ಮುಂಖಡರು ಒತ್ತಾಯಿಸಿದರು. ಅಲ್ಲದೇ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಮುಖಂಡರು ಸಲಹೆ ನೀಡಿದರು.

ಬಂಜಾರ್‌ ಸಮಾಜದ ತಾಲೂಕು ಅಧ್ಯಕ್ಷ ಜಯನಾಯ್ಕ, ಸವಿತ ಸಮಾಜದ ಅಧ್ಯಕ್ಷ ವೆಂಕಟೇಶ್‌, ಬಂಜಾರ್‌ ಸಮಾಜದ ಕಾರ್ಯದರ್ಶಿ ಬಿ.ವೈ.ವೆಂಕಟೇಶನಾಯ್ಕ, ಹನುಮಂತಪ್ಪ, ಎಸ್‌.ಪಿ.ಲಿಂಬ್ಯಾನಾಯ್ಕ, ಚತ್ರನಾಯ್ಕ, ಪೂರ್ಯಾನಾಯ್ಕ, ಬಸವರಾಜ್‌, ಚಂದ್ರನಾಯ್ಕ, ಮಾಡಲಗೇರಿ ಸಂತೋಷ್‌, ರಾಜನಾಯ್ಕ, ಗೋಪಿನಾಯ್ಕ, ಮೋಹನ್‌, ಪುರಸಭೆ ಅಕಾರಿ ನಾಗರಾಜನಾಯ್ಕ, ನೀಲಾಬಾಯಿ, ಪ್ರೇಮಾಬಾಯಿ, ಉಮಾಬಾಯಿ, ರುಕ್ಮಣಿ, ಲಕ್ಕಿಬಾಯಿ ಇದ್ದರು.

ಮಹನೀಯರಿಗೆ ಗೌರವ ಸಲ್ಲಿಸಿ
ಸ‌ಂಡೂರು: ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌ ಸಿದ್ದೇಶ್‌ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಫೆ.15ರಂದು ಸಂತ ಸೇವಾಲಾಲ್‌ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂತರ ಜಯಂತಿ ಆಚರಿಸುವ ಪ್ರಮುಖ ಉದ್ದೇಶ ಅವರ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮಹತ್ತರ ಕಾರ್ಯವಾಗಿದೆ. ಅಲ್ಲದೆ ನಾವು ಅವರಿಗೆ ಜಯಂತಿ ಆಚರಿಸುವ ಮೂಲಕ ಗೌರವ ಸಲ್ಲಿಸಬೇಕೆಂದರು.

ಬಂಜಾರ ಸಮಾಜದ ಅಧ್ಯಕ್ಷ ಬಂಗ್ಲೆ ಮಂಜುನಾಥ್‌ ಮಾತನಾಡಿದರು. ತಾಪಂ ಉಪಾಧ್ಯಕ್ಷೆ ಗಂಗಾಬಾಯಿ ಚಂದ್ರನಾಯ್ಕ, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಬಂಜಾರ ಸಮಾಜದ ಮುಖಂಡರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಇನ್ನಿತರರಿದ್ದರು.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.