ಪಿಎಂ-ಸಿಎಂಗೆ ವಿದ್ಯಾರ್ಥಿಗಳ ಪತ್ರ
Team Udayavani, Jul 29, 2018, 7:00 AM IST
ಸಿರುಗುಪ್ಪ: ಸರ್ಕಾರಿ ಶಾಲೆಗಳ ದುಃಸ್ಥಿತಿಯಿಂದ ಬೇಸತ್ತ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕಿನಲ್ಲಿರುವ 45 ಪ್ರಾಥಮಿಕ, 89 ಪ್ರೌಢಶಾಲಾ ಕೊಠಡಿಗಳ ದುರಸ್ತಿಗೆ ಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕರೂರಿನ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಸೇರಿದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೋದಿ ಮತ್ತು ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆಯುವ ಮೂಲಕ ಸರಕಾರಿ ಶಾಲೆಗಳಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಸಿರುಗುಪ್ಪ ತಾಲೂಕಿನ 45 ಪ್ರೌಢಶಾಲೆ,89 ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಗೊಂಡು ಗಂಭೀರ ಸ್ಥಿತಿಗೆ ತಲುಪಿವೆ. ಕೊಠಡಿಗಳಲ್ಲಿ ಕುಳಿತು ಪಾಠ-ಪ್ರವಚನ ಕೇಳಲು ಸಾಧ್ಯವಾಗದ ಸ್ಥಿತಿ ಇದೆ. ಈ ಕಟ್ಟಡಗಳು ಯಾವಾಗ ನಮ್ಮ ಮೇಲೆ ಬೀಳುತ್ತವೆಯೋ ಎಂಬ ಭೀತಿ ಕಾಡುತ್ತಿದೆ. 89 ಶಾಲಾ ಕೊಠಡಿಗಳ ಮೇಲ್ಛಾವಣಿಗಳು ಸಂಪೂರ್ಣ ಬೀಳುವ ಸ್ಥಿತಿಯಲ್ಲಿವೆ. ಮಳೆ ಬಂದಾಗ ಕೊಠಡಿಗಳಲ್ಲಿ ನೀರು ತೊಟ್ಟಿಕ್ಕುತ್ತಿದ್ದು, ಕೊಠಡಿಗಳ ಎಲ್ಲಾ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿವೆ ಎಂದು
ಸಮಸ್ಯೆ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ