ಶಿಕ್ಷಕರ ನೇಮಕಕ್ಕೆ ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳ ಪ್ರತಿಭಟನೆ!
Team Udayavani, Sep 29, 2018, 12:31 PM IST
ಕೂಡ್ಲಿಗಿ: ಸಹ ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿ ಮತ್ತು ಮುಖ್ಯಶಿಕ್ಷಕರ ವರ್ಗವಣೆ ವಿರೋಧಿಸಿ ವಿದ್ಯಾರ್ಥಿಗಳು ಶಾಲೆಗೆ
ಬೀಗ ಜಡಿದು ದಿಢೀರ್ ಪ್ರತಿಭಟಿಸಿದ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪದ ಗಡಿ ಗ್ರಾಮ ಕೆಂಚಮಲ್ಲನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಎಸ್ಡಿಎಂಸಿ ಅಧ್ಯಕ್ಷ ಜಯಣ್ಣ ಮಾತನಾಡಿ ಕಳೆದ 6 ವರ್ಷಗಳಿಂದ ನಮ್ಮ ಶಾಲೆಗೆ ಸರಿಯಾಗಿ ಶಿಕ್ಷಕರನ್ನು ನೇಮಿಸುತ್ತಿಲ್ಲ. ಕನ್ನಡ, ಮತ್ತು ಗಣಿತ ಶಿಕ್ಷಕರನ್ನು ಹೊರತುಪಡಿಸಿ, ಇಂಗ್ಲಿಷ್, ಹಿಂದಿ, ವಿಜ್ಞಾನ, ಸಮಾಜ ಶಿಕ್ಷಕರನ್ನು ಕೂಡಲೇ ನೇಮಿಸಬೇಕು. ಗಡಿ ಗ್ರಾಮವಾದ್ದರಿಂದ ನಮ್ಮ ಊರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಹಾಗೂ ಮುಖ್ಯ ಶಿಕ್ಷಕರ ವರ್ಗಾವಣೆ ತಡೆಯಬೇಕೆಂದರು.
ಗ್ರಾಪಂ ಸದಸ್ಯ ಕೆ.ಜೆ. ಬಸವರಾಜ್ ಮಾತನಾಡಿ ಶಿಕ್ಷಕರನ್ನು ನೇಮಿಸುವಂತೆ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದೇವೆ.
ಇದರ ಸಂಬಂಧವಾಗಿ ತಾಲೂಕು ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ದೂರವಾಣಿ ಮಾಡಿ
ಬೇಡಿಕೊಂಡರೂ ಅಧಿಕಾರಿಗಳು ಹಾರಿಕೆ ಉತ್ತರ ಕೊಟ್ಟು ಜಾರಿಕೊಳ್ಳುತ್ತಿದ್ದು, ನಮ್ಮ ಕೆಂಚಮ್ಮನಹಳ್ಳಿ ಶಾಲೆಗೆ ಯಂಬಳಿ
ವಡ್ಡರಹಟ್ಟಿ, ಪಿಚ್ಚಾರಹಟ್ಟಿ, ಮಾಲೂರು ಸೇರಿದಂತೆ ಹಲವಾರು ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದು ಶಿಕ್ಷಕರಿಲ್ಲದ ಕಾರಣ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀಳಲಿದೆ ಎಂದರು. ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದೇ ಹೋದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.
ಪಾಲಕರ ಮನವೊಲಿಕೆ: ಶಿಕ್ಷಕರ ನೇಮಕ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿರುವದನ್ನು ತಿಳಿದ ಶಾಲೆಗೆ ಅಗಮಿಸಿದ ಪಾಲಕರು ನಿಮ್ಮ ಜತೆ ನಾವಿದ್ದೇವೆ. ಆದರೆ, ಶಾಲೆ ಬೀಗ ಹಾಕುವುದು ಬೇಡ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದುಕೊಂಡರು.
ಕಾಸಿಂ, ಶಿವಣ್ಣ, ಮಹದೇವಮ್ಮ ಶಿವಣ್ಣ, ಚಂದ್ರಪ್ಪ, ಎಸ್ಡಿಎಂಸಿ ಸದಸ್ಯರಾದ ಚನ್ನಬಸಪ್ಪ ದುರುಗೇಶ್, ಪುಷ್ಪಾವತಿ ಹಾಗೂ ಗ್ರಾಮಸ್ಥರಾದ ಶರಣಪ್ಪ, ಸತ್ಯಪ್ಪ, ಗುಡ್ಡಪ್ಪ, ರಫಿ ಹಾಗೂ ಅಜ್ಜಣ್ಣ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕೆಂಚಮ್ಮಲ್ಲನಹಳ್ಳಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿರುವ ಮಾಹಿತಿ ಗೊತ್ತಿಲ್ಲ. ಗಡಿಗ್ರಾಮದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕಾಯಂ ಶಿಕ್ಷಕರ ನೇಮಕವಾಗುವತನಕ ಅತಿಥಿ ಶಿಕ್ಷಕರನ್ನು ನೇಮಿಸಲು ಕ್ರಮಕೈಗೊಳಲಾಗುವುದು.
ಎ.ಶ್ರೀಧರನ್, ಡಿಡಿಪಿಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್