![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ರೈತ-ಕಾರ್ಮಿಕರ ಹೋರಾಟಕ್ಕೆ ಎಸ್ಯುಸಿಐ ಬೆಂಬಲ
Team Udayavani, Sep 25, 2020, 7:27 PM IST
![ರೈತ-ಕಾರ್ಮಿಕರ ಹೋರಾಟಕ್ಕೆ ಎಸ್ಯುಸಿಐ ಬೆಂಬಲ](https://www.udayavani.com/wp-content/uploads/2020/09/rn-tdy-1-17-620x372.jpg)
ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಂಗೀಕರಿಸಿರುವ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಗುತ್ತಿಗೆ ಕೃಷಿ ಕಾಯ್ದೆ, ವಿದ್ಯುತ್ಛಕ್ತಿ ಕಾಯ್ದೆ 2002ರ ತಿದ್ದುಪಡಿ, ಬೆಂಬಲ ಬೆಲೆ ಕಾಯ್ದೆ ತಿದ್ದುಪಡಿಗಳ ವಿರುದ್ಧ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಗಳ ವಿರುದ್ಧ ಅಖೀಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು(ಎಐಕೆಎಸ್ ಎಸ್ಸಿ) ಕರೆ ನೀಡಿರುವ ಸೆ.28ರ ಕರ್ನಾಟಕ ಬಂದ್ ಹೋರಾಟಕ್ಕೆ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ಬೆಂಬಲ ಸೂಚಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ, ಕೋವಿಡ್ 19 ಮಹಾಮಾರಿಯ ಸಂದರ್ಭ ಬಳಸಿಕೊಂಡು, ಪ್ರಜಾತಾಂತ್ರಿಕ ಚರ್ಚೆಗಳಿಗೆ ಅವಕಾಶ ನೀಡದೆ ಸಂಸತ್ತು, ವಿಧಾನಮಂಡಲಗಳಲ್ಲಿ ಚರ್ಚೆ ನಡೆಸದೆ ತರಾತುರಿಯಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸುತ್ತಿರುವುದು ಸರಿಯಲ್ಲ. ಈ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆಯ ಕ್ಷೇತ್ರದಲ್ಲಿ ಕಾರ್ಪೊರೇಟ್ ಕುಳಗಳು ಲಗ್ಗೆ ಇಟ್ಟು ಸಣ್ಣ- ಮಧ್ಯಮ ರೈತರು ಸರ್ವನಾಶವಾಗಲಿದ್ದಾರೆ. ಸಾಮಾನ್ಯ ಗ್ರಾಹಕರು ಕೂಡ ಬೆಲೆ ಏರಿಕೆಯಿಂದ ಕಂಗಾಲಾಗಲಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ತಳ್ಳಲ್ಪಟ್ಟಿರುವ ರೈತರು ತಮ್ಮ ಕೃಷಿ ಭೂಮಿಯನ್ನು ಮಾರಿ ಬೀದಿಪಾಲಾಗಲಿದ್ದಾರೆ. ಇಂತಹ ವಿನಾಶಕಾರಿ ಕಾಯ್ದೆಗಳ ವಿರುದ್ಧ ದೇಶದಾದ್ಯಂತ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಹೋರಾಟ ಕಟ್ಟುತ್ತಿರುವುದು ಚೇತೋಹಾರಿ ಬೆಳವಣಿಗೆಯಾಗಿದೆ. ರೈತದ್ರೋಹಿ ಸರ್ಕಾರಗಳನ್ನು ಮಣಿಸಲು ದೇಶದ ಎಲ್ಲ ಜನವಿಭಾಗಗಳು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.