ಜಿಲ್ಲಾದ್ಯಂತ ಮುಷ್ಕರಕ್ಕೆ  ಬೆಂಬಲ

ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ

Team Udayavani, Mar 29, 2022, 4:54 PM IST

red flag

ಬಳ್ಳಾರಿ: ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ, ಕಾರ್ಪೋರೇಟ್‌ ಪರ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬಳ್ಳಾರಿ ಸೇರಿ ಜಿಲ್ಲೆಯಾದ್ಯಂತ ಎಲ್ಲ ತಾಲೂಕು ಕೇಂದ್ರಗಳಲ್ಲೂ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ನಗರದ ಹಳೆ ಬಸ್‌ ನಿಲ್ದಾಣ ಬಳಿ ಜಮಾಯಿಸಿದ ಆಶಾ, ಅಂಗನವಾಡಿ, ಬಿಸಿಯೂಟ ನೌಕರರು, ಎಲ್‌ಐಸಿ, ಬ್ಯಾಂಕ್‌, ಕೆಎಸ್‌ಆರ್‌ಟಿಸಿ, ಪೋಸ್ಟಲ್‌, ಬಿಎಸ್‌ಎನ್‌ಎಲ್‌ ಸಂಸ್ಥೆಗಳ ನೌಕರರು, ಸ್ಪಾಂಜ್‌ ಐರನ್‌ ಕಾರ್ಖಾನೆಯ ಹಾಗೂ ಗಣಿಗಾರಿಕೆಯ ನೂರಾರು ಕಾರ್ಮಿಕರು ಪ್ರತಿಭಟನಾ ಸಭೆ ನಡೆಸಿದರು. ಬಳಿಕ ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಡಗಿ ಚನ್ನಪ್ಪ ವೃತ್ತ, ಮೀನಾಕ್ಷಿ ವೃತ್ತ, ತಹಶೀಲ್ದಾರ್‌ ಕಚೇರಿ ಮೂಲಕ ತೆರಳಿ, ಪುನಃ ವಾಪಸ್‌ ಹಳೆ ಬಸ್‌ ನಿಲ್ದಾಣಕ್ಕೆ ತಲುಪಿತು.

ವ್ಯಾಪಾರ ಸುಗಮಗೊಳಿಸುವ ನೆಪದಲ್ಲಿ 44 ಕಾರ್ಮಿಕ ಪರ ಕಾನೂನುಗಳನ್ನು, 4 ಕೋಡ್‌ಗಳಾಗಿ ಪರಿವರ್ತಿಸಲಾಗುತ್ತಿದೆ. ಈ ಮೂಲಕ ಸಂಘಟನೆ ಕಟ್ಟಿಕೊಳ್ಳುವ, ಮುಷ್ಕರ ಹೂಡುವ ಹಾಗೂ ಇನ್ನಿತರೆ ನ್ಯಾಯಸಮ್ಮತ ಹಕ್ಕುಗಳನ್ನು ಕಾರ್ಮಿಕರು ಕಳೆದುಕೊಳ್ಳಲಿದ್ದಾರೆ. ಹೋರಾಟಗಳಿಂದ ಗಳಿಸಿಕೊಂಡ ಕಾರ್ಮಿಕ ಪರ ಕಾನೂನುಗಳನ್ನು ಮಾಲೀಕರ ಹಿತಕ್ಕಾಗಿ ತಿದ್ದುಪಡಿ ಮಾಡಲಾಗುತ್ತಿದೆ. ಇದರ ಪರಿಣಾಮ ಕಾರ್ಮಿಕರ-ನೌಕರರ ಶೋಷಣೆ ಇನ್ನಷ್ಟು ತೀವ್ರವಾಗಲಿದೆ. ಕಾರ್ಪೋರೇಟ್‌ ಮಾಲೀಕರ ಹಿತಕ್ಕಾಗಿ ಕೇಂದ್ರ ಸರ್ಕಾರ ಇಂತಹ ಅನೇಕ ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಜನರ ತೆರಿಗೆ ಹಣದಿಂದ ಕಟ್ಟಲಾದ ಸರ್ಕಾರಿ ಸಂಸ್ಥೆ ಹಾಗೂ ಉದ್ಯಮಗಳನ್ನು ಕಾರ್ಪೋರೇಟ್‌ ಮಾಲೀಕರಿಗೆ ಬಿಡಿಗಾಸಿಗೆ ಮಾರಲಾಗುತ್ತಿದೆ.

ಎಲ್‌ಐಸಿ, ಬ್ಯಾಂಕ್‌, ಬಿಎಸ್‌ಎನ್‌ಎಲ್‌, ರೈಲ್ವೆ, ಕಲ್ಲಿದ್ದಲು ಗಣಿ, ವಿದ್ಯುತ್‌, ವಿಮಾನ ನಿಲ್ದಾಣ, ರಸ್ತೆ ಸಾರಿಗೆ ಮುಂತಾದ ಕ್ಷೇತ್ರಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಹೊರಟಿದ್ದು, ಆ ಕ್ಷೇತ್ರಗಳ ನೌಕರರು ನಿರುದ್ಯೋಗ ಸಮಸ್ಯೆ ಎದುರಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಎಲ್ಲ ಕ್ಷೇತ್ರಗಳನ್ನು ಖಾಸಗೀಕರಣ ಮಾಡುವುದರಿಂದ ಖಾಯಂ ಉದ್ಯೋಗಳು ನಾಶವಾಗಿ, ನಿರುದ್ಯೋಗ ಸಮಸ್ಯೆ ಮತ್ತಷ್ಟು ಭೀಕರವಾಗಿ ಕಾಡಲಿದೆ. ಬೆಲೆ ಏರಿಕೆಯಿಂದ ತೆರಿಗೆ ಹೊರೆಯಿಂದ ಈಗಾಗಲೇ ತತ್ತರಿಸಿರುವ ಸಾಮಾನ್ಯ ಜನರಿಗೆ, ಸಣ್ಣ-ಮಧ್ಯಮ ವ್ಯಾಪಾರಸ್ಥರಿಗೆ ಖಾಸಗೀಕರಣ ನೀತಿಗಳು ಗಾಯದ ಮೇಲೆ ಬರೆ ಎಳೆಯಲಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕೆ.ಸೋಮಶೇಖರ್‌, ಎ.ದೇವದಾಸ್‌, ಜೆ.ಸತ್ಯಬಾಬು, ಡಿ.ವಿ.ಸೂರ್ಯನಾರಾಯಣ, ಟಿ.ಜಿ.ವಿಠಲ್‌, ರೈತ ಸಂಘಟನೆಯ ಮಾಧವರೆಡ್ಡಿ, ಘನಮಲ್ಲಿ, ಕೀರ್ತಿರಾಜ, ಪತ್ತಾರ್‌, ವಿಕ್ರಮ್‌, ಚಂದ್ರಕುಮಾರಿ, ರೇಷ್ಮಾ, ಮಲ್ಲಮ್ಮ, ಜಯರಾಜ್‌, ಪಾಂಡು, ಲಕ್ಷ್ಮೀ, ಓಂಕಾರಮ್ಮ ಇದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.