ಪರಿಸರ ನೈರ್ಮಲ್ಯಕ್ಕೆ ಸ್ವತ್ಛ ಭಾರತ್‌ ವರದಾನ: ಭಾರತಿ


Team Udayavani, Aug 30, 2018, 12:46 PM IST

bell-3.jpg

ಬಳ್ಳಾರಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ನೈರ್ಮಲ್ಯತೆಗೆ ವರದಾನವಾಗಿರುವ ಸ್ವತ್ಛ ಭಾರತ್‌ ಅಭಿಯಾನ ಯೋಜನೆಯನ್ನು ಸದ್ಬಳಕೆ ಮಾಡುವಲ್ಲಿ ನಾಗರಿಕರ ಪಾತ್ರ ಪ್ರಮುಖವಾಗಿದೆ ಎಂದು ಜಿಪಂ ಅಧ್ಯಕ್ಷೆ
ಭಾರತಿ ತಿಮ್ಮಾರೆಡ್ಡಿ ಅಭಿಪ್ರಾಯಪಟ್ಟರು.

ತಾಲೂಕಿನ ಬೆಳಗಲ್ಲು ಗ್ರಾಮದ ಸಮುದಾಯ ಭವನದಲ್ಲಿ ಕೇಂದ್ರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ
ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಪಂ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ, ಬೆಳಗಲ್ಲು ಗ್ರಾಪಂ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸ್ವತ್ಛ ಭಾರತ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಖಾನೆ ಹಾಗೂ ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಹಾಗೂ ವಾಯು ಮಾಲಿನ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ
ಪ್ರಧಾನಿ ನರೇಂದ್ರ ಮೋದಿಯವರು ಸ್ವತ್ಛ ಭಾರತದ ಬಗ್ಗೆ ಕನಸು ಕಂಡಿದ್ದಾರೆ. ಅದನ್ನು ನನಸು ಮಾಡುವಲ್ಲಿ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌ ಮಾತನಾಡಿ, ಆರೋಗ್ಯವೇ ಮಹಾಭಾಗ್ಯ ಎನ್ನುವ ಗಾದೆಯಂತೆ ಎಲ್ಲರೂ ಸ್ವತ್ಛತೆಯ ಕಡೆಗೆ ಗಮನಹರಿಸಿದಲ್ಲಿ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿ ಕಾಣಬಹುದು. ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಮನೆಯ ಜೊತೆಗೆ ಸುತ್ತಮುತ್ತಲಿನ ಪರಿಸರ ಸ್ವತ್ಛವಾಗಿಟ್ಟುಕೊಂಡಲ್ಲಿ ಗ್ರಾಮೀಣ ಜನರ ಆರೋಗ್ಯ ಸುಧಾರಿಸಲಿದೆ ಎಂದರು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಜಿ.ಡಿ.ಹಳ್ಳಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ
ಪ್ರಚಾರ ಸಹಾಯಕ ಎನ್‌.ರಾಮಕೃಷ್ಣ ಸ್ವಾಗತಿಸಿ, ವಂದಿಸಿದರು. ಬೆಳಗಲ್ಲು ಗ್ರಾಪಂ ಅಧ್ಯಕ್ಷೆ ವಸಂತ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧಿಕಾರಿ ಕೆ.ಆರ್‌.ಪ್ರಕಾಶ್‌, ತಾಪಂ ಸಹಾಯಕ ನಿರ್ದೇಶಕ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಶೀಲ, ಮಹಿಳಾ ಆರೋಗ್ಯ ಸಹಾಯಕಿ ಶಾರದ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉದ್ದಾನಗೌಡ ಇದ್ದರು.

ಜಾಗೃತಿ ಜಾಥಾ: ಕಾರ್ಯಕ್ರಮದ ನಿಮಿತ್ತ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ್‌
ಚಾಲನೆ ನೀಡಿದರು. ಜಾಥಾವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ವೇಳೆ ಮಕ್ಕಳಿಗಾಗಿ ಚಿತ್ರ ಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು,
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.