ಚಿಹ್ನೆ ಮುದ್ರಣ ದೋಷ: ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತ, ಚುನಾವಣೆ ಮುಂದೂಡಿಕೆ
Team Udayavani, Dec 22, 2020, 11:45 AM IST
ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾ.ಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ.
ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಶಿಲ್ದಾರ್ ರೆಹಮಾನ್ ಪಾಶಾ ಪರಿಶೀಲನೆ ನಡೆಸಿದರು.
ಮುದ್ರಣ ದೋಷದಿಂದಾಗಿ ತೊಲಮಾಮಡಿ ಮತಗಟ್ಟೆಯ ಅಭ್ಯರ್ಥಿ ಪದ್ಮಾವತಿ ಅವರ ಚಿಹ್ನೆ ಮಡಿಕೆಯ ಬದಲಿಗೆ ಸಿಲಿಂಡರ್ ಚಿಹ್ನೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.
ಇದನ್ನೂ ಓದಿ:ಪ್ರಚಾರ ಮಾಡಿದ್ದು ‘ಹಲ್ಲುಜ್ಜುವ ಪೇಸ್ಟ್’ ಚಿಹ್ನೆಗೆ,ಮತಪತ್ರದಲ್ಲಿ ಮುದ್ರಣವಾಗಿದ್ದು ‘ಬ್ರಷ್’
ಈ ಗ್ರಾಪಂ ವ್ಯಾಪ್ತಿಯ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಎರಡನೇ ಹಂತದ ಚುನಾವಣೆಯ ದಿನ ಅಥವಾ ಇನ್ನೊಂದು ದಿನ ಈ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ