ಬೆಳೆಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಿ: ಮುದಗಲ್‌


Team Udayavani, Oct 7, 2020, 5:22 PM IST

ballary-tdy-2

ಬಳ್ಳಾರಿ: ಜಿಲ್ಲೆಯಲ್ಲಿ ಇತ್ತೀಚಿಗೆ ನಿರಂತರವಾಗಿ ಹಾಗೂ ಅಧಿಕವಾಗಿ ಸುರಿದ ಮಳೆಯಿಂದ ನೇರವಾಗಿ ಬೆಳೆಹಾನಿ ಸಂಭವಿಸಿರುವುದಲ್ಲದೇ ನಂತರದ ದಿನಗಳಲ್ಲಿ ಪರೋಕ್ಷವಾದ ಸಮಸ್ಯೆಗಳು ತಲೆದೋರುತ್ತಿರುವುದನ್ನುಮನಗಾಣಲಾಗಿದ್ದು, ಹೊಲಗಳಲ್ಲಿಮಳೆಯ ನೀರು ಹೋದಮೇಲೆ ಭತ್ತ ಮತ್ತು ಇತರೆ ಬೆಳೆಗಳು ಬಾಡಿದಂತೆ ಹಾಗೂ ಬಣ್ಣಗೆಟ್ಟು ಒಣಗಿರುವಂತಹ ಬೆಳೆಗಳ ನಿರ್ವಹಣೆಗೆ ರೈತರು ಕೆಲ ಪ್ರಮುಖ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್‌ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅವಿರತವಾಗಿ ದಿನಗಟ್ಟಲೆ ಮಳೆ ಸುರಿದಿರುವುದರಿಂದ ಹಾಗೂ ಹೊಲದಲ್ಲಿ ನೀರು ನಿರಂತರವಾಗಿ ನಿಂತಿರುವುದರಿಂದ ಮಣ್ಣು ದಮ್ಮಸ್ಸು ಮಾಡಿದಂತಾಗಿಮಣ್ಣಿನ ರಚನೆ ಹಾಳಾಗಿರುತ್ತದೆ. ಮಣ್ಣಿನಲ್ಲಿ ಗಾಳಿ ಸೇರದೆ, ಬೆಳೆಗಳ ಬೇರುಗಳಿಗೆ ದೊರಕಬೇಕಾದ ಆಮ್ಲಜನಕ ದೊರೆಯದೇ ಉಸಿರುಗಟ್ಟಿದಂತಹ ಪರಿಣಾಮ ಉಂಟಾಗುತ್ತದೆ. ಮೇಲ್ಮಣ್ಣಿನಲ್ಲಿರುವ ಪೋಷಕಾಂಶಗಳು ನೀರಿನಲ್ಲಿ ಕರಗಿ ಹರಿಯುವ ನೀರಿನೊಂದಿಗೆ ಕೊಚ್ಚಿಕೊಂಡು ಹೋಗುವುದರಿಂದ ಪೋಷಕಾಂಶಗಳ ತೀವ್ರ ಕೊರತೆಯಿಂದ ಬೆಳೆಗಳು ಬಳಲಿರುತ್ತವೆ.

ಜೊತೆಗೆ ಮಣ್ಣನ್ನು ಚೇತನಾಶೀಲವಾಗಿರುವಂತೆ ಮಾಡುವ ಹಾಗೂ ಬೆಳೆಗಳಿಗೆ ಪೋಷಕಾಂಶಗಳನ್ನು ದೊರೆಯುವಂತೆ ಮಾಡುವ ಅನೇಕ ಉಪಯೋಗಿ ಸೂಕ್ಷ್ಮಜೀವಿಗಳು ನಷ್ಟವಾಗಿ, ಮಣ್ಣು ಕೆಲ ಮಟ್ಟಿಗೆ ಬರಡಾದಂತಾಗುತ್ತದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ರೈತರು ಸಾಲು ಬೆಳೆಗಳಲ್ಲಿ ಎಡೆಕುಂಟೆ ಹಾಯಿಸಿ ಅಥವಾ ಕೈಯಿಂದ ಕಳೆ ತೆಗೆದು, ಬೆಳೆಯ ಬೇರುಗಳಿರುವ ಮಣ್ಣಿನ ವಲಯದಲ್ಲಿ ಗಾಳಿಯಾಡುವಂತಮಾಡಬೇಕು. ಯೂರಿಯಾದಂತಹ  ಸಾರಜನಕಯುಕ್ತ ಗೊಬ್ಬರವನ್ನು ಮಣ್ಣಿನಲ್ಲಿಸೇರಿಸಿ ತೆ‌ಳ್ಳಗೆ ನೀರುಹಾಯಿಸಬೇಕು. ದ್ರವರೂಪದಲ್ಲಿರುವ 19:19:19 ಅಥವಾ ಇತರ ದ್ರವರೂಪದ ರಸಗೊಬ್ಬರಗಳನ್ನು ಅಥವಾ ಶೇ. 2ರಷ್ಟು ಯೂರಿಯಾ ಅಥವಾ ಡಿಎಪಿ ರಸಗೊಬ್ಬರವನ್ನು ಬೆಳೆ ಹಂತವನ್ನು ಅನುಸರಿಸಿ ಸಿಂಪಡಣೆ ಮಾಡುವುದರಿಂದ ಶೀಘ್ರ ಸುಧಾರಣೆಕಾಣಬಹುದು. ಲಘು ಪೋಷಕಾಂಶಗಳ ಮಿಶ್ರಣಗಳನ್ನು ಸಿಂಪಡಿಸಬೇಕು. ಮಳೆಸತತವಾಗಿ ಬರುತ್ತಿರುವುದರಿಂದ ಭತ್ತದ ಬೆಳೆಗೆ ಕಾಡಿಗೆ ರೋಗ ಬರುವ ಸಾಧ್ಯತೆ ಇದ್ದು, ಭತ್ತದ ಬೆಳೆ ಪೂರ್ವ ಹೂಬಿಡುವ ಹಂತದಲ್ಲಿದ್ದರೆ ಪ್ರತಿ ಲೀಟರ್‌ ನೀರಿಗೆ 0.4 ಗ್ರಾಂ ದರದಲ್ಲಿ ಟ್ರಿಫ್ಲಾಕ್ಸಿಸ್ಟ್ರೋಬಿನ್‌+ ಟೆಬುಕೋನೋಜೋಲ್‌ ನೊಂದಿಗೆ ಮುನ್ನೆಚ್ಚರಿಕೆ ಶೀಲೀಂದ್ರನಾಶಕ ಸಿಂಪಡಣೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.