ಪ್ರಾಣಿಗಳ ದಾಹ ತಣಿಸಲು ಟ್ಯಾಂಕರ್‌ ನೀರು


Team Udayavani, Mar 25, 2019, 3:34 PM IST

bell-3
ಕೂಡ್ಲಿಗಿ: ಕಾಡಿನ ಪ್ರಾಣಿ, ಪಕ್ಷಿಗಳ ನೀರಿನ ದಾಹ ತೀರಿಸಲು ಇಲ್ಲಿಯ ಯುವಕರ ಗುಂಪೊಂದು ಮುಂದಾಗಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಗ್ರಾಪಂ ಅಧ್ಯಕ್ಷರಿಂದ ಮೊದಲ ದಿನ ನೀರಿನ ಟ್ಯಾಂಕರ್‌ ಸೇವೆ ಗಜಾಪುರ ಗ್ರಾಮದ ಯುವಕ
ತಳವಾರ ಶಿವರಾಜ, ಅಂಗಡಿ ಕೊಟ್ರಪ್ಪ, ಗಂಟೆನಪ್ಪರ ಮೂರ್ತಿ, ಕುರುಬರ ಕುಡ್ಡ, ಬಣಕಾರ ಗುರುವ, ಕೈವಲ್ಯಾಪುರ ಆನಂದ, ಪವನ್‌ ಮುಂತಾದ ಯುವಕರು ಮೊದಲು ಗಜಾಪುರ ಗ್ರಾಮದ ವಿಶಾಲ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಪುಟ್ಟಿಗಳಲ್ಲಿ ನೀರು ಇಟ್ಟು ಬರಲು ಶುರು ಮಾಡಿದರು. ನಂತರ ನೀರು ಖಾಲಿಯಾಗುತ್ತಾ ಬಂದಿದ್ದರಿಂದ ಈಗ ಟ್ಯಾಂಕರ್‌ ಮೂಲಕ ನೀರನ್ನು ಹುಲ್ಲುಮರಡಿ ಹತ್ತಿರ ಅಂಕನಡೋಣಿ ಬಂಡೆಯ ಮೇಲೆ ನೀರು ಇಡಲು ಶುರು ಮಾಡಿದ್ದಾರೆ. ಯುವಕರು ಸೇವೆ ಮಾಡಿದರೆ ಕಂದಗಲ್ಲು ಗ್ರಾಪಂ ಅಧ್ಯಕ್ಷೆ ಗಜಾಪುರ ಗ್ರಾಮದ ತಳವಾರ ನೀಲಮ್ಮ ಚಂದ್ರಪ್ಪ ಅವರು ಮೊದಲ ದಿನದ ಟ್ಯಾಂಕರ್‌ ಖರ್ಚನ್ನು ನೀಡಲು ಮುಂದೆ ಬಂದು ಯುವಕರ ಪ್ರಾಣಿ, ಪಕ್ಷಿಗಳ ರಕ್ಷಣೆ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಗ್ರಾಪಂ ಸದಸ್ಯ ಬೆಳದೇರಿ ಮಲ್ಲಿಕಾರ್ಜುನ ಅವರು ರವಿವಾರದ ನೀರಿನ ಟ್ಯಾಂಕರ್‌ ಸೇವೆ ಮಾಡಲು ಸ್ವಯಂ ಮುಂದೆ ಬಂದಿದ್ದಾರೆ.
ಹತ್ತು ಚದುರ ಕಿಲೋಮೀಟರ್‌ ವ್ಯಾಪ್ತಿಯಲ್ಲಿರುವ ಗಜಾಪುರ ಸಮೀಪದ ಚಿರಿಬಿ ಅರಣ್ಯ ಪ್ರದೇಶದಲ್ಲಿ ಎಲ್ಲಿ ನೋಡಿದರೂ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ನೀರಿಲ್ಲ. ಹೀಗಾಗಿ ಗಜಾಪುರ ಗ್ರಾಮದ ಯುವಕರು ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರಿನ ದಾಹ ಇಂಗಿಸಲು ಮುಂದಾಗಿದ್ದು, ಮಳೆ ಬರುವ ತನಕ ಇದೇ ರೀತಿ ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡಲು ಮುಂದಾಗಿದ್ದಾರೆ. ಈ ಯುವಕರ ಸಾಹಸಕ್ಕೆ ಜನಪ್ರತಿನಿಧಿಗಳು, ಗ್ರಾಮಸ್ಥರು ಸಹಕಾರ ನೀಡಿರುವುದು
ಯುವಕರಲ್ಲಿ ಸಮಾಜ ಸೇವೆ ಮಾಡಲು ಸಂತಸ ತರಿಸಿದೆ.
ಬಂಡೆಯ ಮೇಲೆ 1 ಟ್ಯಾಂಕರ್‌ ನೀರು ನಿಲ್ಲುತ್ತಿದ್ದು, 2 ದಿನಕ್ಕೊಮ್ಮೆ ನೀರು ಖಾಲಿಯಾಗಬಹುದು ಎಂದು ಗ್ರಾಮದ ಹಿರಿಯರು ಅಂದಾಜಿಸಿದ್ದಾರೆ. ಹೀಗಾಗಿ 2 ದಿನಕ್ಕೊಮ್ಮೆ ಒಬ್ಬರು ಟ್ಯಾಂಕರ್‌ ನೀರಿನ ಖರ್ಚು 800 ರೂ. ನೀಡಲು
ಮುಂದಾಗುತ್ತಿದ್ದಾರೆ. ಈ ಕಾರ್ಯ ಇದೇ ರೀತಿ ಮುಂದುವರಿದಲ್ಲಿ ಕಾಡಿನಲ್ಲಿರುವ ಕಾಡು ಹಂದಿ, ಚಿರತೆ, ಕರಡಿ, ಮೊಲ ಮುಂತಾದ ಪ್ರಾಣಿಗಳು ಹಾಗೂ ಅಸಂಖ್ಯಾತ ಪಕ್ಷಿಗಳಿಗೆ ಕುಡಿಯುವ ನೀರಿನ ದಾಹ ತೀರಿಸಿದಂತಾಗುತ್ತದೆ.
„ಕೆ.ನಾಗರಾಜ್‌

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.