ಸಸ್ಯ ಸಂಕುಲ ಉಳಿಸಲು ಟ್ಯಾಂಕರ್‌ ನೀರು!


Team Udayavani, Jun 4, 2018, 3:46 PM IST

bell-1.jpg

ಸಿರುಗುಪ್ಪ: ತಾಲೂಕಿನ ದೇಶನೂರು ಸಮೀಪವಿರುವ ತೋಟಗಾರಿಕೆ ಇಲಾಖೆಗೆ ಸೇರಿದ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದಿದ್ದ ವಿವಿಧ ಜಾತಿಯ ಮರಗಳು ಮತ್ತು ಸಸಿಗಳು ಕಳೆದ ಮೂರು ತಿಂಗಳಿನಿಂದ ನದಿಯಲ್ಲಿ ನೀರಿಲ್ಲದೆ ಒಣಗುತ್ತಿರುವುದನ್ನು ತಡೆಯಲು ಇಲಾಖೆಯ ಅಧಿಕಾರಿಗಳು
ಟ್ಯಾಂಕರ್‌ ಮೂಲಕ ಒಂದು ತಿಂಗಳಿನಿಂದ ನೀರು ಪೂರೈಸುತ್ತಿದ್ದರಿಂದ ಮರ ಹಾಗೂ ಸಸಿಗಳು ಹಸಿರಿನಿಂದ ಕಂಗೊಳಿಸುತ್ತಿವೆ.

ತೋಟಗಾರಿಕೆ ಕ್ಷೇತ್ರಕ್ಕೆ ಬೇಕಾದ ನೀರಿನ ಮೂಲ ತುಂಗಭದ್ರಾ ನದಿಯಿಂದ ಬಳಸಿಕೊಂಡು ಮಾವು, ತೆಂಗು, ಸಫೋಟ, ಹಲಸು, ಪೇರಲ, ನೇರಳೆ, ಕರಿಬೇವು, ನಿಂಬೆ, ಮಾವಿನ ಸಸಿ ಸೇರಿದಂತೆ ವಿವಿಧ ಅಲಂಕಾರಿಕ ಸಸಿಗಳು ಮತ್ತು ಗಿಡಗಳನ್ನು ಇಲ್ಲಿ ಬೆಳೆಯಲಾಗಿದೆ.

 ಕಳೆದ ಮೂರು ತಿಂಗಳಿನಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಸಂಪೂರ್ಣ ಬತ್ತಿ ಹೋಗಿದ್ದರಿಂದ ಇಲ್ಲಿರುವ ಗಿಡಗಳಿಗೆ ನೀರುಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಗಿಡಗಳು ಮತ್ತು ಸಣ್ಣ ಸಸಿಗಳು ಒಣಗಲು ಆರಂಭಿಸಿದ್ದವು. ಸುಮಾರು 15 ಸಾವಿರ ಸಸಿ ಮತ್ತು ಮರಗಳು ಇಲ್ಲಿದ್ದು, ಬೇಸಿಗೆಯ ಬಿರುಬಿಸಿಲು ಒಂದು ಕಡೆಯಾದರೆ ಮತ್ತೂಂದು ಕಡೆ ನದಿಯಲ್ಲಿ ನೀರು ಬತ್ತಿ ಹೋಗಿತ್ತು. ದಿನದಿಂದ ದಿನಕ್ಕೆ ಗಿಡಗಳು ಮತ್ತು ಸಸಿಗಳು ಒಣಗಲು ಆರಂಭಿಸಿದ್ದವು.

ಹೇಗಾದರೂ ಮಾಡಿ ಬೆಳೆದಿರುವ ಗಿಡ ಮತ್ತು ಬೆಳೆಸಿದ ಸಸಿಗಳನ್ನು ಉಳಿಸಿಕೊಳ್ಳಬೇಕೆನ್ನುವ ಉದ್ದೇಶದಿಂದ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರು ತಮ್ಮ ಕಚೇರಿಯ ಮೇಲಧಿಕಾರಿಗಳನ್ನು ಸಂಪರ್ಕಿಸಿದರು. ಟ್ಯಾಂಕರ್‌ ಮೂಲಕ ತೋಟಗಾರಿಕೆ ಕ್ಷೇತ್ರದಲ್ಲಿರುವ ಗಿಡಗಳಿಗೆ ನೀರುಣಿಸಲು ಅನುಮತಿ ಪಡೆದುಕೊಂಡರು. 

ಮಳೆಗಾಲ ಆರಂಭವಾಗಿದ್ದರೂ ಈ ಭಾಗದಲ್ಲಿ ಸರಿಯಾದ ಮಳೆಯಾಗಿಲ್ಲ. ತುಂಗಭದ್ರಾ ನದಿಯಲ್ಲಿ ಈಗ ನೀರು ಹರಿಯುತ್ತಿದ್ದರೂ ತೋಟಕ್ಕೆ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನದಿ ತೀರದ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದ ಇಂದಿಗೂ ಸಮರ್ಪಕವಾಗಿ ನೀರು ಹರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅನಿವಾರ್ಯವಾಗಿ ಟ್ಯಾಂಕರ್‌ ಮೂಲಕ ನೀರನ್ನು ತಂದು ಗಿಡಗಳಿಗೆ ಹಾಕಲಾಗುತ್ತಿದೆ.

ಇಲ್ಲಿನ ಅಧಿಕಾರಿಗಳ ಕಾಳಜಿಯಿಂದ ಒಣಗುತ್ತಿರುವ ಸಸಿ ಮತ್ತು ಮರಗಳು ಜೀವ ಹಿಡಿದುಕೊಂಡಿವೆ. ಅಧಿಕಾರಿಗಳು ಟ್ಯಾಂಕರ್‌ ಮೂಲಕ ತೋಟಕ್ಕೆ ನೀರು ಪೂರೈಸುವ ಕ್ರಮ ಕೈಗೊಳ್ಳದೆ ಹೋಗಿದ್ದರೆ ತೋಟದಲ್ಲಿರುವ ಸಸ್ಯ ಸಂಕುಲ ಒಣಗಿ ಹೋಗುತ್ತಿತ್ತು. ಪ್ರತಿನಿತ್ಯ ನಾಲ್ಕರಿಂದ ಐದು ಟ್ಯಾಂಕರ್‌ ನೀರನ್ನು ಸಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ರುಣಿಸಲಾಗುತ್ತಿದೆ. ಗಿಡಗಳಿಗೆ ಸರದಿಯ ಪ್ರಕಾರ ನೀರು ಬಿಡಲಾಗುತ್ತಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.