ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿ ಒಪ್ಪಬಾರದು: ಟಪಾಲ್ ಗಣೇಶ್
1896ರ ನೀಲನಕ್ಷೆ ಆಧರಿಸಿ ಸರ್ವೇ ಕಾರ್ಯ ಬೇಡ
Team Udayavani, Feb 11, 2021, 3:25 PM IST
ಬಳ್ಳಾರಿ: ಕರ್ನಾಟಕ-ಆಂಧ್ರ ಪ್ರದೇಶದ ಗಡಿಗುರುತುಗಳನ್ನು ಪತ್ತೆ ಹಚ್ಚಲು ಎರಡೂ ರಾಜ್ಯ ಸರ್ಕಾರಗಳು ಮುಂದೆ ಬರದಿರುವುದೇ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಪದೆ ಪದೇ 1896ರ ನೀಲನಕ್ಷೆಯನ್ನು ಆಧರಿಸಿ ಸರ್ವೇ ಕಾರ್ಯಕ್ಕೆ ಮುಂದಾಗಲು ಕಾರಣವಾಗಿದೆ ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1896ರ ನಕ್ಷೆಯನ್ನು ಸರ್ವೆ ಆಫ್ ಇಂಡಿಯಾದ ಹಿಂದಿನ ಅಧಿಕಾರಿಗಳೇ ತಿರಸ್ಕರಿಸಿದ್ದಾರೆ. ಅಂಥ ನಕ್ಷೆಯನ್ನು ಆಧರಿಸಿ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳ ತಂಡ ಅಕ್ರಮ ಗಣಿಗಾರಿಕೆಯಿಂದ ಧ್ವಂಸವಾಗಿದ್ದ ಅಂತರಾಜ್ಯ ಗಡಿ ಗುರುತುಗಳನ್ನು ಪತ್ತೆ ಹಚ್ಚಲು ಮುಂದಾಗುತ್ತಿದ್ದಾರೆ.
ಜಿಲ್ಲಾಡಳಿತ ಇದನ್ನು ವಿರೋಧಿ ಸಬೇಕು. ಆದರೆ ಅಧಿಕಾರಿಗಳು ಮೌನವಾಗಿದ್ದಾರೆ. ನಮ್ಮ ಪಾತ್ರ ಏನೂ ಇಲ್ಲ ಎನ್ನುತ್ತಿದ್ದಾರೆ.ಇದು ನಿಜಕ್ಕೂ ಆಘಾತಕಾರಿ ಸಂಗತಿ. ಜಿಲ್ಲಾಧಿಕಾರಿ ಈ ಜಿಲ್ಲೆಯ ಗಡಿಭಾಗದ ಪಾಲಕರಾಗಿರುತ್ತಾರೆ. ಅವರನ್ನೇ ಬಿಟ್ಟು ಈಗ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ವೇ ಕಾರ್ಯವು ಕಾನೂನು ರಿತ್ಯವಾಗಿ ಸಮೀಕ್ಷೆ ಮಾಡಿದಂತಾಗದು ಎಂದ ಅವರು ಜಿಲ್ಲಾಧಿಕಾರಿಗಳು ಈ ಸಮೀಕ್ಷೆ ವರದಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.
ಇದನ್ನೂ ಓದಿ :ವೀ.ವಿ. ಸಂಘದ ಸಮಿತಿಗೆ ಚುನಾವಣೆ
ಅಂತರಾಜ್ಯ ಗಡಿಗುರುತು ಸರ್ವೇ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅವರು ತಮ್ಮೊಂದಿಗೆ ಗಣಿ ಮತ್ತು ಭೂ ವಿಜ್ಞಾನ, ಸರ್ವೇ ಇಲಾಖೆ, ಅರಣ್ಯ ಇಲಾಖೆ ಉನ್ನತಾಧಿಕಾರಿಗಳನ್ನು ಕರೆದುಕೊಂಡು ಹೋಗಿ ಸರ್ವೇ ಕಾರ್ಯವನ್ನು ಪರಿಶೀಲನೆ ಮಾಡಬೇಕು. ಇದ್ಯಾವ ಕಾರ್ಯಗಳು ನಡೆಯುತ್ತಿಲ್ಲ. ಗಡಿ ಸಮೀಕ್ಷೆಗೆ ಬರುವ ಸರ್ವೆ ಆಫ್ ಇಂಡಿಯಾದ ಅ ಧಿಕಾರಿಗಳಿಗೆ ಊಟ, ಉಪಾಹಾರದ ವ್ಯವಸ್ಥೆ ಮಾಡುವುದು, ಅಗತ್ಯ ಸಿಬ್ಬಂದಿಗಳನ್ನು ಒದಗಿಸುವುದಷ್ಟೇ ನಮ್ಮ ಕೆಲಸ ಎಂದು ಜಿಲ್ಲೆ ಸರ್ವೇ ಇಲಾಖೆ ಅಧಿಕಾರಿಯೊಬ್ಬರು ತಿಳಿಸುತ್ತಾರೆ ಎಂದು ಟಪಾಲ್ ಗಣೇಶ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವು
ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ
ವಿರಾಜಪೇಟೆ: ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ!
ವಸತಿ ಭಾಗ್ಯಕ್ಕೆ ಇನ್ನು ಒಂದೇ ಯೋಜನೆ : ಪಿಎಂವೈ ಯೋಜನೆಯಡಿ ಮನೆ ನಿರ್ಮಾಣ ಗುರಿ ನಿಗದಿ
ಹಸುಗಳನ್ನೇ ಮಾರಾಟ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದರು!
MUST WATCH
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ
ಕೋಟ್ಟಾ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಬೀಡಿ ಕಾರ್ಮಿಕರ ಪ್ರತಿಭಟನೆ
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಹೊಸ ಸೇರ್ಪಡೆ
ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವು
ಇರಾನ್ ಬೆಂಬಲಿತ ಸಿರಿಯಾ ಉಗ್ರರ ತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ
ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ
ಜಾಗತಿಕ ಮಾರುಕಟ್ಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1000 ಅಂಕ ಕುಸಿತ
ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್ ರಿಜಿಸ್ಟ್ರೇಷನ್’