ನಾಗರ ಪಂಚಮಿಗೆ ತವರು ಮನೆ ಉಡುಗೊರೆ !


Team Udayavani, Aug 6, 2019, 2:07 PM IST

ballary-tdy-1

ಹರಪನಹಳ್ಳಿ: ನಾಗರ ಪಂಚಮಿ ದಿನ ಮನೆ ಮನೆಗೆ ತೆರಳಿ ಸಹೋದರಿಯೊಬ್ಬರು ತವರಿನ ಉಡುಗೊರೆ ನೀಡುವ ಕಾರ್ಯ ಮಾಡಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ದಿ| ಎಂ.ಪಿ. ಪ್ರಕಾಶ್‌ ಅವರ ಹಿರಿಯ ಪುತ್ರಿ, ಕ್ಷೇತ್ರದ ಮಾಜಿ ಶಾಸಕ ದಿ|ಎಂ.ಪಿ.ರವೀಂದ್ರ ಅವರ ಸಹೋದರಿ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್‌ ಅವರು ನಾಗರ ಪಂಚಮಿ ದಿನ ತಾಲೂಕಿನ ಹಿರೇಮೇಗಳಗೆರೆ ಗ್ರಾಮದ ಸುಮಾರು 1250ಕ್ಕೂ ಹೆಚ್ಚು ಪ್ರತಿ ಮನೆ ಮೆನಗೆ ತೆರಳಿ ಮಹಿಳೆಯರಿಗೆ ಉಂಡಿ, ಕುಪ್ಪಸ, ಅರಿಷಿಣ ಕುಂಕುಮ, ಬಳೆ ವಿತರಿಸಿದ್ದಾರೆ.

ಪಂಚಮಿ ಮಹಿಳೆಯರಿಗೆಂದೇ ರೂಪಿಸಿದ ಹಬ್ಬವಾಗಿದ್ದು, ಎರಡು ಮೂರು ದಿನ ಅವಳ ಸಡಗರ ಸಂಭ್ರಮ ಅನಿರ್ವಚನೀಯ. ರೊಟ್ಟಿ ಹಬ್ಬ, ಹಾಲು ಹಾಕಲು ಸುಮಾರು 4-5 ದಿನಗಳ ಮೊದಲೇ ಸಿದ್ದತೆ ಆರಂಭವಾಗುತ್ತದೆ. ಮನೆಯಲ್ಲಿ ಉಂಡಿ-ಚಕ್ಕುಲಿ ಮೊದಲಾದ ಭಕ್ಷಗಳ ಘಮಘಮವಿರುತ್ತದೆ. ಹೀಗಾಗಿ ಮನೆಯ ಹೆಣ್ಣು ಮಕ್ಕಳಿಗೆ ಬಿಡುವೆಂಬುದೇ ಇಲ್ಲ. ಹೊಸ ಬಟ್ಟೆ ತೊಟ್ಟು ಕೈಯಲ್ಲಿ ಪೂಜಾ ಸಾಮಗ್ರಿ, ನೈವೇದ್ಯಕ್ಕೆ ಭಕ್ಷಗಳೊಂದಿಗೆ ನಾಗರ ಕಟ್ಟೆಗೆ ಹೋಗಿ ಹಾಲು ಎರೆಯುವ ಪ್ರಕ್ರಿಯೆ ನಡೆಯುತ್ತದೆ. ಇಂತಹ ಸಂಭ್ರಮದಲ್ಲಿ ನಾನು ಭಾಗಿಯಾಗಬೇಕು ಎನ್ನುವ ಉದ್ದೇಶದಿಂದ ಎಲ್ಲ ಮನೆಗೂ ತೆರಳಿ ಉಡಿ ತುಂಬಿದ್ದೇನೆ. ಬೇರೆ ಯಾವುದೇ ಉದ್ದೇಶದಿಂದ ಈ ಕಾರ್ಯ ಮಾಡುತ್ತಿಲ್ಲ ಎಂದು ಎಂ.ಪಿ.ಲತಾ ಮಲ್ಲಿಕಾರ್ಜುನ್‌ ಇದೇ ವೇಳೆ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಎಲ್.ಹನುಮಂತಪ್ಪ, ಮಾಜಿ ಉಪಾಧ್ಯಕ್ಷ ದೊಡ್ಡಜ್ಜರ ಹನುಮಂತಪ್ಪ, ಅಂಗಡಿ ಚಂದ್ರಪ್ಪ, ಎಲ್.ಗಂಗಾಧರಪ್ಪ, ಕಂಚೀಕೆರೆ ಕೆಂಚಪ್ಪ, ತಾ.ಪಂ ಮಾಜಿ ಸದಸ್ಯೆ ಕಂಚೀಕೆರೆ ಜಯಲಕ್ಷ್ಮಿ, ರವಿ ಯುವ ಶಕ್ತಿ ಪಡೆ ಅಧ್ಯಕ್ಷ ಯಡಿಹಳ್ಳಿ ಉದಯಶಂಕರ್‌, ಕಾರ್ಯದರ್ಶಿ ಮತ್ತೂರು ಬಸವರಾಜ್‌, ಜೀಷಾನ್‌, ಇರ್ಫಾನ್‌ ಮುದಗಲ್, ಗಾಯತ್ರಮ್ಮ, ಪುರಸಭೆ ಮಾಜಿ ಸದಸ್ಯೆ ಕವಿತಾ ಸುರೇಶ್‌, ವೆಂಕಟೇಶ್‌ ಮತ್ತಿತರರು ಇದ್ದರು.

ಹರಪನಹಳ್ಳಿ ತಾಲೂಕು ಈಚೆಗೆ ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರಿಕೊಂಡಿದೆ. ಹಿರೇಮೇಗಳಗೆರೆ ಗ್ರಾಮ ದಾವಣಗೆರೆ ನಗರದಿಂದ ಕೂಗಳೆತೆ ದೂರದಲ್ಲಿದೆ. ಸುಮಾರು 180 ಕಿಮೀ ದೂರದ ಬಳ್ಳಾರಿಗೆ ಹೋಗಬೇಕು ಎಂಬ ಭಾವನೆ ಇಲ್ಲಿಯ ಜನರ ಮನಸ್ಸಿನಲ್ಲಿ ಮನೆ ಮಾಡಿದೆ. ನಾವು ಈ ಹಿಂದೆ ಕೂಡ ಬಳ್ಳಾರಿ ಜಿಲ್ಲೆಯಲ್ಲಿದ್ದು, ಇದೀಗ ಪುನಃ ಮಾತೃ ಜಿಲ್ಲೆ ಮಡಿಲು ಸೇರಿಕೊಂಡಿದ್ದೇವೆ ಎಂಬ ಭಾವನೆ ಇಲ್ಲಿಯ ಜನರಲ್ಲಿ ಮೂಡಿಸಲು ಹಾಗೂ ಸಹೋದರ ರವೀಂದ್ರನ ಸ್ಥಾನದಲ್ಲಿ ನಿಂತು ಹಿರೇಮೇಗಳಗೆರೆ ಗ್ರಾಮದಲ್ಲಿ ಮಹಿಳೆಯರಿಗೆ ತವರಿನ ಉಡುಗೊರೆ ನೀಡುವ ಮೂಲಕ ಬೆಸೆಯುವ ಕಾರ್ಯ ಮಾಡಿದ್ದೇನೆ.•ಎಂ.ಪಿ.ಲತಾ ಮಲ್ಲಿಕಾರ್ಜುನ್‌, ಕೆಪಿಸಿಸಿ ರಾಜ್ಯ ಮಹಿಳಾ ಕಾರ್ಯದರ್ಶಿ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.