ದೇವಲಾಪುರದಲ್ಲಿ ಬೋನಿಗೆ ಬಿದ್ದ 3ನೇ ನರಭಕ್ಷಕ ಚಿರತೆ
Team Udayavani, Dec 31, 2018, 12:30 AM IST
ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಕರೆಗುಡ್ಡದ ಹೊಲದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಮತ್ತೂಂದು ನರಭಕ್ಷಕ ಚಿರತೆ ಭಾನುವಾರ ಬೆಳಗಿನ ಜಾವ ಸೆರೆ ಸಿಕ್ಕಿದೆ. ಆದರೆ ತಾಲೂಕಿನ ಮೆಟ್ರಿ ಗ್ರಾಮದ ಶಿವಪುರ ಶಾಲೆ ಹಿಂಭಾಗದ ಗುಡ್ಡದಲ್ಲಿ ಕುರಿಗಳಿಗೆ ತಪ್ಪಲು ತರಲು ಹೋಗಿದ್ದ ಕುರಿಗಾಯಿಗೆ ಮತ್ತೂಂದು ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸೋಮಲಾಪುರ, ದೇವಲಾಪುರ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಬಲಿ ತೆಗೆದುಕೊಂಡ ನರಭಕ್ಷಕ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರಿದಿದೆ. ದೇವಲಾಪುರದ ಕರೆಗುಡ್ಡದ ಪಂಪಾಪತಿಯ ಹೊಲದಲ್ಲಿ ಇಟ್ಟಿದ್ದ ಬೋನಿಗೆ ಭಾನುವಾರ ಬೆಳಗಿನ ಜಾವ 5 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಡಿ.11ರಂದು ಸೋಮಲಾಪುರದಲ್ಲಿ ಬಾಲಕ ಹಾಗೂ ಡಿ.25ರಂದು ದೇವಲಾಪುರ ಗ್ರಾಮದ ಕರೆಗುಡ್ಡದ ಹತ್ತಿ ಹೊಲದಲ್ಲಿ ಬಾಲಕಿ ಬಲಿ ಪಡೆದಿತ್ತು. ಅರಣ್ಯಾಧಿಕಾರಿಗಳ ನಿರಂತರ ಕಾರ್ಯಾಚರಣೆಗೆ ಒಂದು ಹೆಣ್ಣು, ಒಂದು ಗಂಡು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಆದರೆ, ಇನ್ನೂ ಈ ಭಾಗದಲ್ಲಿ ಚಿರತೆಗಳಿವೆ ಎಂಬ ಹಿನ್ನೆಲೆ ಅರಣ್ಯ ಅ ಧಿಕಾರಿಗಳು ಆಯಾ ಸ್ಥಳಗಳಲ್ಲಿ ಬೋನುಗಳನ್ನಿರಿಸಿ ಶೋಧ ಕಾರ್ಯ ತೀವ್ರಗೊಂಡಿದ್ದರಿಂದ ಬೆಳಗಿನ ಜಾವ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ