ರಾಜೀ ಸಂಧಾನದಿಂದ ಪ್ರಕರಣ ಇತ್ಯರ್ಥ: ಖಾಸಿಂ ಚೂರಿಖಾನ್‌


Team Udayavani, Sep 9, 2018, 5:50 PM IST

bell.jpg

ಬಳ್ಳಾರಿ: ಪ್ರತಿ ಎರಡು ತಿಂಗಳಿಗೊಮ್ಮೆ ಆಯೋಜಿಸಲಾಗುವ ರಾಷ್ಟ್ರೀಯ ಲೋಕ್‌ ಅದಾಲತ್‌ ಈ ಬಾರಿಯೂ ಆಯೋಜಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಒಟ್ಟು 1206 ಪ್ರಕರಣಗಳನ್ನು ಅದಾಲತ್‌ನಲ್ಲಿ ಕೈಗೊಂಡಿದ್ದು, ಅದರಲ್ಲಿ ಶೇ.60ರಷ್ಟು ಪ್ರಕರಣಗಳು ಇತ್ಯರ್ಥವಾಗಿವೆ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶರಾದ ಖಾಸಿಂ ಚೂರಿಖಾನ್‌ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪರ್ಯಾಯ ವ್ಯಾಜ್ಯಗಳ ಭವನದಲ್ಲಿ ಶನಿವಾರ ನಡೆದ ರಾಷ್ಟ್ರೀಯ
ಲೋಕ ಅದಾಲತ್‌ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಪ್ರತಿ
2 ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕ ಅದಾಲತ್‌ ಆಯೋಜಿಸಲಾಗುತ್ತದೆ. ಅದರಂತೆ ಈ ಬಾರಿಯೂ ಹಮ್ಮಿಕೊಳ್ಳಲಾಗಿದೆ. 

ನ್ಯಾಯಾಲಯದಲ್ಲಿ ನೋಂದಣಿಯಾಗಿ ದೀರ್ಘಾವಧಿಯಿಂದ ಇತ್ಯರ್ಥವಾಗದೆ ಉಳಿದ 959 ಪ್ರಕರಣಗಳು ಮತ್ತು ನ್ಯಾಯಾಲಯಕ್ಕೆ ಬಾರದ 247 ಸೇರಿದಂತೆ ಒಟ್ಟು 1206 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಇದರಲ್ಲಿ ವಾದಿ, ಪ್ರತಿವಾದಿಗಳೊಂದಿಗೆ ಚರ್ಚಿಸಿ, ಅವರ ಒಪ್ಪಿಗೆಯ ಮೇರೆಗೆ ಸಂಧಾನದ ಮೂಲಕ ರಾಜೀಪಡಿಸಿ, ಪ್ರಕರಣವನ್ನು ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು. 

ಚೆಕ್‌ಬೌನ್ಸ್‌ ಪ್ರಕರಣ ಸೇರಿ ಬ್ಯಾಂಕ್‌ಗೆ ಸಂಬಂಧಿಸಿದ 268, ಕ್ರಿಮಿನಲ್‌ ಮೊಕದ್ದಮೆ 145, ವಿದ್ಯುತ್‌ ಕಳವು 100, ಕಾರ್ಮಿಕರಿಗೆ ಸಂಬಂಧಿಸಿದ (ಕೆಎಸ್‌ಆರ್‌ಟಿಸಿ ಇನ್ನಿತರೆ ಸಂಸ್ಥೆಗಳಲ್ಲಿ ಕಾರ್ಮಿಕರಿಗೆ ರಜೆ ಸಮಸ್ಯೆ, ಕಾರ್ಮಿಕರ ವಜಾ ಇತರೆ) ಪ್ರಕರಣಗಳು 1, ರಸ್ತೆ ಅಪಘಾತ 205, ಕೌಟುಂಬಿಕ ವಿವಾದ 11, ಸಿವಿಲ್‌ ಪ್ರಕರಣ 231, ಇತರೆ ಪ್ರಕರಣಗಳು 82 ಸೇರಿ ಒಟ್ಟು 1206 ಪ್ರಕರಣಗಳನ್ನು ಅದಾಲತ್‌ ನಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಯಿತು ಎಂದರು.

ಜನತಾ ನ್ಯಾಯಾಲಯವಿದ್ದಂತೆ: ಲೋಕ ಅದಾಲತ್‌ ಎನ್ನುವುದು ಜನತಾ ನ್ಯಾಯಾಲಯವಿದ್ದಂತೆ. ವೈಯಕ್ತಿಕ ಭಿನ್ನಮತ, ದ್ವೇಷ ಸೇರಿ ಇನ್ನಿತರೆ ಸಮಸ್ಯೆಗಳಿಂದ ಒಡೆದು ಹೋಗಿದ್ದ ಮನಸ್ಸುಗಳನ್ನು ಒಗ್ಗೂಡಿಸಿ ರಾಜೀ ಸಂಧಾನದ ಮೂಲಕ ಒಂದುಗೂಡಿಸುವುದೇ ಜನತಾ ನ್ಯಾಯಾಲಯದ ಮುಖ್ಯ ಉದ್ದೇಶವಾಗಿದೆ. ಇದರಲ್ಲಿ ಯಾವುದೇ ಶುಲ್ಕವಿಲ್ಲ.
ಉಚಿತವಾಗಿ ಇತ್ಯರ್ಥ ಪಡಿಸಲಾಗುತ್ತದೆ. 

ನ್ಯಾಯಾಲಯದಲ್ಲಿ ಗೆದ್ದವರು ಸೋತರು, ಸೋತವರು ಸತ್ತರು ಎಂಬ ಮಾತನ್ನು ಜನತಾ ನ್ಯಾಯಾಲಯ ಹುಸಿಗೊಳಿಸುತ್ತದೆ. ಬಡವರು ಸಹ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೋಂದಾಯಿಸಿದರೆ ಉಚಿತವಾಗಿ ಲೋಕ ಅದಾಲತ್‌ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಬಿ.ಹಂದ್ರಾಳ್‌, ಎರಡೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜ ಸೋಮಶೇಖರ್‌, ಕುಟುಂಬ ನ್ಯಾಯಾಧೀಶರಾದ ವಿಪುಲಾ ಪೂಜಾರಿ, 1ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ವೀಣಾ ನಾಯ್ಕರ್‌, 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಅಶ್ವಿ‌ನಿ ಕೋರೆ, 5ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ,
ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ರವಿರಾಜಶೇಖರರೆಡ್ಡಿ ಇನ್ನಿತರರಿದ್ದರು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.