ಕುರುವತ್ತಿಯಲ್ಲಿ ವೈಭವದ ರಥೋತ್ಸವ


Team Udayavani, Mar 7, 2019, 9:38 AM IST

bell-1.jpg

ಹೂವಿನಹಡಗಲಿ: ತಾಲೂಕಿನ ಸುಕ್ಷೇತ್ರ ಕುರುವತ್ತಿ ಬಸವೇಶ್ವರ ಹಾಗೂ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಬುಧವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ತುಂಗಭದ್ರಾ ನದಿ ತಟದಲ್ಲಿರುವ ಕುರುವತ್ತಿ ಸುಕ್ಷೇತ್ರದಲ್ಲಿ ನೆಲೆಸಿರುವ ಶ್ರೀಬಸವೇಶ್ವರ, ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಶಿವರಾತ್ರಿ ಆಮಾವಾಸ್ಯೆ ದಿವಸದಂದು ಸಂಭ್ರಮದಿಂದ ಜರುಗಿತು. ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು, ವಿಶೇಷ ರುದ್ರಾಭಿಷೇಕ ನಡೆದವು. 

ಈ ಸಂದರ್ಭದಲ್ಲಿ ಭಕ್ತರು ಬಸವೇಶ್ವರ, ಮಲ್ಲಿಕಾರ್ಜುನ ಸ್ವಾಮಿಗೆ ದೀಡ್‌ ನಮಸ್ಕಾರ ಸೇರಿದಂತೆ ವಿವಿಧ ರೀತಿಯ ಹರಕೆ ತೀರಿಸಿದರು. ಅಲ್ಲದೆ, ನದಿಯಿಂದ ಎತ್ತುಗಳ ಮೆರವಣಿಗೆ ಮುಂತಾದ ಧಾರ್ಮಿಕ ಪರಂಪರೆಗಳನ್ನು ನೆರವೇರಿಸಲಾಯಿತು.

ಸಾಯಂಕಾಲ ಸುಮಾರು 5.30ಕ್ಕೆ ಶ್ರೀಸ್ವಾಮಿಯ ರಥೋತ್ಸವ ಪ್ರಾರಂಭವಾಗಿದ್ದು, ರಥೋತ್ಸವಕ್ಕೂ ಮುನ್ನ ಶ್ರೀಸ್ವಾಮಿಯನ್ನು ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಸಿ ರಥೋತ್ಸವಕ್ಕೆ ಕರೆ ತರಲಾಯಿತು. ನಂತರ ಸಂಪ್ರದಾಯದಂತೆ ರಥೋತ್ಸವವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿಸಲಾಯಿತು. ಬಳಿಕ ಪಟಾಕ್ಷಿ ಹರಾಜು ಪ್ರಕ್ರಿಯೆ ಜರುಗಿತು. ಈ ಬಾರಿ ರೋಣ ಗ್ರಾಮದ ಭಕ್ತರಾದ ವೀರಪ್ಪ ಫಕ್ಕೀರಪ್ಪ ಎಂಬುವರು 2.50 ಲಕ್ಷ ರೂ.ಗೆ ಪಟಾಕ್ಷಿ ಹರಾಜು ಪಡೆದರು.

ಬಳಿಕ ರಥೋತ್ಸವಕ್ಕೆ ಚಾಲನೆ ದೊರೆಯಿತು. ಮುಂದಕ್ಕೆ ರಥೋತ್ಸವ ಸಾಗುತ್ತಿದ್ದಂತೆ ನೆರೆದಿದ್ದ ಸಹ್ರಾರು ಭಕ್ತರು ಹರ ಹರ ಮಹಾದೇವ್‌ ಎಂಬ ಜಯಘೋಷ ಕೂಗುವ ಮೂಲಕ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. 

ಬಿಗಿ ಪೊಲೀಸ್‌ ಭದ್ರತೆ: ರಥೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಥೋತ್ಸವದ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರಥ ಸಾಗುವ ಮಾರ್ಗದಲ್ಲಿ ರಥದ ಬಳಿ ಭಕ್ತರು ಧಾವಿಸದಂತೆ ಬ್ಯಾರಿಕೇಟ್‌ ನಿರ್ಮಿಸಲಾಗಿತ್ತು.

ರಥೋತ್ಸವದಲ್ಲಿ ತಹಶೀಲ್ದಾರ್‌ ಕೆ. ರಾಘವೇಂದ್ರರಾವ್‌, ತಾಪಂ ಇಒ ಯು.ಎಚ್‌. ಸೋಮಶೇಖರ್‌, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ರಾಜ್ಯ ಬೇರೆ ಬೇರೆ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.