ಹಳ್ಳಿಗಳಲ್ಲಿದೆ ಹೃದಯ ಶ್ರೀಮಂತಿಕೆ


Team Udayavani, Oct 8, 2018, 4:17 PM IST

bell-1.jpg

ಬಳ್ಳಾರಿ: ಗ್ರಾಮೀಣ ಪ್ರದೇಶಗಳಲ್ಲಿ ಹೃದಯ ಶ್ರೀಮಂತಿಕೆ ಇರುತ್ತದೆ ಎಂದು ನಗರದ ಕೌಲ್‌ಬಜಾರ್‌ ಠಾಣೆ ಪಿಎಸ್‌ಐ ವಸಂತಕುಮಾರ್‌ ಹೇಳಿದರು.

ತಾಲೂಕಿನ ಸಿರಿವಾರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಶಿವಕುಮಾರ ಸ್ವಾಮಿ ಯುವಕ ಸಂಘ, ಬಸವೇಶ್ವರ ಯುವಕ ಸಂಘ, ಗುರು ಪುಟ್ಟರಾಜ ಯುವಕ ಸಂಘದ ಸಹಯೋಗದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಸಾಧಕರಿಗೆ ಮತ್ತು ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುವೆ. ಅಂದಾಜು 48 ಗ್ರಾಮಗಳು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಬರುತ್ತವೆ. ಈ ಉಭಯ ಗ್ರಾಮಗಳ ಜನರು ಪೊಲೀಸ್‌ ಠಾಣೆಗೆ ಬಂದರೆ, ತಮ್ಮ ಕಾರ್ಯದ ನಿಮಿತ್ತ ಯಾವತ್ತೂ ಒತ್ತಡ ಹೇರುವ ಮನೋಭಾವ ಹೊಂದಿರಲಿಲ್ಲ. ಅಂತಹ ಸೌಮ್ಯ ಸ್ವಭಾದ ಜನರು ಇಲ್ಲಿ ನೆಲೆಸಿದ್ದಾರೆ ಎಂದರು.

ಯುವಜನರು ಭಾನುವಾರ ಬಂತೆಂದರೆ ಮದ್ಯದ ಅಮಲಿನಲ್ಲಿ ತೇಲಾಡುವ ದೃಶ್ಯಗಳನ್ನು ನಾವು ನೋಡಿದ್ದೇವೆ. ಆದರೆ, ಈ ಗ್ರಾಮಗಳ ಯುವಕರು ಅತ್ಯುತ್ತಮ ಸೇವಕರಾಗಿ ಸಾಧಕರನ್ನು ಸನ್ಮಾನಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು. 

ಬಹುತೇಕ ಗ್ರಾಮಗಳಲ್ಲಿ ಹೃದಯ ವೈಶಾಲತೆ ಇರುತ್ತದೆ. ಇಲ್ಲಿಯ ಪ್ರೀತಿ, ಅಕ್ಕರೆಯ ಮಾತುಗಳು ಎಂತಹ ಶ್ರೀಮಂತಿಕೆಯನ್ನೂ ಮಂತ್ರ ಮುಗ್ಧವನ್ನಾಗಿಸುತ್ತದೆ. ಅಂತಹ ವಾತಾವರಣ ಈ ಗ್ರಾಮಗಳಲ್ಲಿ ನೆಲೆಸಿದೆ ಎಂದರು.

ಶ್ರೀಲಂಕಾ ದೇಶದಲ್ಲಿ ನಡೆದ ಅಂಗವಿಕಲರ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆಗೈದ ಗ್ರಾಮದ ಅಂಗವಿಕಲ ಮಡಿವಾಳರ ತಿಪ್ಪೇಸ್ವಾಮಿ ಅವರಿಗೆ 5,000 ನಗದು ನೀಡಿ
ಸನ್ಮಾನಿಸಲಾಯಿತು.

ಸಮಾಜ ಸೇವಕರಾದ ಪ್ರೊ| ಕೋಟೆ ನಾಗನಗೌಡ, ಎಸ್‌ಡಿಎಂ ಶಿವಕುಮಾರ ಸ್ವಾಮಿ, ನಾಟಕಕಾರ ಜಿ.ಎನ್‌. ಅರಳಿ, ಹಾಸ್ಯ ಕಲಾವಿದ, ಶಿಕ್ಷಕ ಎ. ಯರಿಸ್ವಾಮಿ, ಎಚ್‌. ಎಂ. ದಯಾನಂದ ಸ್ವಾಮಿ, ಬಸವೇಶ್ವರ ದೇಗುಲ ಜೀರ್ಣೋದ್ಧಾರಕರಾದ ಅಂಗಡಿ ನೀಲಮ್ಮ, ಭಜನಾ ಮತ್ತು ಬಯಲಾಟ ಕಲಾವಿದ ಕೋಟೆ ಪಂಪನಗೌಡ, ಸಿದ್ದಬಸಪ್ಪ
ಜಗಣ್ಣನವರ್‌, ಎ.ಕೆ. ಮರೆಪ್ಪ, ಪಲ್ಲೇದ ಸಹನಾ, ಶೀಧರಗಡ್ಡೆ ಸಿದ್ದಬಸಪ್ಪ, ಕಪ್ಪಗಲ್ಲು ಚಂದ್ರಶೇಖರ ಆಚಾರಿ, ನರೇಶ ಸೋನಿ ಇತರರನ್ನು ಸನ್ಮಾನಿಸಲಾಯಿತು.

ಗ್ರಾಮದ ಚನ್ನಮಲ್ಲಯ್ಯ ತಾತ, ಪಂಪಯ್ಯ ತಾತ, ಬಿಜೆಪಿ ರೈತಮೋರ್ಚಾ ತಾಲೂಕು ಘಟಕದ ಅಧ್ಯಕ್ಷ ಮೂಲಿಮನೆ
ಶಿವರುದ್ರಪ್ಪ, ಮುಖಂಡರಾದ ಮೆಹತಾಬ್‌, ಬಸವರಾಜ, ಡಿ.ಷಣ್ಮುಖಪ್ಪ, ಕೋಟೆ ಬದ್ರಿನಾಥ, ಕೆ. ಮಲ್ಲನಗೌಡ, ಬಳ್ಳಾರಿ
ಗ್ರಾಮೀಣ ಠಾಣೆ ಎಎಸ್‌ಐ ಮಾರೆಣ್ಣ ಇದ್ದರು. 

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.