ಬಸ್ಪಾಸ್ಗಾಗಿ ಅಂಗವಿಕಲರ ವಿನೂತನ ಪ್ರತಿಭಟನೆ
Team Udayavani, Jan 24, 2017, 12:57 PM IST
ಹೊಸಪೇಟೆ: ವಿಕಲಚೇತನರಿಗೆ ನೂತನ ಬಸ್ ಪಾಸ್ ವಿತರಣೆ ಹಾಗೂ ನವೀಕರಣಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವ ಕ್ರಮ ಖಂಡಿಸಿ ತಾಲೂಕು ವಿಕಲಚೇತನರ ಸಂಘದ ಪದಾಧಿಕಾರಿಗಳು, ನೂರಾರು ವಿಕಲಚೇತನರು ತಲೆಯ ಮೇಲೆ ಕಲ್ಲು ಇಟ್ಟುಕೊಂಡು ವಿನೂತನ ಪ್ರತಿಭಟನೆ ನಡೆಸಿದರು.
ಇಲ್ಲಿನ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿಕಲಚೇತನರು, ನೂತನ ಬಸ್ ಪಾಸ್ ಹಾಗೂ ನವೀಕರಣಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿರುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. 2008ರಲ್ಲಿ ಅಂದಿನ ಸರ್ಕಾರ ತಾಲೂಕು ವೈದ್ಯಕೀಯ ಮಂಡಳಿ ರಚನೆ ಮಾಡುವ ಮೂಲಕ ತಜ್ಞ ವೈದ್ಯರಿಂದ ಗುರುತಿನ ಚೀಟಿಯನ್ನು ಪಡೆಯುವಂತೆ ಆದೇಶಸಿತ್ತು.
ಬಸ್ ಪಾಸ್ ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗಾಗಿ ವಿಕಲಚೇತನರು, ಈತನಕ ವೈದ್ಯಕೀಯ ಮಂಡಳಿಯಿಂದ ಕೊಡ ಮಾಡುವ ಪ್ರಮಾಣ ಪತ್ರವನ್ನು ನೀಡುತ್ತಾ ಬಂದಿದ್ದಾರೆ. ಆದರೆ, ಸಾರಿಗೆ ಸಂಸ್ಥೆ, ಹೊಸ ಪಾಸ್ ವಿತರಣೆ ಹಾಗೂ ನವೀಕರಣಕ್ಕಾಗಿ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಕಲಚೇತನರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದ್ದಾರೆ. ಕೂಡಲೇ ಗುರುತಿನ ಚೀಟಿ ಕಡ್ಡಾಯ ಮಾಡಿರುವ ಕ್ರಮ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಎನ್.ವೆಂಕಟೇಶ, ಕೆ.ಜಿ.ವೆಂಕಟೇಶ, ಜಿ.ಮುಕ್ಕಣ್ಣ, ಜಿ.ಅಂಜನಿ, ಕೆ.ರಾಜಸಾಬ್, ಮೇರಿ, ಶಿವಗಂಗಮ್ಮ, ನಾಗೇಂದ್ರ, ಹುಲಗಪ್ಪ, ಗೋವಿಂದ ಪೂಜಾರ್, ಚೆನ್ನಬಸವ, ತಂಗರಾಜು, ಪರಶುರಾಮ, ಪಾಂಡುನಾಯಕ್, ಮೆಹಬೂಬ್ ಬಾಷಾ, ಶೇಕ್ ಮೆಹಬೂಬು ಬಾಷಾ, ವಿ.ವೆಂಕಟೇಶ, ನಾಗರಾಜ, ರಾಜಶೇಖರ, ದಾದು, ಅರುಣಕುಮಾರ್, ಮೌನೇಶ, ಮಹಮ್ಮದ್, ಅಂಜು ತಾಯಮ್ಮ, ರಾಮಾಂಜನಿ, ಚಾಂದ್ಬೀ, ಮಂಜುಳಾ ಹಾಗೂ ಖಾಜಬನಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ
Sandalwood: ಈತ ಊರ ಬೆಳೆಸೋ ಜಂಟಲ್ಮ್ಯಾನ್; ರಾಮನ ಅವತಾರ ಬಗ್ಗೆ ರಿಷಿ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ